Homeಮುಖಪುಟಮಹಿಳೆ ಮೇಲೆ ಹಲ್ಲೆ ಪ್ರಕರಣ: ಬಿಡುಗಡೆಯಾದ ರಾಜಕಾರಣಿಗೆ ಹೂಮಳೆ ಸುರಿಸಿ ಸ್ವಾಗತ

ಮಹಿಳೆ ಮೇಲೆ ಹಲ್ಲೆ ಪ್ರಕರಣ: ಬಿಡುಗಡೆಯಾದ ರಾಜಕಾರಣಿಗೆ ಹೂಮಳೆ ಸುರಿಸಿ ಸ್ವಾಗತ

- Advertisement -
- Advertisement -

ನೋಯ್ಡಾದ ಸೊಸೈಟಿಯೊಂದರಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತಕ್ಕೊಳಗಾಗಿದ್ದ ರಾಜಕಾರಣಿ, ಗ್ಯಾಂಗ್‌ಸ್ಟರ್‌ ಆರೋಪ ಹೊತ್ತಿರುವ ಶ್ರೀಕಾಂತ್ ತ್ಯಾಗಿ ಜೈಲಿನಿಂದ ಬಿಡುಗಡೆಯಾದ ಬಳಿಕ ಭವ್ಯ ಸ್ವಾಗತ ಪಡೆದಿದ್ದಾನೆ.

ತ್ಯಾಗಿಯ ಬೆಂಬಲಿಗರು “ಶ್ರೀಕಾಂತ್ ಭಯ್ಯಾ ಜಿಂದಾಬಾದ್” ಎಂಬ ಘೋಷಣೆಗಳನ್ನು ಕೂಗಿದ್ದು ತ್ಯಾಗಿಯ ಮೇಲೆ ಹೂ ಮಳೆ ಸುರಿಸಿದ್ದಾರೆ. ಜೊತೆ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮನೆಗೆ ಹಿಂತಿರುಗಿದ ತ್ಯಾಗಿ ತನ್ನ ವಿರೋಧಿಗಳನ್ನು ಕಟುವಾಗಿ ಟೀಕಿಸಿದ್ದಾನೆ. “ಗ್ಯಾಗ್‌ಸ್ಟರ್‌ ಎಂದು ನನ್ನ ವಿರುದ್ಧ ಆರೋಪ ಹೊರಿಸಲಾಗಿದ್ದು, ಅದು ಕಟ್ಟುಕತೆಯಾಗಿದೆ. ನನ್ನ ರಾಜಕೀಯ ಜೀವನವನ್ನು ಮುಗಿಸುವ ಪ್ರಯತ್ನದಲ್ಲಿ ‘ಪ್ರಾಯೋಜಿತ ಪಿತೂರಿ’ ನಡೆಸಲಾಗಿದೆ” ಎಂದಿದ್ದಾನೆ.

“ಈ ಷಡ್ಯಂತ್ರದ ಭಾಗವಾಗಿ ನಮ್ಮ ಸಹೋದರಿಯೊಬ್ಬರನ್ನು ಮುಂದಿಟ್ಟುಕೊಂಡು ನಮ್ಮ ನಡುವೆಯೇ ವಿವಾದ ಸೃಷ್ಟಿಸಿದ್ದಾರೆ. ದೃಶ್ಯವನ್ನು ಚಿತ್ರೀಕರಿಸುವ ಮೂಲಕ ನನ್ನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ನಡೆದಿದೆ” ಎಂದು ಆರೋಪಿಸಿದ್ದಾನೆ.

ಜೈಲಿನಲ್ಲಿದ್ದಾಗ ನನಗೆ ಹಾಗೂ ನನ್ನ ಕುಟುಂಬಕ್ಕೆ ಬೆಂಬಲ ನೀಡಿದ ತ್ಯಾಗಿ ಸಮುದಾಯಕ್ಕೆ ಧನ್ಯವಾದಗಳು. ತ್ಯಾಗಿ ಸಮುದಾಯದ ಮಾನಹಾನಿ ಮಾಡುವ ಯತ್ನವೂ ನಡೆದಿದ್ದು, ತನಿಖೆ ಏಕಪಕ್ಷೀಯವಾಗಿರುವುದು ಸಹಜ ಎಂದು ದೂರಿದ್ದಾನೆ.

ರಾಜಕೀಯದಲ್ಲಿ ಮುಂದುವರಿಯುತ್ತೀರಾ ಎಂಬ ಪ್ರಶ್ನೆಗೆ, “ಯಾಕೆ ಬೇಡ, ನಾನೊಬ್ಬ ರಾಜಕೀಯ ನಾಯಕ, ಇನ್ನೇನು ಮಾಡಲಿ? ನನ್ನ ಬೆಂಬಲಿಗರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ” ಎಂದು ತಿಳಿಸಿದ್ದಾನೆ.

ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ, ಬಿಜೆಪಿ ಮುಖಂಡನೆಂದೇ ಬಿಂಬಿತವಾಗಿರುವ ಶ್ರೀಕಾಂತ್ ತ್ಯಾಗಿಯನ್ನು ಉತ್ತರ ಪ್ರದೇಶ ಪೊಲೀಸರು ಮೀರತ್‌ನಲ್ಲಿ ಬಂಧಿಸಿದ್ದರು.

ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಮಹಿಳೆಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತು ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ ಉತ್ತರ ಪ್ರದೇಶ ಆಡಳಿತ ತ್ಯಾಗಿ ವಿರುದ್ಧ ಕಠಿಣ ಕ್ರಮ ಜರುಗಿಸಿತ್ತು. ಗಿಡಗಳನ್ನು ನೆಡುವುದನ್ನು ತಡೆಯಲು ಶ್ರೀಕಾಂತ್ ತ್ಯಾಗಿ ಪ್ರಯತ್ನಿಸಿದಾಗ ಮಹಿಳೆಯನ್ನು ನಿಂದಿಸುತ್ತಿರುವುದು ವಿವಾದ ಹುಟ್ಟಿಹಾಕಿತು.

ರೆಸಿಡೆನ್ಶಿಯಲ್ ಸೊಸೈಟಿಗೆ ಬುಲ್ಡೋಜರ್ ನುಗ್ಗಿಸಲಾಗಿತ್ತು. ತ್ಯಾಗಿಯ ನಿವಾಸದಲ್ಲಿದ್ದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲಾಗಿತ್ತು. ಆತನ ವಿರುದ್ಧ ರಾಜ್ಯದ ಕಠಿಣ ಗೂಂಡಾ ಕಾಯ್ದೆಯಡಿಯೂ ಆರೋಪ ಹೊರಿಸಲಾಗಿದೆ.

ಇದನ್ನೂ ಓದಿರಿ: ಹೇ ಹಿಂದೂ ಎದ್ದೇಳು: ಪೋಸ್ಟ್‌ ಕಾರ್ಡ್ ಪೋಸ್ಟರ್‌ಗೆ ನಾನಾ ರೂಪ!

ಅಪಾರ್ಟ್‌ಮೆಂಟ್‌ನ ಕಾಮನ್ ಏರಿಯಾ ಜಾಗವನ್ನು ಶ್ರಿಕಾಂತ್ ತ್ಯಾಗಿ ಅತಿಕ್ರಮಣ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದರು. ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದನು. ಯುಪಿ ಪೊಲೀಸರು ತ್ಯಾಗಿಯನ್ನು ಹುಡುಕಲು ಪ್ರಾರಂಭಿಸಿದಾಗ, ಆತ ಸರಣಿ ಅಪರಾಧಗಳನ್ನು ಮಾಡಿರುವುದು ಬೆಳಕಿಗೆ ಬಂದಿತ್ತು. ತ್ಯಾಗಿ ವಿರುದ್ಧ ಕೊಲೆ ಯತ್ನ ಮತ್ತು ಸುಲಿಗೆಯಂತಹ ಗಂಭೀರ ಆರೋಪಗಳ ಅಡಿಯಲ್ಲಿ ಈ ಹಿಂದೆ 9 ಪ್ರಕರಣಗಳು ದಾಖಲಾಗಿವೆ.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯನೆಂದು ತ್ಯಾಗಿ ಹೇಳಿಕೊಂಡಿದ್ದಾನೆ. ಆತ ಸೋಷಿಯಲ್ ಮೀಡಿಯಾಗಳಲ್ಲಿ ಪೊಸ್ಟ್‌ ಮಾಡಲಾದ ಹಲವಾರು ಪೋಟೊಗಳಲ್ಲಿ ಬಿಜೆಪಿ ನಾಯಕರೊಂದಿಗೆ ಇರುವುದನ್ನು ಕಾಣಬಹುದು.

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರೊಂದಿಗೆ ತ್ಯಾಗಿ ಫೋಟೋ ತೆಗೆಸಿಕೊಂಡಿರುವುದು, ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಆದರೆ ತ್ಯಾಗಿ ಬಿಜೆಪಿ ಮುಖಂಡನಲ್ಲ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...