Homeಮುಖಪುಟಲಾಕ್‌ಡೌನ್‌ ಉಲ್ಲಂಘಿಸಿದ ಗುಜರಾತ್ ಸಚಿವರ ಪುತ್ರನನ್ನು ಪ್ರಶ್ನಿಸಿದ್ದ ಮಹಿಳಾ ಕಾನ್ಸ್ಟೇಬಲ್‌ ರಾಜೀನಾಮೆ!

ಲಾಕ್‌ಡೌನ್‌ ಉಲ್ಲಂಘಿಸಿದ ಗುಜರಾತ್ ಸಚಿವರ ಪುತ್ರನನ್ನು ಪ್ರಶ್ನಿಸಿದ್ದ ಮಹಿಳಾ ಕಾನ್ಸ್ಟೇಬಲ್‌ ರಾಜೀನಾಮೆ!

- Advertisement -
- Advertisement -

ಕಳೆದ ವಾರ ಗುಜರಾತ್‌ನ ಸೂರತ್‌ನಲ್ಲಿ ಲಾಕ್‌ಡೌನ್‌ನ ರಾತ್ರಿ ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿದ್ದ ಸಚಿವರ ಪುತ್ರನನ್ನು ತಡೆದು ಪ್ರಶ್ನಿಸಿದ್ದ ಮಹಿಳಾ ಕಾನ್ಸ್ಟೇಬಲ್ ಕೊನೆಗೂ ರಾಜೀನಾಮೆ ನೀಡಿದ್ದಾರೆ.

ಆರೋಗ್ಯ ಸಚಿವ ಕುಮಾರ್‌ ಕನಾನಿ ಪುತ್ರ ಪ್ರಕಾಶ್ ಪೊಲೀಸ್ ತಮ್ಮ ಸ್ನೇಹಿತರೊಂದಿಗೆ ರಾತ್ರಿ ವೇಳೆ ತಮ್ಮ ತಂದೆಯ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಪೊಲೀಸರ್ ಸಿಬ್ಬಂದಿ ಸುನೀತಾ ಯಾದವ್‌ರವರು ತಡೆದಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರ ನಡುವೆಯೂ ಜೋರು ಮಾತುಕತೆ ನಡೆದಿದೆ.

ವೈರಲ್ ವಿಡಿಯೋದಲ್ಲಿ ದಾಖಲಾದಂತೆ “ನಾನು ಮನಸ್ಸು ಮಾಡಿದ್ದರೆ ನಿನ್ನನ್ನು 365  ದಿನವೂ ಇಲ್ಲೇ ನಿಲ್ಲುವಂತೆ ಮಾಡಬಲ್ಲೇ” ಎಂದು ಸಚಿವರ ಪುತ್ರ ಹೇಳಿದ್ದಾರೆ. ಇದಕ್ಕೆ ನಾನು ಸಚಿವರಿಗೆ ಹೆದರುವ ಗುಲಾಮಳಲ್ಲ ಎಂದು ಮಹಿಳಾ ಪೊಲೀಸ್ ಹೇಳಿದ್ದಾರೆ.

ನಾನು ಆಸ್ಪತ್ರೆಯಲ್ಲಿ ದಾಖಲಾಗಿರುವ ನಮ್ಮ ಮಾವನನ್ನು ನೋಡಲು ಹೋಗುತ್ತಿದ್ದೇನೆ ಎಂದು ಸಚಿವರ ಪುತ್ರ ಹೇಳಿದ್ದಕ್ಕೆ, ಮಾಸ್ಕ್ ಏಕೆ ಧರಿಸಿಲ್ಲ? ಎಂಎಲ್‌ಎ ಎಂದು ಬರೆದಿರುವ ಈ ಕಾರು ಯಾರದು? ನೀವೇಕೆ ಬಳಸುತ್ತಿದ್ದೀರಿ ಎಂದು ಮಹಿಳಾ ಪೊಲೀಸ್ ಪ್ರಶ್ನಿಸಿದ್ದಾರೆ.

ಕೂಡಲೇ ತಮ್ಮ ತಂದೆಗೆ ಫೋನಾಯಿಸಿದ ಪ್ರಕಾಶ್ ಕನಾನಿ ಮಹಿಳಾ ಪೊಲೀಸ್ ಮೇಲೆ ಆರೋಪಗಳ ಸುರಿಮಳೆಗೈದಿದ್ದಾರೆ. ಅಲ್ಲಿಂದ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಫೋನ್ ಹೋಗಿ ಕೆಲ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸಚಿವರ ಪುತ್ರರನ್ನು ಅಲ್ಲಿಂದ ಕಳಿಸಲಾಗಿದೆ. ಮಹಿಳಾ ಪೊಲೀಸ್ ಅನ್ನು ಸಹ ಅಲ್ಲಿಂದ ಹೊರಕಳಿಸಲಾಗಿದೆ.

ಅಂದು ನಡೆದ ಘಟನೆಯನ್ನು ಕೆಲವರು ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಮಹಿಳಾ ಪೊಲೀಸ್ ತನ್ನ ಕೆಲಸ ತಾನು ಮಾಡಿದ್ದಾರೆ. ಆದರೆ ಸಚಿವರ ಪುತ್ರ ನಿಯಮ ಮೀರಿ ವರ್ತಿಸಿದ್ದು, ಬೆದರಿಕೆ ಹಾಕಿದ್ದಾನೆ. ಶಿಕ್ಷೆ ಆಗಬೇಕಾದುದ್ದು ಆತನಿಗೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಕಳೆದ ಬುಧವಾರ ರಾತ್ರಿ ಸೂರತ್‌ನ ಮಂಗಂಧ್ ಚೌಕ್‌ನಲ್ಲಿ ರಾತ್ರಿ 10.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ವಿಶೇಷ ಶಾಖೆ) ಪಿಎಲ್ ಚೌಧರಿ ತಿಳಿಸಿದ್ದಾರೆ. “ಆಡಿಯೋ ಕ್ಲಿಪ್ ಸೂರತ್ ಪೊಲೀಸ್ ಆಯುಕ್ತ (ಆರ್ ಬಿ ಬ್ರಹ್ಮಭಟ್) ಅವರ ಗಮನಕ್ಕೆ ಬಂದಿದೆ. ಅವರು ಎಸಿಪಿ (ಎ-ಡಿವಿಷನ್) ಸಿಕೆ ಪಟೇಲ್ ಅವರಿಗೆ ವಿಚಾರಣೆ ನಡೆಸಲು ಆದೇಶಿಸಿದ್ದಾರೆ ಎಂದು ತಿಳಿಸಿದ್ದರು.

ಇಂದು ವಿಚಾರಣೆಯ ಬಳಿಕೆ ಮಹಿಳಾ ಪೊಲೀಸ್‌ದೆ ತಪ್ಪು ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಸುನೀತಾ ಯಾದವ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ತನಿಖೆ ನಡೆದರೆ ಸೇವೆಯಿಂದ ಅಮಾನತು ಮಾಡಬೇಕು, ಅಥವಾ ವಜಾಗೊಳಿಸಬೇಕು. ಆದರೆ ಇಲ್ಲಿ ಮಹಿಲಾ ಪೊಲೀಸ್ ವತಿಯಿಂದಲೇ ರಾಜೀನಾಮೆ ಪಡೆಯಲಾಗಿದೆ. ಇದರಲ್ಲಿ ಅಧಿಕಾರದ ದುರ್ಬಳಕೆ ನಡೆದಿದೆ ಎಂದು ಹಲವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...