Homeಮುಖಪುಟಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

"ನನ್ನ ಪತಿಗೆ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ಅವರು ನೀರಿಗಾಗಿ ಕೈ ಸನ್ನೆ ಮಾಡುತ್ತಿದ್ದರು, ಆದರೆ ಯಾರೂ ಅವರಿಗೆ ನೀರನ್ನೂ ನೀಡಲಿಲ್ಲ"

- Advertisement -
- Advertisement -

ಬಿಹಾರದ ಭಾಗಲ್ಪುರದ ಖಾಸಗಿ ಆಸ್ಪತ್ರೆಯಲ್ಲಿ ತನ್ನ ಗಂಡನಿಗೆ ಕೊರೊನಾ ಚಿಕಿತ್ಸೆಗಾಗಿ ದಾಖಲಿಸಿದ್ದ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಜೊತೆಗೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ವಿರುದ್ಧ ನಿರ್ಲಕ್ಷ್ಯದಿಂದ ತನ್ನ ಪತಿ ಸಾವನ್ನಪ್ಪಿದ್ದಾರೆ ಎಂದು ದೂಷಿಸಿದ್ದಾರೆ.

ಮಹಿಳೆ ಆರೋಪಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗ್ಲೋಕಲ್ ಆಸ್ಪತ್ರೆಯ ಸಿಬ್ಬಂದಿಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಜೊತೆಗೆ ಮಾಯಗಂಜ್ ಮತ್ತು ಪಾಟ್ನಾದಲ್ಲಿ ವೈದ್ಯರ ನಿರ್ಲಕ್ಷ್ಯ ತನ್ನ ಪತಿಯ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಮಹಿಳೆಯ  12 ನಿಮಿಷಗಳ ವಿಡಿಯೋ ಮನವಿಯಲ್ಲಿ, ಮೂರು ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿ ತನ್ನ ಪತಿಗೆ ಚಿಕಿತ್ಸೆ ನೀಡಲು ನಿರಾಕರಿಸಿದರು, ಅವರ ಕೊಳಕು ಹಾಸಿಗೆಯನ್ನು ಬದಲಾಯಿಸಲು ಸಹ ಸಿಬ್ಬಂದಿ ಸಹಕರಿಸಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್ ಪೂರೈಕೆ ವ್ಯತ್ಯಯವಾಗಿ ಆಂಧ್ರದಲ್ಲಿ 11 ಕೊರೊನಾ ರೋಗಿಗಳ ಸಾವು

ತನ್ನ ಗಂಡನನ್ನು ಮೊದಲು ದಾಖಲಿಸಿದ ಭಾಗಲ್ಪುರದ ಗ್ಲೋಕಲ್ ಆಸ್ಪತ್ರೆಯ ಸಿಬ್ಬಂದಿ ರೆಮ್‌ಡೆಸಿವಿರ್‌ ಅರ್ಧ ಬಾಟಲಿಯನ್ನು ವ್ಯರ್ಥ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

“ನಾವು ಆರ್‌ಟಿ-ಪಿಸಿಆರ್ ಪರೀಕ್ಷಾ ಫಲಿತಾಂಶಗಳಿಗಾಗಿ ಕಾಯುತ್ತಿರುವಾಗ, ನೋಯ್ಡಾ ವೈದ್ಯರು ಸಿಟಿ ಸ್ಕ್ಯಾನ್ ಮಾಡಿಸಲು ಹೇಳಿದರು. ನಾವು ಒಪ್ಪಿಕೊಂಡೆವು. ನನ್ನ ತಾಯಿ ಕೂಡ ಅಸ್ವಸ್ಥರಾಗಿದ್ದರು, ಆಸ್ಪತ್ರೆಯಲ್ಲಿ ತುಂಬಾ ನಿರ್ಲಕ್ಷ್ಯವಿತ್ತು. ವೈದ್ಯರು ಹಾಗೆ ಬಂದು ಹೋಗುತ್ತಿದ್ದರು. ಸಿಬ್ಬಂದಿ ಇರುತ್ತಿರಲಿಲ್ಲ. ಔಷಧಿಗಳನ್ನು ನೀಡಲು ನಿರಾಕರಿಸುತ್ತಿದ್ದರು. ನನ್ನ ತಾಯಿ ಸ್ಥಿತಿ ಪರವಾಗಿರಲಿಲ್ಲ. ಆದರೆ ನನ್ನ ಪತಿಗೆ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ಅವರು ನೀರಿಗಾಗಿ ಕೈ ಸನ್ನೆ ಮಾಡುತ್ತಿದ್ದರು, ಆದರೆ ಯಾರೂ ಅವರಿಗೆ ನೀರನ್ನೂ ನೀಡಲಿಲ್ಲ” ಎಂದು ಸಂತ್ರಸ್ತೆ ವಿಡಿಯೋದಲ್ಲಿ ಹೇಳಿದ್ದಾರೆ.

“ಗ್ಲೋಕಲ್ ಆಸ್ಪತ್ರೆಯಲ್ಲಿ ಅಟೆಂಡೆಂಟ್ ಆಗಿದ್ದ ಜ್ಯೋತಿ ಕುಮಾರ್ ಎಂಬ ವ್ಯಕ್ತಿಯ ಬಳಿ ನನ್ನ ಪತಿಗೆ ಕ್ಲೀನ್ ಬೆಡ್‌ಶೀಟ್‌ಗಳನ್ನು ನೀಡಲು ಸಹಾಯ ಮಾಡಬೇಕೆಂದು ವಿನಂತಿಸಿದೆ. ಸಹಾಯ ಮಾಡುತ್ತೇನೆಂದು ಹೇಳಿದ ಆ ವ್ಯಕ್ತಿ ನನ್ನ ದುಪ್ಪಟ್ಟಾ ಎಳೆದು, ಸೊಂಟಕ್ಕೆ ಕೈ ಹಾಕಿ ನಗುತ್ತಿದ್ದರು. ನಾನು ಯಾರಿಗೂ ಹೇಳುವ ಸ್ಥಿತಿಯಲ್ಲಿ ಇರಲಿಲ್ಲ. ಏಕೆಂದರೆ, ನನ್ನ ಪತಿ, ನನ್ನ ತಾಯಿ ಇಲ್ಲಿ ದಾಖಲಾಗಿದ್ದರು” ಎಂದಿದ್ದಾರೆ.

ಇದನ್ನೂ ಓದಿ: ಕೇರಳಕ್ಕೆ ಆಕ್ಸಿಜನ್ ಅವಶ್ಯಕತೆ ಇದೆ, ಬೇರೆ ರಾಜ್ಯಗಳಿಗೆ ನೀಡಲಾಗದು- ಪಿಣರಾಯಿ ವಿಜಯನ್

ಮಹಿಳೆ ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಸಲು ಸ್ಥಳೀಯ ಸರ್ಕಾರಿ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ ನಂತರ, ಗ್ಲೋಕಲ್ ಆಸ್ಪತ್ರೆ ಆರೋಪಿ ನೌಕರನನ್ನು ಅಮಾನತುಗೊಳಿಸಲಾಗಿದ್ದು, ತನಿಖಾ ಸಮಿತಿಯನ್ನು ರಚಿಸಲಾಗಿದೆ.

ಮಾಯಾಗಂಜ್‌ನ ಭಾಗಲ್ಪುರ್ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರು ತನ್ನ ಮತ್ತು ತನ್ನ ಸಹೋದರಿ ಹಲವು ಬಾರಿ ಮನವಿ ಮಾಡಿದರು ನನ್ನ ಗಂಡನಿಗೆ ಆಮ್ಲಜನಕವನ್ನು ನೀಡಲು ನಿರಾಕರಿಸಿದರು ಎಂದಿದ್ದಾರೆ.

ಪಾಟ್ನಾದಲ್ಲಿ (ನಗರದ ರಾಜೇಶ್ವರ ಆಸ್ಪತ್ರೆಯಲ್ಲಿ), ಆಕ್ಸಿಜನ್ ಮಟ್ಟವು ಅಪಾಯಕಾರಿಯಾಗಿ ಕಡಿಮೆಯಾಗಿದ್ದರೂ ಸಹ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಆಮ್ಲಜನಕ ಸ್ಥಿರವಾದ ನಂತರ, ಸಿಬ್ಬಂದಿ ಅವರಿಗೆ ಆಮ್ಲಜನಕ ಸರಬರಾಜನ್ನು ಕಡಿತಗೊಳಿಸಿ, ಬ್ಲಾಕ್ ಮಾರ್ಕೆಟ್‌ಯಿಂದ ಆಕ್ಸಿಜನ್ ಸಿಲಿಂಡರ್‌ ಖರೀದಿಸಲು ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ್ದರು ಎಂದು ಹೇಳಿದ್ದಾರೆ.

“ಪ್ರಾಥಮಿಕ ವಿಚಾರಣೆಯಲ್ಲಿ ಮಹಿಳೆಯ ಆರೋಪವನ್ನು ಬೆಂಬಲಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ಆದರೆ ಆರೋಪಗಳು ನಿಜವೆಂದು ಸಾಬೀತಾದರೆ, ಖಂಡಿತವಾಗಿಯೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಆಸ್ಪತ್ರೆ ತಿಳಿಸಿದೆ.


ಇದನ್ನೂ ಓದಿ: ಗಂಗೆಯಲ್ಲಿ ನಿಲ್ಲದ ಮೃತದೇಹಗಳ ಹರಿವು, ಜಲಶಕ್ತಿ ಸಚಿವರಿಂದ ತನಿಖೆಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...