Homeಮುಖಪುಟನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಹೆಸರಿನಲ್ಲಿ ವ್ಯಕ್ತಿಯನ್ನು ಮೋಸಗೊಳಿಸಲು ಯತ್ನಿಸಿದ ಆರೋಪದ ಮೇಲೆ ಮೈಸೂರು ನಗರ ಪೊಲೀಸರು ನಕಲಿ ಬ್ಯಾಂಕ್ ಅಧಿಕಾರಿ, ಆರೋಪಿ ಅರುಣಕುಮಾರಿ ಎಂಬುವವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಬ್ಯಾಂಕಿನಲ್ಲಿ 25 ಕೋಟಿ ರೂ.ಗಳ ಸಾಲಕ್ಕೆ ಅರ್ಜಿ ಸಲ್ಲಿಸಿದ್ದ ಹರ್ಷ್ ಮೆಲಾಂಟ ಎಂಬುವವರನ್ನು ಆರೋಪಿ ಅರುಣಕುಮಾರಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ತನ್ನನ್ನು ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದ ಆಕೆ, ಮೆಲಂಟಾ ಅವರನ್ನು ಸಂಪರ್ಕಿಸಿ, ನಟ ದರ್ಶನ್‌ಗೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಒದಗಿಸಿದ್ದಿರ ಎಂದು ಆರೋಪಿಸಿ ಬ್ಲ್ಯಾಕ್ ಮೇಲ್ ಮಾಡಿದ್ದರು ಎನ್ನಲಾಗಿದೆ.

ವಿಷಯ ಹೊರಗೆ ಬಾರದಂತೆ ನೋಡಿಕೊಳ್ಳಲು ತನಗೆ 25 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಈ ಮಹಿಳೆ ನಕಲಿ ಎಂಬುದು ಹರ್ಷ ಅವರಿಗೆ ಗೊತ್ತಾಗಿ, ಅವರು ತಕ್ಷಣ ಜುಲೈ 3 ನೇ ತಾರೀಕು ಮೈಸೂರು ನಗರದ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ದೂರು ಆಧರಿಸಿ, ಆಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ

ಇದೇ ಮಹಿಳೆ ದರ್ಶನ್ ಅಭಿನಯದ ರಾಬರ್ಟ್​ ಚಿತ್ರದ ನಿರ್ಮಾಪಕ ಉಮಾಪತಿ ಅವರಿಗೂ ಕರೆ ಮಾಡಿ, ಹರ್ಷ ಎಂಬುವರು ದರ್ಶನ್​ ಅವರ ಆಸ್ತಿಯನ್ನು ಸಾಲಕ್ಕಾಗಿ ಬ್ಯಾಂಕಿಗೆ ಅಡ ಇಟ್ಟಿದ್ದಾರೆ ನಿಜವೇ ಎಂದು ಕೇಳಿದ್ದಾರೆ. ಇದರಿಂದ ಅನುಮಾನಗೊಂಡ ನಿರ್ಮಾಪಕ ಉಮಾಪತಿ ಅವರು ಕೂಡಲೇ ಬೆಂಗಳೂರಿನ ಪೊಲೀಸ್​ ಠಾಣೆಯಲ್ಲಿ ಜೂನ್​ 17 ರಂದು ಅರುಣಕುಮಾರಿ ಅವರ ಮೇಲೆ ದೂರು ದಾಖಲಿಸಿದ್ದಾರೆ.

ಈ ನಿಟ್ಟಿನಲ್ಲಿ ನಟ ದರ್ಶನ್ ಅವರು ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಭಾನುವಾರ ಭೇಟಿ ನೀಡಿದ್ದರು.

ಭಾನುವಾರ ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಭೇಟಿ ನೀಡಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಯಾರೇ ನನ್ನ ಹೆಸರನ್ನು ದುರುಪಯೋಗ ಪಡಿಸಿಕೊಂಡರು ಅವರ ರೆಕ್ಕೆಯನ್ನಲ್ಲ, ತಲೆಯನ್ನೆ ತೆಗೆಯುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.

‘ನನಗೆ ಯಾರೂ ಬ್ಲಾಕ್ ಮೇಲ್ ಮಾಡಿಲ್ಲ, ಆದರೆ ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಅನಂತರ ಏನಾಗುತ್ತದೆ ಎಂಬುದನ್ನು ನಿಮಗೆ ಸಂಪೂರ್ಣ ವಿವರ ನೀಡುತ್ತೇನೆ’ ಎಂದು ದರ್ಶನ್ ಹೇಳಿದ್ದರು.

ಈ ಪ್ರಕರಣದ ರೂವಾರಿ ಆರೋಪಿ ಅರುಣಕುಮಾರಿ ಹಿಂದೆ ಯಾರಿದ್ದಾರೆ ಎಂಬುದನ್ನು ಬಯಲಿಗೆಳೆಯಬೇಕು. ಯಾಕೆ ಇಂತಹ ಕೆಲಸ ಮಾಡಿದ್ದಾರೆ ಎಂಬುದನ್ನು ಕಂಡು ಹಿಡಿಯಬೇಕು ಎಂದು ನಟ ದರ್ಶನ್ ಒತ್ತಾಯಿಸಿದ್ದಾರೆ.

ಇನ್ನು ಮೂಲಗಳ ಪ್ರಕಾರ ಮೈಸೂರು ಪೊಲೀಸರು ನಕಲಿ ಬ್ಯಾಂಕ್ ಅಧಿಕಾರಿ ಅರುಣಕುಮಾರಿ ಜೊತೆಗೆ, ಮಧುಕೇಶವ ಹಾಗೂ ನಂದೀಶ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.


ಇದನ್ನೂ ಓದಿ: ಸಿನಿಮಾಟೋಗ್ರಾಫ್ ಕಾಯ್ದೆಯ ತಿದ್ದುಪಡಿ; ಸಿನಿಮಾ ತಯಾರಕರ ಮೇಲೆ ತೂಗಲಿರುವ ಹೊಸ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...