Homeಮುಖಪುಟನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಹೆಸರಿನಲ್ಲಿ ವ್ಯಕ್ತಿಯನ್ನು ಮೋಸಗೊಳಿಸಲು ಯತ್ನಿಸಿದ ಆರೋಪದ ಮೇಲೆ ಮೈಸೂರು ನಗರ ಪೊಲೀಸರು ನಕಲಿ ಬ್ಯಾಂಕ್ ಅಧಿಕಾರಿ, ಆರೋಪಿ ಅರುಣಕುಮಾರಿ ಎಂಬುವವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಬ್ಯಾಂಕಿನಲ್ಲಿ 25 ಕೋಟಿ ರೂ.ಗಳ ಸಾಲಕ್ಕೆ ಅರ್ಜಿ ಸಲ್ಲಿಸಿದ್ದ ಹರ್ಷ್ ಮೆಲಾಂಟ ಎಂಬುವವರನ್ನು ಆರೋಪಿ ಅರುಣಕುಮಾರಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ತನ್ನನ್ನು ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದ ಆಕೆ, ಮೆಲಂಟಾ ಅವರನ್ನು ಸಂಪರ್ಕಿಸಿ, ನಟ ದರ್ಶನ್‌ಗೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಒದಗಿಸಿದ್ದಿರ ಎಂದು ಆರೋಪಿಸಿ ಬ್ಲ್ಯಾಕ್ ಮೇಲ್ ಮಾಡಿದ್ದರು ಎನ್ನಲಾಗಿದೆ.

ವಿಷಯ ಹೊರಗೆ ಬಾರದಂತೆ ನೋಡಿಕೊಳ್ಳಲು ತನಗೆ 25 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಈ ಮಹಿಳೆ ನಕಲಿ ಎಂಬುದು ಹರ್ಷ ಅವರಿಗೆ ಗೊತ್ತಾಗಿ, ಅವರು ತಕ್ಷಣ ಜುಲೈ 3 ನೇ ತಾರೀಕು ಮೈಸೂರು ನಗರದ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ದೂರು ಆಧರಿಸಿ, ಆಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ

ಇದೇ ಮಹಿಳೆ ದರ್ಶನ್ ಅಭಿನಯದ ರಾಬರ್ಟ್​ ಚಿತ್ರದ ನಿರ್ಮಾಪಕ ಉಮಾಪತಿ ಅವರಿಗೂ ಕರೆ ಮಾಡಿ, ಹರ್ಷ ಎಂಬುವರು ದರ್ಶನ್​ ಅವರ ಆಸ್ತಿಯನ್ನು ಸಾಲಕ್ಕಾಗಿ ಬ್ಯಾಂಕಿಗೆ ಅಡ ಇಟ್ಟಿದ್ದಾರೆ ನಿಜವೇ ಎಂದು ಕೇಳಿದ್ದಾರೆ. ಇದರಿಂದ ಅನುಮಾನಗೊಂಡ ನಿರ್ಮಾಪಕ ಉಮಾಪತಿ ಅವರು ಕೂಡಲೇ ಬೆಂಗಳೂರಿನ ಪೊಲೀಸ್​ ಠಾಣೆಯಲ್ಲಿ ಜೂನ್​ 17 ರಂದು ಅರುಣಕುಮಾರಿ ಅವರ ಮೇಲೆ ದೂರು ದಾಖಲಿಸಿದ್ದಾರೆ.

ಈ ನಿಟ್ಟಿನಲ್ಲಿ ನಟ ದರ್ಶನ್ ಅವರು ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಭಾನುವಾರ ಭೇಟಿ ನೀಡಿದ್ದರು.

ಭಾನುವಾರ ನರಸಿಂಹರಾಜ ಉಪವಿಭಾಗದ ಎಸಿಪಿ ಕಚೇರಿಗೆ ಭೇಟಿ ನೀಡಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಯಾರೇ ನನ್ನ ಹೆಸರನ್ನು ದುರುಪಯೋಗ ಪಡಿಸಿಕೊಂಡರು ಅವರ ರೆಕ್ಕೆಯನ್ನಲ್ಲ, ತಲೆಯನ್ನೆ ತೆಗೆಯುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.

‘ನನಗೆ ಯಾರೂ ಬ್ಲಾಕ್ ಮೇಲ್ ಮಾಡಿಲ್ಲ, ಆದರೆ ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಅನಂತರ ಏನಾಗುತ್ತದೆ ಎಂಬುದನ್ನು ನಿಮಗೆ ಸಂಪೂರ್ಣ ವಿವರ ನೀಡುತ್ತೇನೆ’ ಎಂದು ದರ್ಶನ್ ಹೇಳಿದ್ದರು.

ಈ ಪ್ರಕರಣದ ರೂವಾರಿ ಆರೋಪಿ ಅರುಣಕುಮಾರಿ ಹಿಂದೆ ಯಾರಿದ್ದಾರೆ ಎಂಬುದನ್ನು ಬಯಲಿಗೆಳೆಯಬೇಕು. ಯಾಕೆ ಇಂತಹ ಕೆಲಸ ಮಾಡಿದ್ದಾರೆ ಎಂಬುದನ್ನು ಕಂಡು ಹಿಡಿಯಬೇಕು ಎಂದು ನಟ ದರ್ಶನ್ ಒತ್ತಾಯಿಸಿದ್ದಾರೆ.

ಇನ್ನು ಮೂಲಗಳ ಪ್ರಕಾರ ಮೈಸೂರು ಪೊಲೀಸರು ನಕಲಿ ಬ್ಯಾಂಕ್ ಅಧಿಕಾರಿ ಅರುಣಕುಮಾರಿ ಜೊತೆಗೆ, ಮಧುಕೇಶವ ಹಾಗೂ ನಂದೀಶ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.


ಇದನ್ನೂ ಓದಿ: ಸಿನಿಮಾಟೋಗ್ರಾಫ್ ಕಾಯ್ದೆಯ ತಿದ್ದುಪಡಿ; ಸಿನಿಮಾ ತಯಾರಕರ ಮೇಲೆ ತೂಗಲಿರುವ ಹೊಸ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...