Homeಮುಖಪುಟಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

ಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

- Advertisement -
- Advertisement -

ಅಸ್ಸಾಂನ ನಲ್ಬಾರಿ ಜಿಲ್ಲೆಯ ಹಳ್ಳಿಯ ಯುವತಿಯೊಬ್ಬರು ವಾಟ್ಸಾಪ್ ಸ್ಟೇಟಸ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಅಪ್ಲೋಡ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪೋಸ್ಟ್‌ನಲ್ಲಿ ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗೋಮಾಂಸವನ್ನು ಉಡುಗೊರೆಯಾಗಿ ನೀಡುವ ಪ್ರಸ್ತಾಪವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ನಿನ್ನೆ ಯುವತಿಯೊಬ್ಬಳು ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ‘ಆಕ್ಷೇಪಾರ್ಹ ಪೋಸ್ಟ್’ ಅನ್ನು ಅಪ್‌ಲೋಡ್ ಮಾಡಿದ್ದಾರೆ. ನಾವು ಈ ಕುರಿತು ಪ್ರಕರಣ ದಾಖಲಿಸಿ ಬಂಧಿಸಿದ್ದೇವೆ. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ” ಎಂದು ಪೊಲೀಸ್ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಜಾನುವಾರುಗಳ ಅಕ್ರಮ ಸಾಗಣೆ ಮತ್ತು ಗೋಮಾಂಸ ಮಾರಾಟವನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ವಿಧಾನಸಭೆಯಲ್ಲಿ ಹೊಸ “ಅಸ್ಸಾಂ ಜಾನುವಾರು ಸಂರಕ್ಷಣಾ ಮಸೂದೆ- 2021″ ಮಂಡಿಸಿದ ಬಳಿಕ ಇದು ಮೊದಲ ಪ್ರಕರಣವಾಗಿದೆ.

ಈ ಕಾಯ್ದೆ ಪ್ರಕಾರ, ಹಿಂದೂ, ಜೈನ, ಸಿಖ್ ಮತ್ತು ಇತರ ಗೋಮಾಂಸೇತರ ಸಮುದಾಯಗಳು ಹೆಚ್ಚಾಗಿ ವಾಸಿಸುವ ಸ್ಥಳಗಳಲ್ಲಿ ಮತ್ತು ಹಿಂದೂ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳು ಇರುವ ಪ್ರದೇಶದಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ, ಸಾಗಣೆ ಮಾಡುವಂತಿಲ್ಲ.

ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಮಹಿಳೆಯರ ಸ್ಥಿತಿ; ಬಾಣಲೆಯಿಂದ ಬೆಂಕಿಗೆ…

ಯುವತಿ ಬುಧವಾರ ತನ್ನ ಹಸುವಿನ ಫೋಟೋವನ್ನು ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಸತ್ತ ಹಸುವಿನ ಚಿತ್ರವನ್ನು ಪೋಸ್ಟ್ ಮಾಡಿದ್ದರು. ಬಳಿಕ, ಎರಡನೇ ಪೋಸ್ಟ್‌ನಲ್ಲಿ ಗೋಮಂಸವನ್ನು ಮುಖ್ಯಮಂತ್ರಿಗೆ  ನೀಡುವ ಮಾತನಾಡಿದ್ದರು ಎನ್ನಲಾಗಿದೆ.

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗೋಮಾಂಸದ ತುಂಡನ್ನು ಉಡುಗೊರೆಯಾಗಿ ನೀಡುವಂತ ಪೋಸ್ಟ್‌ವೊಂದನ್ನು ಯುವತಿ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಉಲ್ಲೇಖಿಸಿದ್ದಾರೆ. ಬುಧವಾರ, ಮುಸ್ಲಿಂ ಸಮುದಾಯವು ಪ್ರಪಂಚದಾದ್ಯಂತ ಬಕ್ರೀದ್ ಹಬ್ಬವನ್ನು ಆಚರಿಸಿದೆ. ಇಂತಹ ಸಮಯದಲ್ಲಿ ಈ ರೀತಿಯ ‘ಆಕ್ಷೇಪಾರ್ಹ ಪೋಸ್ಟ್’ ಎರಡು ಸಮುದಾಯಗಳಲ್ಲಿ ಗಲಭೆ ಸೃಷ್ಟಿಸಬಹುದು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಯುವತಿಯು ಮಾಜಿ ಸ್ಥಳೀಯ ಬಿಜೆಪಿ ಮುಖಂಡರ ಮಗಳಾಗಿದ್ದು, ಸದ್ಯ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ನಲ್ಬಾರಿ ಘಟಕವು ಯುವತಿ ವಿರುದ್ಧ ಎರಡು ಸಮುದಾಯಗಳ ನಡುವೆ ಕೋಮು ಗಲಭೆ ಉಂಟುಮಾಡಿದ ಪ್ರಕರಣ ದಾಖಲಿಸಿತ್ತು.

“ಇಂತಹ ವಿವಾದಾತ್ಮಕ ಪೋಸ್ಟ್ ಹಿಂದೂ ಸಂಸ್ಕೃತಿಗೆ ಮಾಡಿದ ಅವಮಾನ. ನಮ್ಮ ಸಂಸ್ಕೃತಿಯನ್ನು ಅವಮಾನಿಸುವ ಇಂತಹ ಪ್ರಯತ್ನಗಳನ್ನು ನಾವು ಸಹಿಸಲಾರೆವು. ಹಿಂದೂಗಳು ಹಸುವನ್ನು ಪವಿತ್ರವೆಂದು ಪರಿಗಣಿಸುತ್ತಾರೆ. ಇಂತಹ ವಿಷಯದ ಬಗ್ಗೆ ಆಕೆ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹೇಗೆ ಅಂತಹ ‘ಆಕ್ಷೇಪಾರ್ಹ ಪೋಸ್ಟ್’ ಅನ್ನು ಹಾಕಬಹುದು” ಎಂದು ವಿಶ್ವ ಹಿಂದೂ ಪರಿಷತ್ ಸದಸ್ಯರೊಬ್ಬರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಗುಜರಾತ್: ಬುಡಕಟ್ಟು ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪತಿ ಮತ್ತು ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...