Homeಮುಖಪುಟನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಹೆಸರಿನಲ್ಲಿ ವ್ಯಕ್ತಿಯನ್ನು ಮೋಸಗೊಳಿಸಲು ಯತ್ನಿಸಿದ ಆರೋಪದ ಮೇಲೆ ಮೈಸೂರು ನಗರ ಪೊಲೀಸರು ನಕಲಿ ಬ್ಯಾಂಕ್ ಅಧಿಕಾರಿ, ಆರೋಪಿ ಅರುಣಕುಮಾರಿ ಎಂಬುವವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಬ್ಯಾಂಕಿನಲ್ಲಿ 25 ಕೋಟಿ ರೂ.ಗಳ ಸಾಲಕ್ಕೆ ಅರ್ಜಿ ಸಲ್ಲಿಸಿದ್ದ ಹರ್ಷ್ ಮೆಲಾಂಟ ಎಂಬುವವರನ್ನು ಆರೋಪಿ ಅರುಣಕುಮಾರಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ತನ್ನನ್ನು ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದ ಆಕೆ, ಮೆಲಂಟಾ ಅವರನ್ನು ಸಂಪರ್ಕಿಸಿ, ನಟ ದರ್ಶನ್‌ಗೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಒದಗಿಸಿದ್ದಿರ ಎಂದು ಆರೋಪಿಸಿ ಬ್ಲ್ಯಾಕ್ ಮೇಲ್ ಮಾಡಿದ್ದರು ಎನ್ನಲಾಗಿದೆ.

ವಿಷಯ ಹೊರಗೆ ಬಾರದಂತೆ ನೋಡಿಕೊಳ್ಳಲು ತನಗೆ 25 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಈ ಮಹಿಳೆ ನಕಲಿ ಎಂಬುದು ಹರ್ಷ ಅವರಿಗೆ ಗೊತ್ತಾಗಿ, ಅವರು ತಕ್ಷಣ ಜುಲೈ 3 ನೇ ತಾರೀಕು ಮೈಸೂರು ನಗರದ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ದೂರು ಆಧರಿಸಿ, ಆಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ

ಇದೇ ಮಹಿಳೆ ದರ್ಶನ್ ಅಭಿನಯದ ರಾಬರ್ಟ್​ ಚಿತ್ರದ ನಿರ್ಮಾಪಕ ಉಮಾಪತಿ ಅವರಿಗೂ ಕರೆ ಮಾಡಿ, ಹರ್ಷ ಎಂಬುವರು ದರ್ಶನ್​ ಅವರ ಆಸ್ತಿಯನ್ನು ಸಾಲಕ್ಕಾಗಿ ಬ್ಯಾಂಕಿಗೆ ಅಡ ಇಟ್ಟಿದ್ದಾರೆ ನಿಜವೇ ಎಂದು ಕೇಳಿದ್ದಾರೆ. ಇದರಿಂದ ಅನುಮಾನಗೊಂಡ ನಿರ್ಮಾಪಕ ಉಮಾಪತಿ ಅವರು ಕೂಡಲೇ ಬೆಂಗಳೂರಿನ ಪೊಲೀಸ್​ ಠಾಣೆಯಲ್ಲಿ ಜೂನ್​ 17 ರಂದು ಅರುಣಕುಮಾರಿ ಅವರ ಮೇಲೆ ದೂರು ದಾಖಲಿಸಿದ್ದಾರೆ.

ಈ ನಿಟ್ಟಿನಲ್ಲಿ ನಟ ದರ್ಶನ್ ಅವರು ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಭಾನುವಾರ ಭೇಟಿ ನೀಡಿದ್ದರು.

ಭಾನುವಾರ ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಭೇಟಿ ನೀಡಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಯಾರೇ ನನ್ನ ಹೆಸರನ್ನು ದುರುಪಯೋಗ ಪಡಿಸಿಕೊಂಡರು ಅವರ ರೆಕ್ಕೆಯನ್ನಲ್ಲ, ತಲೆಯನ್ನೆ ತೆಗೆಯುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.

‘ನನಗೆ ಯಾರೂ ಬ್ಲಾಕ್ ಮೇಲ್ ಮಾಡಿಲ್ಲ, ಆದರೆ ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಅನಂತರ ಏನಾಗುತ್ತದೆ ಎಂಬುದನ್ನು ನಿಮಗೆ ಸಂಪೂರ್ಣ ವಿವರ ನೀಡುತ್ತೇನೆ’ ಎಂದು ದರ್ಶನ್ ಹೇಳಿದ್ದರು.

ಈ ಪ್ರಕರಣದ ರೂವಾರಿ ಆರೋಪಿ ಅರುಣಕುಮಾರಿ ಹಿಂದೆ ಯಾರಿದ್ದಾರೆ ಎಂಬುದನ್ನು ಬಯಲಿಗೆಳೆಯಬೇಕು. ಯಾಕೆ ಇಂತಹ ಕೆಲಸ ಮಾಡಿದ್ದಾರೆ ಎಂಬುದನ್ನು ಕಂಡು ಹಿಡಿಯಬೇಕು ಎಂದು ನಟ ದರ್ಶನ್ ಒತ್ತಾಯಿಸಿದ್ದಾರೆ.

ಇನ್ನು ಮೂಲಗಳ ಪ್ರಕಾರ ಮೈಸೂರು ಪೊಲೀಸರು ನಕಲಿ ಬ್ಯಾಂಕ್ ಅಧಿಕಾರಿ ಅರುಣಕುಮಾರಿ ಜೊತೆಗೆ, ಮಧುಕೇಶವ ಹಾಗೂ ನಂದೀಶ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.


ಇದನ್ನೂ ಓದಿ: ಸಿನಿಮಾಟೋಗ್ರಾಫ್ ಕಾಯ್ದೆಯ ತಿದ್ದುಪಡಿ; ಸಿನಿಮಾ ತಯಾರಕರ ಮೇಲೆ ತೂಗಲಿರುವ ಹೊಸ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...