Homeಮುಖಪುಟಮಹಿಳೆ ಮೇಲೆ ಹಲ್ಲೆ ಪ್ರಕರಣ: ಬಿಡುಗಡೆಯಾದ ರಾಜಕಾರಣಿಗೆ ಹೂಮಳೆ ಸುರಿಸಿ ಸ್ವಾಗತ

ಮಹಿಳೆ ಮೇಲೆ ಹಲ್ಲೆ ಪ್ರಕರಣ: ಬಿಡುಗಡೆಯಾದ ರಾಜಕಾರಣಿಗೆ ಹೂಮಳೆ ಸುರಿಸಿ ಸ್ವಾಗತ

- Advertisement -
- Advertisement -

ನೋಯ್ಡಾದ ಸೊಸೈಟಿಯೊಂದರಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತಕ್ಕೊಳಗಾಗಿದ್ದ ರಾಜಕಾರಣಿ, ಗ್ಯಾಂಗ್‌ಸ್ಟರ್‌ ಆರೋಪ ಹೊತ್ತಿರುವ ಶ್ರೀಕಾಂತ್ ತ್ಯಾಗಿ ಜೈಲಿನಿಂದ ಬಿಡುಗಡೆಯಾದ ಬಳಿಕ ಭವ್ಯ ಸ್ವಾಗತ ಪಡೆದಿದ್ದಾನೆ.

ತ್ಯಾಗಿಯ ಬೆಂಬಲಿಗರು “ಶ್ರೀಕಾಂತ್ ಭಯ್ಯಾ ಜಿಂದಾಬಾದ್” ಎಂಬ ಘೋಷಣೆಗಳನ್ನು ಕೂಗಿದ್ದು ತ್ಯಾಗಿಯ ಮೇಲೆ ಹೂ ಮಳೆ ಸುರಿಸಿದ್ದಾರೆ. ಜೊತೆ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮನೆಗೆ ಹಿಂತಿರುಗಿದ ತ್ಯಾಗಿ ತನ್ನ ವಿರೋಧಿಗಳನ್ನು ಕಟುವಾಗಿ ಟೀಕಿಸಿದ್ದಾನೆ. “ಗ್ಯಾಗ್‌ಸ್ಟರ್‌ ಎಂದು ನನ್ನ ವಿರುದ್ಧ ಆರೋಪ ಹೊರಿಸಲಾಗಿದ್ದು, ಅದು ಕಟ್ಟುಕತೆಯಾಗಿದೆ. ನನ್ನ ರಾಜಕೀಯ ಜೀವನವನ್ನು ಮುಗಿಸುವ ಪ್ರಯತ್ನದಲ್ಲಿ ‘ಪ್ರಾಯೋಜಿತ ಪಿತೂರಿ’ ನಡೆಸಲಾಗಿದೆ” ಎಂದಿದ್ದಾನೆ.

“ಈ ಷಡ್ಯಂತ್ರದ ಭಾಗವಾಗಿ ನಮ್ಮ ಸಹೋದರಿಯೊಬ್ಬರನ್ನು ಮುಂದಿಟ್ಟುಕೊಂಡು ನಮ್ಮ ನಡುವೆಯೇ ವಿವಾದ ಸೃಷ್ಟಿಸಿದ್ದಾರೆ. ದೃಶ್ಯವನ್ನು ಚಿತ್ರೀಕರಿಸುವ ಮೂಲಕ ನನ್ನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ನಡೆದಿದೆ” ಎಂದು ಆರೋಪಿಸಿದ್ದಾನೆ.

ಜೈಲಿನಲ್ಲಿದ್ದಾಗ ನನಗೆ ಹಾಗೂ ನನ್ನ ಕುಟುಂಬಕ್ಕೆ ಬೆಂಬಲ ನೀಡಿದ ತ್ಯಾಗಿ ಸಮುದಾಯಕ್ಕೆ ಧನ್ಯವಾದಗಳು. ತ್ಯಾಗಿ ಸಮುದಾಯದ ಮಾನಹಾನಿ ಮಾಡುವ ಯತ್ನವೂ ನಡೆದಿದ್ದು, ತನಿಖೆ ಏಕಪಕ್ಷೀಯವಾಗಿರುವುದು ಸಹಜ ಎಂದು ದೂರಿದ್ದಾನೆ.

ರಾಜಕೀಯದಲ್ಲಿ ಮುಂದುವರಿಯುತ್ತೀರಾ ಎಂಬ ಪ್ರಶ್ನೆಗೆ, “ಯಾಕೆ ಬೇಡ, ನಾನೊಬ್ಬ ರಾಜಕೀಯ ನಾಯಕ, ಇನ್ನೇನು ಮಾಡಲಿ? ನನ್ನ ಬೆಂಬಲಿಗರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ” ಎಂದು ತಿಳಿಸಿದ್ದಾನೆ.

ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ, ಬಿಜೆಪಿ ಮುಖಂಡನೆಂದೇ ಬಿಂಬಿತವಾಗಿರುವ ಶ್ರೀಕಾಂತ್ ತ್ಯಾಗಿಯನ್ನು ಉತ್ತರ ಪ್ರದೇಶ ಪೊಲೀಸರು ಮೀರತ್‌ನಲ್ಲಿ ಬಂಧಿಸಿದ್ದರು.

ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಮಹಿಳೆಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತು ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ ಉತ್ತರ ಪ್ರದೇಶ ಆಡಳಿತ ತ್ಯಾಗಿ ವಿರುದ್ಧ ಕಠಿಣ ಕ್ರಮ ಜರುಗಿಸಿತ್ತು. ಗಿಡಗಳನ್ನು ನೆಡುವುದನ್ನು ತಡೆಯಲು ಶ್ರೀಕಾಂತ್ ತ್ಯಾಗಿ ಪ್ರಯತ್ನಿಸಿದಾಗ ಮಹಿಳೆಯನ್ನು ನಿಂದಿಸುತ್ತಿರುವುದು ವಿವಾದ ಹುಟ್ಟಿಹಾಕಿತು.

ರೆಸಿಡೆನ್ಶಿಯಲ್ ಸೊಸೈಟಿಗೆ ಬುಲ್ಡೋಜರ್ ನುಗ್ಗಿಸಲಾಗಿತ್ತು. ತ್ಯಾಗಿಯ ನಿವಾಸದಲ್ಲಿದ್ದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲಾಗಿತ್ತು. ಆತನ ವಿರುದ್ಧ ರಾಜ್ಯದ ಕಠಿಣ ಗೂಂಡಾ ಕಾಯ್ದೆಯಡಿಯೂ ಆರೋಪ ಹೊರಿಸಲಾಗಿದೆ.

ಇದನ್ನೂ ಓದಿರಿ: ಹೇ ಹಿಂದೂ ಎದ್ದೇಳು: ಪೋಸ್ಟ್‌ ಕಾರ್ಡ್ ಪೋಸ್ಟರ್‌ಗೆ ನಾನಾ ರೂಪ!

ಅಪಾರ್ಟ್‌ಮೆಂಟ್‌ನ ಕಾಮನ್ ಏರಿಯಾ ಜಾಗವನ್ನು ಶ್ರಿಕಾಂತ್ ತ್ಯಾಗಿ ಅತಿಕ್ರಮಣ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದರು. ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದನು. ಯುಪಿ ಪೊಲೀಸರು ತ್ಯಾಗಿಯನ್ನು ಹುಡುಕಲು ಪ್ರಾರಂಭಿಸಿದಾಗ, ಆತ ಸರಣಿ ಅಪರಾಧಗಳನ್ನು ಮಾಡಿರುವುದು ಬೆಳಕಿಗೆ ಬಂದಿತ್ತು. ತ್ಯಾಗಿ ವಿರುದ್ಧ ಕೊಲೆ ಯತ್ನ ಮತ್ತು ಸುಲಿಗೆಯಂತಹ ಗಂಭೀರ ಆರೋಪಗಳ ಅಡಿಯಲ್ಲಿ ಈ ಹಿಂದೆ 9 ಪ್ರಕರಣಗಳು ದಾಖಲಾಗಿವೆ.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯನೆಂದು ತ್ಯಾಗಿ ಹೇಳಿಕೊಂಡಿದ್ದಾನೆ. ಆತ ಸೋಷಿಯಲ್ ಮೀಡಿಯಾಗಳಲ್ಲಿ ಪೊಸ್ಟ್‌ ಮಾಡಲಾದ ಹಲವಾರು ಪೋಟೊಗಳಲ್ಲಿ ಬಿಜೆಪಿ ನಾಯಕರೊಂದಿಗೆ ಇರುವುದನ್ನು ಕಾಣಬಹುದು.

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರೊಂದಿಗೆ ತ್ಯಾಗಿ ಫೋಟೋ ತೆಗೆಸಿಕೊಂಡಿರುವುದು, ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಆದರೆ ತ್ಯಾಗಿ ಬಿಜೆಪಿ ಮುಖಂಡನಲ್ಲ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...