Homeಮುಖಪುಟ2023 ರಲ್ಲಿ 'ಕೊಲೆಯಾದ' ಮಹಿಳೆ ಜೀವಂತವಾಗಿ ಮನೆಗೆ ವಾಪಾಸ್; ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಾಲ್ವರು ಇನ್ನೂ ಜೈಲಿನಲ್ಲಿ!

2023 ರಲ್ಲಿ ‘ಕೊಲೆಯಾದ’ ಮಹಿಳೆ ಜೀವಂತವಾಗಿ ಮನೆಗೆ ವಾಪಾಸ್; ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಾಲ್ವರು ಇನ್ನೂ ಜೈಲಿನಲ್ಲಿ!

- Advertisement -
- Advertisement -

2023 ರಲ್ಲಿ ಕೊಲೆಯಾಗಿದ್ದಾರೆ ಎಂದು ನಂಬಲಾದ ಮಧ್ಯಪ್ರದೇಶದ ಮಹಿಳೆಯೊಬ್ಬರು ಜೀವಂತವಾಗಿ ಹಿಂತಿರುಗಿ ಬಂದಿರುವ ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಅದಾಗ್ಯೂ, ಅವರನ್ನು ಕೊಲೆ ಮಾಡಿದ್ದಾರೆ ಎಂದು ಶಿಕ್ಷೆಗೆ ಒಳಗಾದ ಆರೋಪಿಗಳು ಇನ್ನೂ ಜೈಲಿನಲ್ಲಿದ್ದಾರೆ ಎಂದು TNIE ವರದಿ ಮಾಡಿದೆ. 2023 ರಲ್ಲಿ ‘ಕೊಲೆಯಾದ’

ಮಹಿಳೆಯು ಜೀವಂತವಾಗಿ ಮರಳಿದ್ದು ಅವರ ಕುಟುಂಬ ಮತ್ತು ಸ್ನೇಹಿತರಲ್ಲಿ ಆಘಾತ ಮತ್ತು ಆಶ್ಚರ್ಯವನ್ನುಂಟುಮಾಡಿದೆ. 35 ವರ್ಷದ ಲಲಿತಾ ಬಾಯಿ ಮಂದ್ಸೌರ್ ಜಿಲ್ಲೆಯ ಮನೆಗೆ ಹಿಂದಿರುಗಿದ ತಕ್ಷಣ, ಅವರ ತಂದೆ ಆಕೆಯನ್ನು ಗಾಂಧಿ ಸಾಗರ್ ಪೊಲೀಸ್ ಠಾಣೆಗೆ ಕರೆದೊಯ್ದು ಈ ಬಗ್ಗೆ ತಿಳಿಸಿದ್ದಾರೆ.

ಅದೇ ವೇಳೆ, ಲಲಿತಾ ಬಾಯಿ ಅವರ “ಕೊಲೆ” ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆಗೊಳಗಾದ ನಾಲ್ವರು ವ್ಯಕ್ತಿಗಳು ಜೈಲಿನಲ್ಲಿ ತಮ್ಮ ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ವರದಿ ಹೇಳಿದೆ. ಲಲಿತಾ ತನ್ನ ಗುರುತನ್ನು ದೃಢೀಕರಿಸಲು ತನ್ನ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಸೇರಿದಂತೆ ದಾಖಲೆಗಳನ್ನು ಹಾಜರುಪಡಿಸಿದ್ದಾರೆ. 2023  ರಲ್ಲಿ ‘ಕೊಲೆಯಾದ’

ಕುಟುಂಬವು ತನ್ನ ಮಗಳ ವಿರೂಪಗೊಂಡ ದೇಹದ ಅಂತ್ಯಕ್ರಿಯೆಯನ್ನು ಅವರ ಕೈಯಲ್ಲಿನ ಹಚ್ಚೆ ಮತ್ತು ಕಾಲಿಗೆ ಕಟ್ಟಲಾದ ಕಪ್ಪು ದಾರ ಸೇರಿದಂತೆ ದೈಹಿಕ ಗುರುತುಗಳ ಸಹಾಯದಿಂದ ನಡೆಸಿತ್ತು ಎಂದು ಲಲಿತಾ ಅವರ ತಂದೆಯನ್ನು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಥಾಂಡ್ಲಾ ಪೊಲೀಸರು ಮಹಿಳೆಯ ಮೃತದೇಹ ಸಿಕ್ಕ ಗಾಂಧಿ ಸಾಗರ್‌ನಿಂದ 30 ಕಿ.ಮೀ ದೂರದಲ್ಲಿರುವ ಭನ್‌ಪುರದ ಶಾರುಖ್, ಇಮ್ರಾನ್, ಸೋನು ಮತ್ತು ಎಜಾಜ್ ಎಂಬ ನಾಲ್ವರು ಶಂಕಿತರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

“ಅವರು ಅಪರಾಧ ಮಾಡಿದ್ದಾರೆಂದು ಸಾಬೀತುಪಡಿಸಲು ನಮಗೆ ಸಾಕಷ್ಟು ಪುರಾವೆಗಳಿವೆ. ಆದ್ದರಿಂದ ಆರೋಪಪಟ್ಟಿ ಸಲ್ಲಿಸಲಾಗಿದೆ. ವಿಷಯವು ಈಗ ನ್ಯಾಯಾಲಯದಲ್ಲಿದೆ ಮತ್ತು ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ತನ್ನ ಬಗ್ಗೆ ಮಾಹಿತಿ ನೀಡಿರುವ ಲಲಿತಾ, ಶಾರುಖ್ ಜೊತೆ ತಾನು ಸ್ವಇಚ್ಛೆಯಿಂದ ಭಾನ್‌ಪುರಕ್ಕೆ ಹೋಗಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ಕೇವಲ ಎರಡು ದಿನಗಳ ನಂತರ, ಅವನು ತನ್ನನ್ನು ಶಾರುಖ್ ಎಂಬ ಇನ್ನೊಬ್ಬ ವ್ಯಕ್ತಿಗೆ 5 ಲಕ್ಷ ರೂ.ಗೆ ಮಾರಾಟ ಮಾಡಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಮಹಿಳೆ ಕೋಟಾದಲ್ಲಿ ಎರಡನೇ ಶಾರುಖ್ ಜೊತೆ 18 ತಿಂಗಳು ವಾಸಿಸುತ್ತಿದ್ದಳು. ಯಾವಾಗಲೂ ತಪ್ಪಿಸಿಕೊಳ್ಳಲು ಅವಕಾಶವನ್ನು ಹುಡುಕುತ್ತಿದ್ದ ಅವರು ತಪ್ಪಿಸಿಕೊಳ್ಳಲು ಅವಕಾಶ ಸಿಕ್ಕಾಗ ಮನೆಗೆ ಮರಳಿದ್ದಾರೆ.

ಮಹಿಳೆಯ ‘ಕೊಲೆ’ ಪ್ರಕರಣದಲ್ಲಿ ಜೈಲಿನಲ್ಲಿರುವ ನಾಲ್ವರ ಬಗ್ಗೆ ಮಾತನಾಡಿರುವ ಪೊಲೀಸರು, “ನಾವು ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇವೆ. ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ. ಜೊತೆಗೆ ಲಲಿತಾ ಅವರ ಕುಟುಂಬವು ಯಾರ ಶವವನ್ನು ಅಂತ್ಯಕ್ರಿಯೆ ಮಾಡಿದೆ ಎಂಬ ವಿಚಾರವನ್ನು ಇದೀಗ ತನಿಖೆ ಮಾಡುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...