Homeಮುಖಪುಟಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

ಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

- Advertisement -
- Advertisement -

ಅಸ್ಸಾಂನ ನಲ್ಬಾರಿ ಜಿಲ್ಲೆಯ ಹಳ್ಳಿಯ ಯುವತಿಯೊಬ್ಬರು ವಾಟ್ಸಾಪ್ ಸ್ಟೇಟಸ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಅಪ್ಲೋಡ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪೋಸ್ಟ್‌ನಲ್ಲಿ ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗೋಮಾಂಸವನ್ನು ಉಡುಗೊರೆಯಾಗಿ ನೀಡುವ ಪ್ರಸ್ತಾಪವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ನಿನ್ನೆ ಯುವತಿಯೊಬ್ಬಳು ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ‘ಆಕ್ಷೇಪಾರ್ಹ ಪೋಸ್ಟ್’ ಅನ್ನು ಅಪ್‌ಲೋಡ್ ಮಾಡಿದ್ದಾರೆ. ನಾವು ಈ ಕುರಿತು ಪ್ರಕರಣ ದಾಖಲಿಸಿ ಬಂಧಿಸಿದ್ದೇವೆ. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ” ಎಂದು ಪೊಲೀಸ್ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಜಾನುವಾರುಗಳ ಅಕ್ರಮ ಸಾಗಣೆ ಮತ್ತು ಗೋಮಾಂಸ ಮಾರಾಟವನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ವಿಧಾನಸಭೆಯಲ್ಲಿ ಹೊಸ “ಅಸ್ಸಾಂ ಜಾನುವಾರು ಸಂರಕ್ಷಣಾ ಮಸೂದೆ- 2021″ ಮಂಡಿಸಿದ ಬಳಿಕ ಇದು ಮೊದಲ ಪ್ರಕರಣವಾಗಿದೆ.

ಈ ಕಾಯ್ದೆ ಪ್ರಕಾರ, ಹಿಂದೂ, ಜೈನ, ಸಿಖ್ ಮತ್ತು ಇತರ ಗೋಮಾಂಸೇತರ ಸಮುದಾಯಗಳು ಹೆಚ್ಚಾಗಿ ವಾಸಿಸುವ ಸ್ಥಳಗಳಲ್ಲಿ ಮತ್ತು ಹಿಂದೂ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳು ಇರುವ ಪ್ರದೇಶದಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ, ಸಾಗಣೆ ಮಾಡುವಂತಿಲ್ಲ.

ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಮಹಿಳೆಯರ ಸ್ಥಿತಿ; ಬಾಣಲೆಯಿಂದ ಬೆಂಕಿಗೆ…

ಯುವತಿ ಬುಧವಾರ ತನ್ನ ಹಸುವಿನ ಫೋಟೋವನ್ನು ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಸತ್ತ ಹಸುವಿನ ಚಿತ್ರವನ್ನು ಪೋಸ್ಟ್ ಮಾಡಿದ್ದರು. ಬಳಿಕ, ಎರಡನೇ ಪೋಸ್ಟ್‌ನಲ್ಲಿ ಗೋಮಂಸವನ್ನು ಮುಖ್ಯಮಂತ್ರಿಗೆ  ನೀಡುವ ಮಾತನಾಡಿದ್ದರು ಎನ್ನಲಾಗಿದೆ.

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗೋಮಾಂಸದ ತುಂಡನ್ನು ಉಡುಗೊರೆಯಾಗಿ ನೀಡುವಂತ ಪೋಸ್ಟ್‌ವೊಂದನ್ನು ಯುವತಿ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಉಲ್ಲೇಖಿಸಿದ್ದಾರೆ. ಬುಧವಾರ, ಮುಸ್ಲಿಂ ಸಮುದಾಯವು ಪ್ರಪಂಚದಾದ್ಯಂತ ಬಕ್ರೀದ್ ಹಬ್ಬವನ್ನು ಆಚರಿಸಿದೆ. ಇಂತಹ ಸಮಯದಲ್ಲಿ ಈ ರೀತಿಯ ‘ಆಕ್ಷೇಪಾರ್ಹ ಪೋಸ್ಟ್’ ಎರಡು ಸಮುದಾಯಗಳಲ್ಲಿ ಗಲಭೆ ಸೃಷ್ಟಿಸಬಹುದು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಯುವತಿಯು ಮಾಜಿ ಸ್ಥಳೀಯ ಬಿಜೆಪಿ ಮುಖಂಡರ ಮಗಳಾಗಿದ್ದು, ಸದ್ಯ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ನಲ್ಬಾರಿ ಘಟಕವು ಯುವತಿ ವಿರುದ್ಧ ಎರಡು ಸಮುದಾಯಗಳ ನಡುವೆ ಕೋಮು ಗಲಭೆ ಉಂಟುಮಾಡಿದ ಪ್ರಕರಣ ದಾಖಲಿಸಿತ್ತು.

“ಇಂತಹ ವಿವಾದಾತ್ಮಕ ಪೋಸ್ಟ್ ಹಿಂದೂ ಸಂಸ್ಕೃತಿಗೆ ಮಾಡಿದ ಅವಮಾನ. ನಮ್ಮ ಸಂಸ್ಕೃತಿಯನ್ನು ಅವಮಾನಿಸುವ ಇಂತಹ ಪ್ರಯತ್ನಗಳನ್ನು ನಾವು ಸಹಿಸಲಾರೆವು. ಹಿಂದೂಗಳು ಹಸುವನ್ನು ಪವಿತ್ರವೆಂದು ಪರಿಗಣಿಸುತ್ತಾರೆ. ಇಂತಹ ವಿಷಯದ ಬಗ್ಗೆ ಆಕೆ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹೇಗೆ ಅಂತಹ ‘ಆಕ್ಷೇಪಾರ್ಹ ಪೋಸ್ಟ್’ ಅನ್ನು ಹಾಕಬಹುದು” ಎಂದು ವಿಶ್ವ ಹಿಂದೂ ಪರಿಷತ್ ಸದಸ್ಯರೊಬ್ಬರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಗುಜರಾತ್: ಬುಡಕಟ್ಟು ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪತಿ ಮತ್ತು ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...