Homeಮುಖಪುಟಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

ಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

- Advertisement -
- Advertisement -

ಅಸ್ಸಾಂನ ನಲ್ಬಾರಿ ಜಿಲ್ಲೆಯ ಹಳ್ಳಿಯ ಯುವತಿಯೊಬ್ಬರು ವಾಟ್ಸಾಪ್ ಸ್ಟೇಟಸ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಅಪ್ಲೋಡ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪೋಸ್ಟ್‌ನಲ್ಲಿ ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗೋಮಾಂಸವನ್ನು ಉಡುಗೊರೆಯಾಗಿ ನೀಡುವ ಪ್ರಸ್ತಾಪವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ನಿನ್ನೆ ಯುವತಿಯೊಬ್ಬಳು ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ‘ಆಕ್ಷೇಪಾರ್ಹ ಪೋಸ್ಟ್’ ಅನ್ನು ಅಪ್‌ಲೋಡ್ ಮಾಡಿದ್ದಾರೆ. ನಾವು ಈ ಕುರಿತು ಪ್ರಕರಣ ದಾಖಲಿಸಿ ಬಂಧಿಸಿದ್ದೇವೆ. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ” ಎಂದು ಪೊಲೀಸ್ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಜಾನುವಾರುಗಳ ಅಕ್ರಮ ಸಾಗಣೆ ಮತ್ತು ಗೋಮಾಂಸ ಮಾರಾಟವನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ವಿಧಾನಸಭೆಯಲ್ಲಿ ಹೊಸ “ಅಸ್ಸಾಂ ಜಾನುವಾರು ಸಂರಕ್ಷಣಾ ಮಸೂದೆ- 2021″ ಮಂಡಿಸಿದ ಬಳಿಕ ಇದು ಮೊದಲ ಪ್ರಕರಣವಾಗಿದೆ.

ಈ ಕಾಯ್ದೆ ಪ್ರಕಾರ, ಹಿಂದೂ, ಜೈನ, ಸಿಖ್ ಮತ್ತು ಇತರ ಗೋಮಾಂಸೇತರ ಸಮುದಾಯಗಳು ಹೆಚ್ಚಾಗಿ ವಾಸಿಸುವ ಸ್ಥಳಗಳಲ್ಲಿ ಮತ್ತು ಹಿಂದೂ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳು ಇರುವ ಪ್ರದೇಶದಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ, ಸಾಗಣೆ ಮಾಡುವಂತಿಲ್ಲ.

ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಮಹಿಳೆಯರ ಸ್ಥಿತಿ; ಬಾಣಲೆಯಿಂದ ಬೆಂಕಿಗೆ…

ಯುವತಿ ಬುಧವಾರ ತನ್ನ ಹಸುವಿನ ಫೋಟೋವನ್ನು ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಸತ್ತ ಹಸುವಿನ ಚಿತ್ರವನ್ನು ಪೋಸ್ಟ್ ಮಾಡಿದ್ದರು. ಬಳಿಕ, ಎರಡನೇ ಪೋಸ್ಟ್‌ನಲ್ಲಿ ಗೋಮಂಸವನ್ನು ಮುಖ್ಯಮಂತ್ರಿಗೆ  ನೀಡುವ ಮಾತನಾಡಿದ್ದರು ಎನ್ನಲಾಗಿದೆ.

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗೋಮಾಂಸದ ತುಂಡನ್ನು ಉಡುಗೊರೆಯಾಗಿ ನೀಡುವಂತ ಪೋಸ್ಟ್‌ವೊಂದನ್ನು ಯುವತಿ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಉಲ್ಲೇಖಿಸಿದ್ದಾರೆ. ಬುಧವಾರ, ಮುಸ್ಲಿಂ ಸಮುದಾಯವು ಪ್ರಪಂಚದಾದ್ಯಂತ ಬಕ್ರೀದ್ ಹಬ್ಬವನ್ನು ಆಚರಿಸಿದೆ. ಇಂತಹ ಸಮಯದಲ್ಲಿ ಈ ರೀತಿಯ ‘ಆಕ್ಷೇಪಾರ್ಹ ಪೋಸ್ಟ್’ ಎರಡು ಸಮುದಾಯಗಳಲ್ಲಿ ಗಲಭೆ ಸೃಷ್ಟಿಸಬಹುದು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಯುವತಿಯು ಮಾಜಿ ಸ್ಥಳೀಯ ಬಿಜೆಪಿ ಮುಖಂಡರ ಮಗಳಾಗಿದ್ದು, ಸದ್ಯ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ನಲ್ಬಾರಿ ಘಟಕವು ಯುವತಿ ವಿರುದ್ಧ ಎರಡು ಸಮುದಾಯಗಳ ನಡುವೆ ಕೋಮು ಗಲಭೆ ಉಂಟುಮಾಡಿದ ಪ್ರಕರಣ ದಾಖಲಿಸಿತ್ತು.

“ಇಂತಹ ವಿವಾದಾತ್ಮಕ ಪೋಸ್ಟ್ ಹಿಂದೂ ಸಂಸ್ಕೃತಿಗೆ ಮಾಡಿದ ಅವಮಾನ. ನಮ್ಮ ಸಂಸ್ಕೃತಿಯನ್ನು ಅವಮಾನಿಸುವ ಇಂತಹ ಪ್ರಯತ್ನಗಳನ್ನು ನಾವು ಸಹಿಸಲಾರೆವು. ಹಿಂದೂಗಳು ಹಸುವನ್ನು ಪವಿತ್ರವೆಂದು ಪರಿಗಣಿಸುತ್ತಾರೆ. ಇಂತಹ ವಿಷಯದ ಬಗ್ಗೆ ಆಕೆ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹೇಗೆ ಅಂತಹ ‘ಆಕ್ಷೇಪಾರ್ಹ ಪೋಸ್ಟ್’ ಅನ್ನು ಹಾಕಬಹುದು” ಎಂದು ವಿಶ್ವ ಹಿಂದೂ ಪರಿಷತ್ ಸದಸ್ಯರೊಬ್ಬರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಗುಜರಾತ್: ಬುಡಕಟ್ಟು ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪತಿ ಮತ್ತು ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...