Homeಮುಖಪುಟನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಹೆಸರಿನಲ್ಲಿ ವ್ಯಕ್ತಿಯನ್ನು ಮೋಸಗೊಳಿಸಲು ಯತ್ನಿಸಿದ ಆರೋಪದ ಮೇಲೆ ಮೈಸೂರು ನಗರ ಪೊಲೀಸರು ನಕಲಿ ಬ್ಯಾಂಕ್ ಅಧಿಕಾರಿ, ಆರೋಪಿ ಅರುಣಕುಮಾರಿ ಎಂಬುವವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಬ್ಯಾಂಕಿನಲ್ಲಿ 25 ಕೋಟಿ ರೂ.ಗಳ ಸಾಲಕ್ಕೆ ಅರ್ಜಿ ಸಲ್ಲಿಸಿದ್ದ ಹರ್ಷ್ ಮೆಲಾಂಟ ಎಂಬುವವರನ್ನು ಆರೋಪಿ ಅರುಣಕುಮಾರಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ತನ್ನನ್ನು ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದ ಆಕೆ, ಮೆಲಂಟಾ ಅವರನ್ನು ಸಂಪರ್ಕಿಸಿ, ನಟ ದರ್ಶನ್‌ಗೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಒದಗಿಸಿದ್ದಿರ ಎಂದು ಆರೋಪಿಸಿ ಬ್ಲ್ಯಾಕ್ ಮೇಲ್ ಮಾಡಿದ್ದರು ಎನ್ನಲಾಗಿದೆ.

ವಿಷಯ ಹೊರಗೆ ಬಾರದಂತೆ ನೋಡಿಕೊಳ್ಳಲು ತನಗೆ 25 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಈ ಮಹಿಳೆ ನಕಲಿ ಎಂಬುದು ಹರ್ಷ ಅವರಿಗೆ ಗೊತ್ತಾಗಿ, ಅವರು ತಕ್ಷಣ ಜುಲೈ 3 ನೇ ತಾರೀಕು ಮೈಸೂರು ನಗರದ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ದೂರು ಆಧರಿಸಿ, ಆಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ

ಇದೇ ಮಹಿಳೆ ದರ್ಶನ್ ಅಭಿನಯದ ರಾಬರ್ಟ್​ ಚಿತ್ರದ ನಿರ್ಮಾಪಕ ಉಮಾಪತಿ ಅವರಿಗೂ ಕರೆ ಮಾಡಿ, ಹರ್ಷ ಎಂಬುವರು ದರ್ಶನ್​ ಅವರ ಆಸ್ತಿಯನ್ನು ಸಾಲಕ್ಕಾಗಿ ಬ್ಯಾಂಕಿಗೆ ಅಡ ಇಟ್ಟಿದ್ದಾರೆ ನಿಜವೇ ಎಂದು ಕೇಳಿದ್ದಾರೆ. ಇದರಿಂದ ಅನುಮಾನಗೊಂಡ ನಿರ್ಮಾಪಕ ಉಮಾಪತಿ ಅವರು ಕೂಡಲೇ ಬೆಂಗಳೂರಿನ ಪೊಲೀಸ್​ ಠಾಣೆಯಲ್ಲಿ ಜೂನ್​ 17 ರಂದು ಅರುಣಕುಮಾರಿ ಅವರ ಮೇಲೆ ದೂರು ದಾಖಲಿಸಿದ್ದಾರೆ.

ಈ ನಿಟ್ಟಿನಲ್ಲಿ ನಟ ದರ್ಶನ್ ಅವರು ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಭಾನುವಾರ ಭೇಟಿ ನೀಡಿದ್ದರು.

ಭಾನುವಾರ ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಭೇಟಿ ನೀಡಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಯಾರೇ ನನ್ನ ಹೆಸರನ್ನು ದುರುಪಯೋಗ ಪಡಿಸಿಕೊಂಡರು ಅವರ ರೆಕ್ಕೆಯನ್ನಲ್ಲ, ತಲೆಯನ್ನೆ ತೆಗೆಯುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.

‘ನನಗೆ ಯಾರೂ ಬ್ಲಾಕ್ ಮೇಲ್ ಮಾಡಿಲ್ಲ, ಆದರೆ ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಅನಂತರ ಏನಾಗುತ್ತದೆ ಎಂಬುದನ್ನು ನಿಮಗೆ ಸಂಪೂರ್ಣ ವಿವರ ನೀಡುತ್ತೇನೆ’ ಎಂದು ದರ್ಶನ್ ಹೇಳಿದ್ದರು.

ಈ ಪ್ರಕರಣದ ರೂವಾರಿ ಆರೋಪಿ ಅರುಣಕುಮಾರಿ ಹಿಂದೆ ಯಾರಿದ್ದಾರೆ ಎಂಬುದನ್ನು ಬಯಲಿಗೆಳೆಯಬೇಕು. ಯಾಕೆ ಇಂತಹ ಕೆಲಸ ಮಾಡಿದ್ದಾರೆ ಎಂಬುದನ್ನು ಕಂಡು ಹಿಡಿಯಬೇಕು ಎಂದು ನಟ ದರ್ಶನ್ ಒತ್ತಾಯಿಸಿದ್ದಾರೆ.

ಇನ್ನು ಮೂಲಗಳ ಪ್ರಕಾರ ಮೈಸೂರು ಪೊಲೀಸರು ನಕಲಿ ಬ್ಯಾಂಕ್ ಅಧಿಕಾರಿ ಅರುಣಕುಮಾರಿ ಜೊತೆಗೆ, ಮಧುಕೇಶವ ಹಾಗೂ ನಂದೀಶ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.


ಇದನ್ನೂ ಓದಿ: ಸಿನಿಮಾಟೋಗ್ರಾಫ್ ಕಾಯ್ದೆಯ ತಿದ್ದುಪಡಿ; ಸಿನಿಮಾ ತಯಾರಕರ ಮೇಲೆ ತೂಗಲಿರುವ ಹೊಸ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...