Homeಮುಖಪುಟಪಶ್ಚಿಮ ಬಂಗಾಳದ ರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲು

ಪಶ್ಚಿಮ ಬಂಗಾಳದ ರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲು

- Advertisement -
- Advertisement -

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು,  ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ಲೈಂಗಿಕ ಕಿರುಕುಳದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಹಿಳೆ 2019ರಿಂದ ರಾಜಭವನದಲ್ಲಿ ತಾತ್ಕಾಲಿಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ.  ರಾಜ್ಯಪಾಲರನ್ನು ತನ್ನ ಬಡ್ತಿ ಕುರಿತು ಚರ್ಚಿಸಲು ಭೇಟಿಯಾದಾಗ ಅವರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆ ಈ ಬಗ್ಗೆ ಹರೇ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮೊದಲು ರಾಜಭವನ ಪೊಲೀಸ್ ಔಟ್‌ಪೋಸ್ಟ್‌ಗೆ ದೂರು ನೀಡಿದ್ದಳು ಎಂದು ಮೂಲಗಳು ತಿಳಿಸಿವೆ. ದೂರನ್ನು ಸ್ವೀಕರಿಸಿದ ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ವಿಭಾಗದ ಉಪ ಆಯುಕ್ತೆ ಇಂದಿರಾ ಮುಖರ್ಜಿ, ನಾವು ದೂರು ಸ್ವೀಕರಿಸಿದ್ದೇವೆ ಮತ್ತು ತನಿಖೆ ನಡೆಸುತ್ತಿದ್ದೇವೆ. ಕಾನೂನು ತಜ್ಞರೊಂದಿಗೆ ಈ ವಿಷಯದ ಬಗ್ಗೆ ಸಮಾಲೋಚಿಸುತ್ತಿದ್ದೇವೆ. ಮಹಿಳೆಯ ಆರೋಪದ ಪ್ರಕಾರ, ರಾಜಭವನದಲ್ಲಿ ಆಕೆಗೆ ಕಿರುಕುಳ ನೀಡಲಾಗಿದೆ ಎಂದು ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯದ ಆರೋಪದ ಬೆನ್ನಲ್ಲಿ ಬಂಗಾಳದ ರಾಜ್ಯಪಾಲ ಆನಂದ ಬೋಸ್ ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಸತ್ಯಕ್ಕೆ ಜಯ ಸಿಗುತ್ತದೆ. ಈ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ. ಯಾರಾದರೂ ನನ್ನನ್ನು ನಿಂದಿಸುವ ಮೂಲಕ ಚುನಾವಣಾ ಲಾಭಗಳನ್ನು ಪಡೆಯಲು ಬಯಸಿದರೆ, ದೇವರು ಅವರನ್ನು ಆಶೀರ್ವದಿಸಲಿ. ಆದರೆ ಭ್ರಷ್ಟಾಚಾರ ಮತ್ತು ಬಂಗಾಳದಲ್ಲಿನ ಹಿಂಸಾಚಾರದ ವಿರುದ್ಧ ನನ್ನ ಹೋರಾಟವನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಜ್ಯಪಾಲರ ನಿವಾಸದ ಮೂಲಗಳ ಪ್ರಕಾರ, ಮಹಿಳಾ ಉದ್ಯೋಗಿ, ರಾಜಭವನದ ಉದ್ಯೋಗಿಯೂ ಆಗಿರುವ ತನ್ನ ಗೆಳೆಯನ ಸಹಾಯದಿಂದ ಜನರು ಭಾರತದ ಚುನಾವಣಾ ಆಯೋಗಕ್ಕೆ ಕಳುಹಿಸುತ್ತಿದ್ದ ದೂರುಗಳನ್ನು ತಡೆಯುತ್ತಿದ್ದರು. ಈ ಬಗ್ಗೆ ಮಹಿಳೆಗೆ ತರಾಟೆಗೆ ತೆಗೆದುಕೊಂಡಾಗ ಅವರು ಹೊರಗೆ ಹೋಗಿ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದಾರೆ ಎಂದು ಹೇಳಿದೆ.

ಸಾಂವಿಧಾನಿಕ ತಜ್ಞರ ಪ್ರಕಾರ, ರಾಜ್ಯಪಾಲರು ಅಧಿಕಾರದಲ್ಲಿರುವಾಗ ಸಂವಿಧಾನದ 361ನೇ ವಿಧಿಯ ಅಡಿಯಲ್ಲಿ ಎಲ್ಲಾ ಕ್ರಿಮಿನಲ್ ಮೊಕದ್ದಮೆಗಳಿಂದ ವಿನಾಯಿತಿ ಪಡೆಯುತ್ತಾರೆ. ಈ ಘಟನೆಯು ಪ.ಬಂಗಾಳದಲ್ಲಿ ರಾಜಕೀಯ ಸಂಚಲನವನ್ನು ಉಂಟುಮಾಡಿದೆ.

ಆರೋಪಗಳನ್ನು ಹೊರಿಸಿದ ಮಹಿಳೆಯನ್ನು ಬೋಸ್ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಟಿಎಂಸಿಯ ಹಿರಿಯ ನಾಯಕರು ಇಂದು ಸಂಜೆ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ತಿಳಿಸಿದ್ದಾರೆ. ಗವರ್ನರ್ ಲೈಂಗಿಕ ಕಿರುಕುಳದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ನಾವು ಯಾವ ರೀತಿಯ ರಾಜ್ಯದಲ್ಲಿ ಇದ್ದೇವೆ ಎಂದು ರಾಜ್ಯ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರು ಹೇಳಿದ್ದಾರೆ.

ಬಂಗಾಳ ಗವರ್ನರ್ ಸಿವಿ ಆನಂದ ಬೋಸ್ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಎಷ್ಟು ಭಯಾನಕವಾಗಿದೆ. ರಾಜ್ಯಪಾಲರನ್ನು ಭೇಟಿಗೆ ಹೋದಾಗ ತನಗೆ ಕಿರುಕುಳ ನೀಡಲಾಯಿತು ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ ಎಂದು ಟಿಎಂಸಿ ರಾಜ್ಯಸಭಾ ಸಂಸದೆ ಸಾಗರಿಕಾ ಘೋಸ್ ಹೇಳಿದ್ದಾರೆ .

ಈ ಕುರಿತು ಬಿಜೆಪಿ ಪ್ರತಿಕ್ರಿಯಿಸಿದ್ದು, ಇದು ಟಿಎಂಸಿಯ ಪಿತೂರಿಯೇ ಅಥವಾ ಇದರಲ್ಲಿ ಸತ್ಯಾಂಶವಿದೆಯೇ ಎಂಬುದನ್ನು ನೋಡಬೇಕು. ಎಸ್‌ಎಸ್‌ಸಿ ಹಗರಣದ ಹಿನ್ನೆಲೆ ಟಿಎಂಸಿ ರಾಜಕೀಯವಾಗಿ ಮೂಲೆಗುಂಪಾಗಿದೆ ಮತ್ತು ಉಸಿರಾಟಕ್ಕಾಗಿ ಈಗ ಜಾಗವನ್ನು ಹುಡುಕುತ್ತಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಆದ್ದರಿಂದ ಇದು ಟಿಎಂಸಿಯ ಪಿತೂರಿಯೇ ಅಥವಾ ಅದರಲ್ಲಿ ಏನಾದರೂ ಸತ್ಯವಿದೆಯೇ ಎಂದು ನೋಡಬೇಕಾಗಿದೆ. ಇದು ಪಿತೂರಿ ಎಂದಾದರೆ ಅಪರಾಧಿಗಳಿಗೆ ಶಿಕ್ಷೆಯಾಗಬೇಕು, ನಿಜವೆಂದು ಕಂಡುಬಂದರೆ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.

ಇದನ್ನು ಓದಿ: ನಿರೀಕ್ಷಣಾ ಜಾಮೀನು ಕೋರಿ ಹೆಚ್‌.ಡಿ ರೇವಣ್ಣ ಅರ್ಜಿ: ಎಸ್‌ಐಟಿಗೆ ಕೋರ್ಟ್‌ ನೋಟಿಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...