Homeಮುಖಪುಟಮಹಿಳೆ ಮೇಲೆ ಹಲ್ಲೆ ಪ್ರಕರಣ: ಬಿಡುಗಡೆಯಾದ ರಾಜಕಾರಣಿಗೆ ಹೂಮಳೆ ಸುರಿಸಿ ಸ್ವಾಗತ

ಮಹಿಳೆ ಮೇಲೆ ಹಲ್ಲೆ ಪ್ರಕರಣ: ಬಿಡುಗಡೆಯಾದ ರಾಜಕಾರಣಿಗೆ ಹೂಮಳೆ ಸುರಿಸಿ ಸ್ವಾಗತ

- Advertisement -
- Advertisement -

ನೋಯ್ಡಾದ ಸೊಸೈಟಿಯೊಂದರಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತಕ್ಕೊಳಗಾಗಿದ್ದ ರಾಜಕಾರಣಿ, ಗ್ಯಾಂಗ್‌ಸ್ಟರ್‌ ಆರೋಪ ಹೊತ್ತಿರುವ ಶ್ರೀಕಾಂತ್ ತ್ಯಾಗಿ ಜೈಲಿನಿಂದ ಬಿಡುಗಡೆಯಾದ ಬಳಿಕ ಭವ್ಯ ಸ್ವಾಗತ ಪಡೆದಿದ್ದಾನೆ.

ತ್ಯಾಗಿಯ ಬೆಂಬಲಿಗರು “ಶ್ರೀಕಾಂತ್ ಭಯ್ಯಾ ಜಿಂದಾಬಾದ್” ಎಂಬ ಘೋಷಣೆಗಳನ್ನು ಕೂಗಿದ್ದು ತ್ಯಾಗಿಯ ಮೇಲೆ ಹೂ ಮಳೆ ಸುರಿಸಿದ್ದಾರೆ. ಜೊತೆ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮನೆಗೆ ಹಿಂತಿರುಗಿದ ತ್ಯಾಗಿ ತನ್ನ ವಿರೋಧಿಗಳನ್ನು ಕಟುವಾಗಿ ಟೀಕಿಸಿದ್ದಾನೆ. “ಗ್ಯಾಗ್‌ಸ್ಟರ್‌ ಎಂದು ನನ್ನ ವಿರುದ್ಧ ಆರೋಪ ಹೊರಿಸಲಾಗಿದ್ದು, ಅದು ಕಟ್ಟುಕತೆಯಾಗಿದೆ. ನನ್ನ ರಾಜಕೀಯ ಜೀವನವನ್ನು ಮುಗಿಸುವ ಪ್ರಯತ್ನದಲ್ಲಿ ‘ಪ್ರಾಯೋಜಿತ ಪಿತೂರಿ’ ನಡೆಸಲಾಗಿದೆ” ಎಂದಿದ್ದಾನೆ.

“ಈ ಷಡ್ಯಂತ್ರದ ಭಾಗವಾಗಿ ನಮ್ಮ ಸಹೋದರಿಯೊಬ್ಬರನ್ನು ಮುಂದಿಟ್ಟುಕೊಂಡು ನಮ್ಮ ನಡುವೆಯೇ ವಿವಾದ ಸೃಷ್ಟಿಸಿದ್ದಾರೆ. ದೃಶ್ಯವನ್ನು ಚಿತ್ರೀಕರಿಸುವ ಮೂಲಕ ನನ್ನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ನಡೆದಿದೆ” ಎಂದು ಆರೋಪಿಸಿದ್ದಾನೆ.

ಜೈಲಿನಲ್ಲಿದ್ದಾಗ ನನಗೆ ಹಾಗೂ ನನ್ನ ಕುಟುಂಬಕ್ಕೆ ಬೆಂಬಲ ನೀಡಿದ ತ್ಯಾಗಿ ಸಮುದಾಯಕ್ಕೆ ಧನ್ಯವಾದಗಳು. ತ್ಯಾಗಿ ಸಮುದಾಯದ ಮಾನಹಾನಿ ಮಾಡುವ ಯತ್ನವೂ ನಡೆದಿದ್ದು, ತನಿಖೆ ಏಕಪಕ್ಷೀಯವಾಗಿರುವುದು ಸಹಜ ಎಂದು ದೂರಿದ್ದಾನೆ.

ರಾಜಕೀಯದಲ್ಲಿ ಮುಂದುವರಿಯುತ್ತೀರಾ ಎಂಬ ಪ್ರಶ್ನೆಗೆ, “ಯಾಕೆ ಬೇಡ, ನಾನೊಬ್ಬ ರಾಜಕೀಯ ನಾಯಕ, ಇನ್ನೇನು ಮಾಡಲಿ? ನನ್ನ ಬೆಂಬಲಿಗರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ” ಎಂದು ತಿಳಿಸಿದ್ದಾನೆ.

ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ, ಬಿಜೆಪಿ ಮುಖಂಡನೆಂದೇ ಬಿಂಬಿತವಾಗಿರುವ ಶ್ರೀಕಾಂತ್ ತ್ಯಾಗಿಯನ್ನು ಉತ್ತರ ಪ್ರದೇಶ ಪೊಲೀಸರು ಮೀರತ್‌ನಲ್ಲಿ ಬಂಧಿಸಿದ್ದರು.

ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಮಹಿಳೆಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತು ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ ಉತ್ತರ ಪ್ರದೇಶ ಆಡಳಿತ ತ್ಯಾಗಿ ವಿರುದ್ಧ ಕಠಿಣ ಕ್ರಮ ಜರುಗಿಸಿತ್ತು. ಗಿಡಗಳನ್ನು ನೆಡುವುದನ್ನು ತಡೆಯಲು ಶ್ರೀಕಾಂತ್ ತ್ಯಾಗಿ ಪ್ರಯತ್ನಿಸಿದಾಗ ಮಹಿಳೆಯನ್ನು ನಿಂದಿಸುತ್ತಿರುವುದು ವಿವಾದ ಹುಟ್ಟಿಹಾಕಿತು.

ರೆಸಿಡೆನ್ಶಿಯಲ್ ಸೊಸೈಟಿಗೆ ಬುಲ್ಡೋಜರ್ ನುಗ್ಗಿಸಲಾಗಿತ್ತು. ತ್ಯಾಗಿಯ ನಿವಾಸದಲ್ಲಿದ್ದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲಾಗಿತ್ತು. ಆತನ ವಿರುದ್ಧ ರಾಜ್ಯದ ಕಠಿಣ ಗೂಂಡಾ ಕಾಯ್ದೆಯಡಿಯೂ ಆರೋಪ ಹೊರಿಸಲಾಗಿದೆ.

ಇದನ್ನೂ ಓದಿರಿ: ಹೇ ಹಿಂದೂ ಎದ್ದೇಳು: ಪೋಸ್ಟ್‌ ಕಾರ್ಡ್ ಪೋಸ್ಟರ್‌ಗೆ ನಾನಾ ರೂಪ!

ಅಪಾರ್ಟ್‌ಮೆಂಟ್‌ನ ಕಾಮನ್ ಏರಿಯಾ ಜಾಗವನ್ನು ಶ್ರಿಕಾಂತ್ ತ್ಯಾಗಿ ಅತಿಕ್ರಮಣ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದರು. ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದನು. ಯುಪಿ ಪೊಲೀಸರು ತ್ಯಾಗಿಯನ್ನು ಹುಡುಕಲು ಪ್ರಾರಂಭಿಸಿದಾಗ, ಆತ ಸರಣಿ ಅಪರಾಧಗಳನ್ನು ಮಾಡಿರುವುದು ಬೆಳಕಿಗೆ ಬಂದಿತ್ತು. ತ್ಯಾಗಿ ವಿರುದ್ಧ ಕೊಲೆ ಯತ್ನ ಮತ್ತು ಸುಲಿಗೆಯಂತಹ ಗಂಭೀರ ಆರೋಪಗಳ ಅಡಿಯಲ್ಲಿ ಈ ಹಿಂದೆ 9 ಪ್ರಕರಣಗಳು ದಾಖಲಾಗಿವೆ.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯನೆಂದು ತ್ಯಾಗಿ ಹೇಳಿಕೊಂಡಿದ್ದಾನೆ. ಆತ ಸೋಷಿಯಲ್ ಮೀಡಿಯಾಗಳಲ್ಲಿ ಪೊಸ್ಟ್‌ ಮಾಡಲಾದ ಹಲವಾರು ಪೋಟೊಗಳಲ್ಲಿ ಬಿಜೆಪಿ ನಾಯಕರೊಂದಿಗೆ ಇರುವುದನ್ನು ಕಾಣಬಹುದು.

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರೊಂದಿಗೆ ತ್ಯಾಗಿ ಫೋಟೋ ತೆಗೆಸಿಕೊಂಡಿರುವುದು, ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಆದರೆ ತ್ಯಾಗಿ ಬಿಜೆಪಿ ಮುಖಂಡನಲ್ಲ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...