Homeಮುಖಪುಟನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಹೆಸರಿನಲ್ಲಿ ವ್ಯಕ್ತಿಯನ್ನು ಮೋಸಗೊಳಿಸಲು ಯತ್ನಿಸಿದ ಆರೋಪದ ಮೇಲೆ ಮೈಸೂರು ನಗರ ಪೊಲೀಸರು ನಕಲಿ ಬ್ಯಾಂಕ್ ಅಧಿಕಾರಿ, ಆರೋಪಿ ಅರುಣಕುಮಾರಿ ಎಂಬುವವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಬ್ಯಾಂಕಿನಲ್ಲಿ 25 ಕೋಟಿ ರೂ.ಗಳ ಸಾಲಕ್ಕೆ ಅರ್ಜಿ ಸಲ್ಲಿಸಿದ್ದ ಹರ್ಷ್ ಮೆಲಾಂಟ ಎಂಬುವವರನ್ನು ಆರೋಪಿ ಅರುಣಕುಮಾರಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ತನ್ನನ್ನು ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದ ಆಕೆ, ಮೆಲಂಟಾ ಅವರನ್ನು ಸಂಪರ್ಕಿಸಿ, ನಟ ದರ್ಶನ್‌ಗೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಒದಗಿಸಿದ್ದಿರ ಎಂದು ಆರೋಪಿಸಿ ಬ್ಲ್ಯಾಕ್ ಮೇಲ್ ಮಾಡಿದ್ದರು ಎನ್ನಲಾಗಿದೆ.

ವಿಷಯ ಹೊರಗೆ ಬಾರದಂತೆ ನೋಡಿಕೊಳ್ಳಲು ತನಗೆ 25 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಈ ಮಹಿಳೆ ನಕಲಿ ಎಂಬುದು ಹರ್ಷ ಅವರಿಗೆ ಗೊತ್ತಾಗಿ, ಅವರು ತಕ್ಷಣ ಜುಲೈ 3 ನೇ ತಾರೀಕು ಮೈಸೂರು ನಗರದ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ದೂರು ಆಧರಿಸಿ, ಆಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ

ಇದೇ ಮಹಿಳೆ ದರ್ಶನ್ ಅಭಿನಯದ ರಾಬರ್ಟ್​ ಚಿತ್ರದ ನಿರ್ಮಾಪಕ ಉಮಾಪತಿ ಅವರಿಗೂ ಕರೆ ಮಾಡಿ, ಹರ್ಷ ಎಂಬುವರು ದರ್ಶನ್​ ಅವರ ಆಸ್ತಿಯನ್ನು ಸಾಲಕ್ಕಾಗಿ ಬ್ಯಾಂಕಿಗೆ ಅಡ ಇಟ್ಟಿದ್ದಾರೆ ನಿಜವೇ ಎಂದು ಕೇಳಿದ್ದಾರೆ. ಇದರಿಂದ ಅನುಮಾನಗೊಂಡ ನಿರ್ಮಾಪಕ ಉಮಾಪತಿ ಅವರು ಕೂಡಲೇ ಬೆಂಗಳೂರಿನ ಪೊಲೀಸ್​ ಠಾಣೆಯಲ್ಲಿ ಜೂನ್​ 17 ರಂದು ಅರುಣಕುಮಾರಿ ಅವರ ಮೇಲೆ ದೂರು ದಾಖಲಿಸಿದ್ದಾರೆ.

ಈ ನಿಟ್ಟಿನಲ್ಲಿ ನಟ ದರ್ಶನ್ ಅವರು ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಭಾನುವಾರ ಭೇಟಿ ನೀಡಿದ್ದರು.

ಭಾನುವಾರ ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಭೇಟಿ ನೀಡಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಯಾರೇ ನನ್ನ ಹೆಸರನ್ನು ದುರುಪಯೋಗ ಪಡಿಸಿಕೊಂಡರು ಅವರ ರೆಕ್ಕೆಯನ್ನಲ್ಲ, ತಲೆಯನ್ನೆ ತೆಗೆಯುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.

‘ನನಗೆ ಯಾರೂ ಬ್ಲಾಕ್ ಮೇಲ್ ಮಾಡಿಲ್ಲ, ಆದರೆ ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಅನಂತರ ಏನಾಗುತ್ತದೆ ಎಂಬುದನ್ನು ನಿಮಗೆ ಸಂಪೂರ್ಣ ವಿವರ ನೀಡುತ್ತೇನೆ’ ಎಂದು ದರ್ಶನ್ ಹೇಳಿದ್ದರು.

ಈ ಪ್ರಕರಣದ ರೂವಾರಿ ಆರೋಪಿ ಅರುಣಕುಮಾರಿ ಹಿಂದೆ ಯಾರಿದ್ದಾರೆ ಎಂಬುದನ್ನು ಬಯಲಿಗೆಳೆಯಬೇಕು. ಯಾಕೆ ಇಂತಹ ಕೆಲಸ ಮಾಡಿದ್ದಾರೆ ಎಂಬುದನ್ನು ಕಂಡು ಹಿಡಿಯಬೇಕು ಎಂದು ನಟ ದರ್ಶನ್ ಒತ್ತಾಯಿಸಿದ್ದಾರೆ.

ಇನ್ನು ಮೂಲಗಳ ಪ್ರಕಾರ ಮೈಸೂರು ಪೊಲೀಸರು ನಕಲಿ ಬ್ಯಾಂಕ್ ಅಧಿಕಾರಿ ಅರುಣಕುಮಾರಿ ಜೊತೆಗೆ, ಮಧುಕೇಶವ ಹಾಗೂ ನಂದೀಶ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.


ಇದನ್ನೂ ಓದಿ: ಸಿನಿಮಾಟೋಗ್ರಾಫ್ ಕಾಯ್ದೆಯ ತಿದ್ದುಪಡಿ; ಸಿನಿಮಾ ತಯಾರಕರ ಮೇಲೆ ತೂಗಲಿರುವ ಹೊಸ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...