Homeಮುಖಪುಟಮಹಿಳೆ ಮೇಲೆ ಹಲ್ಲೆ ಪ್ರಕರಣ: ಬಿಡುಗಡೆಯಾದ ರಾಜಕಾರಣಿಗೆ ಹೂಮಳೆ ಸುರಿಸಿ ಸ್ವಾಗತ

ಮಹಿಳೆ ಮೇಲೆ ಹಲ್ಲೆ ಪ್ರಕರಣ: ಬಿಡುಗಡೆಯಾದ ರಾಜಕಾರಣಿಗೆ ಹೂಮಳೆ ಸುರಿಸಿ ಸ್ವಾಗತ

- Advertisement -
- Advertisement -

ನೋಯ್ಡಾದ ಸೊಸೈಟಿಯೊಂದರಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತಕ್ಕೊಳಗಾಗಿದ್ದ ರಾಜಕಾರಣಿ, ಗ್ಯಾಂಗ್‌ಸ್ಟರ್‌ ಆರೋಪ ಹೊತ್ತಿರುವ ಶ್ರೀಕಾಂತ್ ತ್ಯಾಗಿ ಜೈಲಿನಿಂದ ಬಿಡುಗಡೆಯಾದ ಬಳಿಕ ಭವ್ಯ ಸ್ವಾಗತ ಪಡೆದಿದ್ದಾನೆ.

ತ್ಯಾಗಿಯ ಬೆಂಬಲಿಗರು “ಶ್ರೀಕಾಂತ್ ಭಯ್ಯಾ ಜಿಂದಾಬಾದ್” ಎಂಬ ಘೋಷಣೆಗಳನ್ನು ಕೂಗಿದ್ದು ತ್ಯಾಗಿಯ ಮೇಲೆ ಹೂ ಮಳೆ ಸುರಿಸಿದ್ದಾರೆ. ಜೊತೆ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮನೆಗೆ ಹಿಂತಿರುಗಿದ ತ್ಯಾಗಿ ತನ್ನ ವಿರೋಧಿಗಳನ್ನು ಕಟುವಾಗಿ ಟೀಕಿಸಿದ್ದಾನೆ. “ಗ್ಯಾಗ್‌ಸ್ಟರ್‌ ಎಂದು ನನ್ನ ವಿರುದ್ಧ ಆರೋಪ ಹೊರಿಸಲಾಗಿದ್ದು, ಅದು ಕಟ್ಟುಕತೆಯಾಗಿದೆ. ನನ್ನ ರಾಜಕೀಯ ಜೀವನವನ್ನು ಮುಗಿಸುವ ಪ್ರಯತ್ನದಲ್ಲಿ ‘ಪ್ರಾಯೋಜಿತ ಪಿತೂರಿ’ ನಡೆಸಲಾಗಿದೆ” ಎಂದಿದ್ದಾನೆ.

“ಈ ಷಡ್ಯಂತ್ರದ ಭಾಗವಾಗಿ ನಮ್ಮ ಸಹೋದರಿಯೊಬ್ಬರನ್ನು ಮುಂದಿಟ್ಟುಕೊಂಡು ನಮ್ಮ ನಡುವೆಯೇ ವಿವಾದ ಸೃಷ್ಟಿಸಿದ್ದಾರೆ. ದೃಶ್ಯವನ್ನು ಚಿತ್ರೀಕರಿಸುವ ಮೂಲಕ ನನ್ನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ನಡೆದಿದೆ” ಎಂದು ಆರೋಪಿಸಿದ್ದಾನೆ.

ಜೈಲಿನಲ್ಲಿದ್ದಾಗ ನನಗೆ ಹಾಗೂ ನನ್ನ ಕುಟುಂಬಕ್ಕೆ ಬೆಂಬಲ ನೀಡಿದ ತ್ಯಾಗಿ ಸಮುದಾಯಕ್ಕೆ ಧನ್ಯವಾದಗಳು. ತ್ಯಾಗಿ ಸಮುದಾಯದ ಮಾನಹಾನಿ ಮಾಡುವ ಯತ್ನವೂ ನಡೆದಿದ್ದು, ತನಿಖೆ ಏಕಪಕ್ಷೀಯವಾಗಿರುವುದು ಸಹಜ ಎಂದು ದೂರಿದ್ದಾನೆ.

ರಾಜಕೀಯದಲ್ಲಿ ಮುಂದುವರಿಯುತ್ತೀರಾ ಎಂಬ ಪ್ರಶ್ನೆಗೆ, “ಯಾಕೆ ಬೇಡ, ನಾನೊಬ್ಬ ರಾಜಕೀಯ ನಾಯಕ, ಇನ್ನೇನು ಮಾಡಲಿ? ನನ್ನ ಬೆಂಬಲಿಗರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ” ಎಂದು ತಿಳಿಸಿದ್ದಾನೆ.

ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ, ಬಿಜೆಪಿ ಮುಖಂಡನೆಂದೇ ಬಿಂಬಿತವಾಗಿರುವ ಶ್ರೀಕಾಂತ್ ತ್ಯಾಗಿಯನ್ನು ಉತ್ತರ ಪ್ರದೇಶ ಪೊಲೀಸರು ಮೀರತ್‌ನಲ್ಲಿ ಬಂಧಿಸಿದ್ದರು.

ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಮಹಿಳೆಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತು ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ ಉತ್ತರ ಪ್ರದೇಶ ಆಡಳಿತ ತ್ಯಾಗಿ ವಿರುದ್ಧ ಕಠಿಣ ಕ್ರಮ ಜರುಗಿಸಿತ್ತು. ಗಿಡಗಳನ್ನು ನೆಡುವುದನ್ನು ತಡೆಯಲು ಶ್ರೀಕಾಂತ್ ತ್ಯಾಗಿ ಪ್ರಯತ್ನಿಸಿದಾಗ ಮಹಿಳೆಯನ್ನು ನಿಂದಿಸುತ್ತಿರುವುದು ವಿವಾದ ಹುಟ್ಟಿಹಾಕಿತು.

ರೆಸಿಡೆನ್ಶಿಯಲ್ ಸೊಸೈಟಿಗೆ ಬುಲ್ಡೋಜರ್ ನುಗ್ಗಿಸಲಾಗಿತ್ತು. ತ್ಯಾಗಿಯ ನಿವಾಸದಲ್ಲಿದ್ದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲಾಗಿತ್ತು. ಆತನ ವಿರುದ್ಧ ರಾಜ್ಯದ ಕಠಿಣ ಗೂಂಡಾ ಕಾಯ್ದೆಯಡಿಯೂ ಆರೋಪ ಹೊರಿಸಲಾಗಿದೆ.

ಇದನ್ನೂ ಓದಿರಿ: ಹೇ ಹಿಂದೂ ಎದ್ದೇಳು: ಪೋಸ್ಟ್‌ ಕಾರ್ಡ್ ಪೋಸ್ಟರ್‌ಗೆ ನಾನಾ ರೂಪ!

ಅಪಾರ್ಟ್‌ಮೆಂಟ್‌ನ ಕಾಮನ್ ಏರಿಯಾ ಜಾಗವನ್ನು ಶ್ರಿಕಾಂತ್ ತ್ಯಾಗಿ ಅತಿಕ್ರಮಣ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದರು. ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದನು. ಯುಪಿ ಪೊಲೀಸರು ತ್ಯಾಗಿಯನ್ನು ಹುಡುಕಲು ಪ್ರಾರಂಭಿಸಿದಾಗ, ಆತ ಸರಣಿ ಅಪರಾಧಗಳನ್ನು ಮಾಡಿರುವುದು ಬೆಳಕಿಗೆ ಬಂದಿತ್ತು. ತ್ಯಾಗಿ ವಿರುದ್ಧ ಕೊಲೆ ಯತ್ನ ಮತ್ತು ಸುಲಿಗೆಯಂತಹ ಗಂಭೀರ ಆರೋಪಗಳ ಅಡಿಯಲ್ಲಿ ಈ ಹಿಂದೆ 9 ಪ್ರಕರಣಗಳು ದಾಖಲಾಗಿವೆ.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯನೆಂದು ತ್ಯಾಗಿ ಹೇಳಿಕೊಂಡಿದ್ದಾನೆ. ಆತ ಸೋಷಿಯಲ್ ಮೀಡಿಯಾಗಳಲ್ಲಿ ಪೊಸ್ಟ್‌ ಮಾಡಲಾದ ಹಲವಾರು ಪೋಟೊಗಳಲ್ಲಿ ಬಿಜೆಪಿ ನಾಯಕರೊಂದಿಗೆ ಇರುವುದನ್ನು ಕಾಣಬಹುದು.

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರೊಂದಿಗೆ ತ್ಯಾಗಿ ಫೋಟೋ ತೆಗೆಸಿಕೊಂಡಿರುವುದು, ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಆದರೆ ತ್ಯಾಗಿ ಬಿಜೆಪಿ ಮುಖಂಡನಲ್ಲ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...