Homeಮುಖಪುಟನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಹೆಸರಿನಲ್ಲಿ ವ್ಯಕ್ತಿಯನ್ನು ಮೋಸಗೊಳಿಸಲು ಯತ್ನಿಸಿದ ಆರೋಪದ ಮೇಲೆ ಮೈಸೂರು ನಗರ ಪೊಲೀಸರು ನಕಲಿ ಬ್ಯಾಂಕ್ ಅಧಿಕಾರಿ, ಆರೋಪಿ ಅರುಣಕುಮಾರಿ ಎಂಬುವವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಬ್ಯಾಂಕಿನಲ್ಲಿ 25 ಕೋಟಿ ರೂ.ಗಳ ಸಾಲಕ್ಕೆ ಅರ್ಜಿ ಸಲ್ಲಿಸಿದ್ದ ಹರ್ಷ್ ಮೆಲಾಂಟ ಎಂಬುವವರನ್ನು ಆರೋಪಿ ಅರುಣಕುಮಾರಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ತನ್ನನ್ನು ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದ ಆಕೆ, ಮೆಲಂಟಾ ಅವರನ್ನು ಸಂಪರ್ಕಿಸಿ, ನಟ ದರ್ಶನ್‌ಗೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಒದಗಿಸಿದ್ದಿರ ಎಂದು ಆರೋಪಿಸಿ ಬ್ಲ್ಯಾಕ್ ಮೇಲ್ ಮಾಡಿದ್ದರು ಎನ್ನಲಾಗಿದೆ.

ವಿಷಯ ಹೊರಗೆ ಬಾರದಂತೆ ನೋಡಿಕೊಳ್ಳಲು ತನಗೆ 25 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಈ ಮಹಿಳೆ ನಕಲಿ ಎಂಬುದು ಹರ್ಷ ಅವರಿಗೆ ಗೊತ್ತಾಗಿ, ಅವರು ತಕ್ಷಣ ಜುಲೈ 3 ನೇ ತಾರೀಕು ಮೈಸೂರು ನಗರದ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ದೂರು ಆಧರಿಸಿ, ಆಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ

ಇದೇ ಮಹಿಳೆ ದರ್ಶನ್ ಅಭಿನಯದ ರಾಬರ್ಟ್​ ಚಿತ್ರದ ನಿರ್ಮಾಪಕ ಉಮಾಪತಿ ಅವರಿಗೂ ಕರೆ ಮಾಡಿ, ಹರ್ಷ ಎಂಬುವರು ದರ್ಶನ್​ ಅವರ ಆಸ್ತಿಯನ್ನು ಸಾಲಕ್ಕಾಗಿ ಬ್ಯಾಂಕಿಗೆ ಅಡ ಇಟ್ಟಿದ್ದಾರೆ ನಿಜವೇ ಎಂದು ಕೇಳಿದ್ದಾರೆ. ಇದರಿಂದ ಅನುಮಾನಗೊಂಡ ನಿರ್ಮಾಪಕ ಉಮಾಪತಿ ಅವರು ಕೂಡಲೇ ಬೆಂಗಳೂರಿನ ಪೊಲೀಸ್​ ಠಾಣೆಯಲ್ಲಿ ಜೂನ್​ 17 ರಂದು ಅರುಣಕುಮಾರಿ ಅವರ ಮೇಲೆ ದೂರು ದಾಖಲಿಸಿದ್ದಾರೆ.

ಈ ನಿಟ್ಟಿನಲ್ಲಿ ನಟ ದರ್ಶನ್ ಅವರು ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಭಾನುವಾರ ಭೇಟಿ ನೀಡಿದ್ದರು.

ಭಾನುವಾರ ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಭೇಟಿ ನೀಡಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಯಾರೇ ನನ್ನ ಹೆಸರನ್ನು ದುರುಪಯೋಗ ಪಡಿಸಿಕೊಂಡರು ಅವರ ರೆಕ್ಕೆಯನ್ನಲ್ಲ, ತಲೆಯನ್ನೆ ತೆಗೆಯುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.

‘ನನಗೆ ಯಾರೂ ಬ್ಲಾಕ್ ಮೇಲ್ ಮಾಡಿಲ್ಲ, ಆದರೆ ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಅನಂತರ ಏನಾಗುತ್ತದೆ ಎಂಬುದನ್ನು ನಿಮಗೆ ಸಂಪೂರ್ಣ ವಿವರ ನೀಡುತ್ತೇನೆ’ ಎಂದು ದರ್ಶನ್ ಹೇಳಿದ್ದರು.

ಈ ಪ್ರಕರಣದ ರೂವಾರಿ ಆರೋಪಿ ಅರುಣಕುಮಾರಿ ಹಿಂದೆ ಯಾರಿದ್ದಾರೆ ಎಂಬುದನ್ನು ಬಯಲಿಗೆಳೆಯಬೇಕು. ಯಾಕೆ ಇಂತಹ ಕೆಲಸ ಮಾಡಿದ್ದಾರೆ ಎಂಬುದನ್ನು ಕಂಡು ಹಿಡಿಯಬೇಕು ಎಂದು ನಟ ದರ್ಶನ್ ಒತ್ತಾಯಿಸಿದ್ದಾರೆ.

ಇನ್ನು ಮೂಲಗಳ ಪ್ರಕಾರ ಮೈಸೂರು ಪೊಲೀಸರು ನಕಲಿ ಬ್ಯಾಂಕ್ ಅಧಿಕಾರಿ ಅರುಣಕುಮಾರಿ ಜೊತೆಗೆ, ಮಧುಕೇಶವ ಹಾಗೂ ನಂದೀಶ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.


ಇದನ್ನೂ ಓದಿ: ಸಿನಿಮಾಟೋಗ್ರಾಫ್ ಕಾಯ್ದೆಯ ತಿದ್ದುಪಡಿ; ಸಿನಿಮಾ ತಯಾರಕರ ಮೇಲೆ ತೂಗಲಿರುವ ಹೊಸ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...