Homeಮುಖಪುಟ2023 ರಲ್ಲಿ 'ಕೊಲೆಯಾದ' ಮಹಿಳೆ ಜೀವಂತವಾಗಿ ಮನೆಗೆ ವಾಪಾಸ್; ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಾಲ್ವರು ಇನ್ನೂ ಜೈಲಿನಲ್ಲಿ!

2023 ರಲ್ಲಿ ‘ಕೊಲೆಯಾದ’ ಮಹಿಳೆ ಜೀವಂತವಾಗಿ ಮನೆಗೆ ವಾಪಾಸ್; ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಾಲ್ವರು ಇನ್ನೂ ಜೈಲಿನಲ್ಲಿ!

- Advertisement -
- Advertisement -

2023 ರಲ್ಲಿ ಕೊಲೆಯಾಗಿದ್ದಾರೆ ಎಂದು ನಂಬಲಾದ ಮಧ್ಯಪ್ರದೇಶದ ಮಹಿಳೆಯೊಬ್ಬರು ಜೀವಂತವಾಗಿ ಹಿಂತಿರುಗಿ ಬಂದಿರುವ ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಅದಾಗ್ಯೂ, ಅವರನ್ನು ಕೊಲೆ ಮಾಡಿದ್ದಾರೆ ಎಂದು ಶಿಕ್ಷೆಗೆ ಒಳಗಾದ ಆರೋಪಿಗಳು ಇನ್ನೂ ಜೈಲಿನಲ್ಲಿದ್ದಾರೆ ಎಂದು TNIE ವರದಿ ಮಾಡಿದೆ. 2023 ರಲ್ಲಿ ‘ಕೊಲೆಯಾದ’

ಮಹಿಳೆಯು ಜೀವಂತವಾಗಿ ಮರಳಿದ್ದು ಅವರ ಕುಟುಂಬ ಮತ್ತು ಸ್ನೇಹಿತರಲ್ಲಿ ಆಘಾತ ಮತ್ತು ಆಶ್ಚರ್ಯವನ್ನುಂಟುಮಾಡಿದೆ. 35 ವರ್ಷದ ಲಲಿತಾ ಬಾಯಿ ಮಂದ್ಸೌರ್ ಜಿಲ್ಲೆಯ ಮನೆಗೆ ಹಿಂದಿರುಗಿದ ತಕ್ಷಣ, ಅವರ ತಂದೆ ಆಕೆಯನ್ನು ಗಾಂಧಿ ಸಾಗರ್ ಪೊಲೀಸ್ ಠಾಣೆಗೆ ಕರೆದೊಯ್ದು ಈ ಬಗ್ಗೆ ತಿಳಿಸಿದ್ದಾರೆ.

ಅದೇ ವೇಳೆ, ಲಲಿತಾ ಬಾಯಿ ಅವರ “ಕೊಲೆ” ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆಗೊಳಗಾದ ನಾಲ್ವರು ವ್ಯಕ್ತಿಗಳು ಜೈಲಿನಲ್ಲಿ ತಮ್ಮ ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ವರದಿ ಹೇಳಿದೆ. ಲಲಿತಾ ತನ್ನ ಗುರುತನ್ನು ದೃಢೀಕರಿಸಲು ತನ್ನ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಸೇರಿದಂತೆ ದಾಖಲೆಗಳನ್ನು ಹಾಜರುಪಡಿಸಿದ್ದಾರೆ. 2023  ರಲ್ಲಿ ‘ಕೊಲೆಯಾದ’

ಕುಟುಂಬವು ತನ್ನ ಮಗಳ ವಿರೂಪಗೊಂಡ ದೇಹದ ಅಂತ್ಯಕ್ರಿಯೆಯನ್ನು ಅವರ ಕೈಯಲ್ಲಿನ ಹಚ್ಚೆ ಮತ್ತು ಕಾಲಿಗೆ ಕಟ್ಟಲಾದ ಕಪ್ಪು ದಾರ ಸೇರಿದಂತೆ ದೈಹಿಕ ಗುರುತುಗಳ ಸಹಾಯದಿಂದ ನಡೆಸಿತ್ತು ಎಂದು ಲಲಿತಾ ಅವರ ತಂದೆಯನ್ನು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಥಾಂಡ್ಲಾ ಪೊಲೀಸರು ಮಹಿಳೆಯ ಮೃತದೇಹ ಸಿಕ್ಕ ಗಾಂಧಿ ಸಾಗರ್‌ನಿಂದ 30 ಕಿ.ಮೀ ದೂರದಲ್ಲಿರುವ ಭನ್‌ಪುರದ ಶಾರುಖ್, ಇಮ್ರಾನ್, ಸೋನು ಮತ್ತು ಎಜಾಜ್ ಎಂಬ ನಾಲ್ವರು ಶಂಕಿತರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

“ಅವರು ಅಪರಾಧ ಮಾಡಿದ್ದಾರೆಂದು ಸಾಬೀತುಪಡಿಸಲು ನಮಗೆ ಸಾಕಷ್ಟು ಪುರಾವೆಗಳಿವೆ. ಆದ್ದರಿಂದ ಆರೋಪಪಟ್ಟಿ ಸಲ್ಲಿಸಲಾಗಿದೆ. ವಿಷಯವು ಈಗ ನ್ಯಾಯಾಲಯದಲ್ಲಿದೆ ಮತ್ತು ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ತನ್ನ ಬಗ್ಗೆ ಮಾಹಿತಿ ನೀಡಿರುವ ಲಲಿತಾ, ಶಾರುಖ್ ಜೊತೆ ತಾನು ಸ್ವಇಚ್ಛೆಯಿಂದ ಭಾನ್‌ಪುರಕ್ಕೆ ಹೋಗಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ಕೇವಲ ಎರಡು ದಿನಗಳ ನಂತರ, ಅವನು ತನ್ನನ್ನು ಶಾರುಖ್ ಎಂಬ ಇನ್ನೊಬ್ಬ ವ್ಯಕ್ತಿಗೆ 5 ಲಕ್ಷ ರೂ.ಗೆ ಮಾರಾಟ ಮಾಡಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಮಹಿಳೆ ಕೋಟಾದಲ್ಲಿ ಎರಡನೇ ಶಾರುಖ್ ಜೊತೆ 18 ತಿಂಗಳು ವಾಸಿಸುತ್ತಿದ್ದಳು. ಯಾವಾಗಲೂ ತಪ್ಪಿಸಿಕೊಳ್ಳಲು ಅವಕಾಶವನ್ನು ಹುಡುಕುತ್ತಿದ್ದ ಅವರು ತಪ್ಪಿಸಿಕೊಳ್ಳಲು ಅವಕಾಶ ಸಿಕ್ಕಾಗ ಮನೆಗೆ ಮರಳಿದ್ದಾರೆ.

ಮಹಿಳೆಯ ‘ಕೊಲೆ’ ಪ್ರಕರಣದಲ್ಲಿ ಜೈಲಿನಲ್ಲಿರುವ ನಾಲ್ವರ ಬಗ್ಗೆ ಮಾತನಾಡಿರುವ ಪೊಲೀಸರು, “ನಾವು ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇವೆ. ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ. ಜೊತೆಗೆ ಲಲಿತಾ ಅವರ ಕುಟುಂಬವು ಯಾರ ಶವವನ್ನು ಅಂತ್ಯಕ್ರಿಯೆ ಮಾಡಿದೆ ಎಂಬ ವಿಚಾರವನ್ನು ಇದೀಗ ತನಿಖೆ ಮಾಡುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...