Homeಮುಖಪುಟಲಾಕ್‌ಡೌನ್‌ ಉಲ್ಲಂಘಿಸಿದ ಗುಜರಾತ್ ಸಚಿವರ ಪುತ್ರನನ್ನು ಪ್ರಶ್ನಿಸಿದ್ದ ಮಹಿಳಾ ಕಾನ್ಸ್ಟೇಬಲ್‌ ರಾಜೀನಾಮೆ!

ಲಾಕ್‌ಡೌನ್‌ ಉಲ್ಲಂಘಿಸಿದ ಗುಜರಾತ್ ಸಚಿವರ ಪುತ್ರನನ್ನು ಪ್ರಶ್ನಿಸಿದ್ದ ಮಹಿಳಾ ಕಾನ್ಸ್ಟೇಬಲ್‌ ರಾಜೀನಾಮೆ!

- Advertisement -
- Advertisement -

ಕಳೆದ ವಾರ ಗುಜರಾತ್‌ನ ಸೂರತ್‌ನಲ್ಲಿ ಲಾಕ್‌ಡೌನ್‌ನ ರಾತ್ರಿ ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿದ್ದ ಸಚಿವರ ಪುತ್ರನನ್ನು ತಡೆದು ಪ್ರಶ್ನಿಸಿದ್ದ ಮಹಿಳಾ ಕಾನ್ಸ್ಟೇಬಲ್ ಕೊನೆಗೂ ರಾಜೀನಾಮೆ ನೀಡಿದ್ದಾರೆ.

ಆರೋಗ್ಯ ಸಚಿವ ಕುಮಾರ್‌ ಕನಾನಿ ಪುತ್ರ ಪ್ರಕಾಶ್ ಪೊಲೀಸ್ ತಮ್ಮ ಸ್ನೇಹಿತರೊಂದಿಗೆ ರಾತ್ರಿ ವೇಳೆ ತಮ್ಮ ತಂದೆಯ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಪೊಲೀಸರ್ ಸಿಬ್ಬಂದಿ ಸುನೀತಾ ಯಾದವ್‌ರವರು ತಡೆದಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರ ನಡುವೆಯೂ ಜೋರು ಮಾತುಕತೆ ನಡೆದಿದೆ.

ವೈರಲ್ ವಿಡಿಯೋದಲ್ಲಿ ದಾಖಲಾದಂತೆ “ನಾನು ಮನಸ್ಸು ಮಾಡಿದ್ದರೆ ನಿನ್ನನ್ನು 365  ದಿನವೂ ಇಲ್ಲೇ ನಿಲ್ಲುವಂತೆ ಮಾಡಬಲ್ಲೇ” ಎಂದು ಸಚಿವರ ಪುತ್ರ ಹೇಳಿದ್ದಾರೆ. ಇದಕ್ಕೆ ನಾನು ಸಚಿವರಿಗೆ ಹೆದರುವ ಗುಲಾಮಳಲ್ಲ ಎಂದು ಮಹಿಳಾ ಪೊಲೀಸ್ ಹೇಳಿದ್ದಾರೆ.

ನಾನು ಆಸ್ಪತ್ರೆಯಲ್ಲಿ ದಾಖಲಾಗಿರುವ ನಮ್ಮ ಮಾವನನ್ನು ನೋಡಲು ಹೋಗುತ್ತಿದ್ದೇನೆ ಎಂದು ಸಚಿವರ ಪುತ್ರ ಹೇಳಿದ್ದಕ್ಕೆ, ಮಾಸ್ಕ್ ಏಕೆ ಧರಿಸಿಲ್ಲ? ಎಂಎಲ್‌ಎ ಎಂದು ಬರೆದಿರುವ ಈ ಕಾರು ಯಾರದು? ನೀವೇಕೆ ಬಳಸುತ್ತಿದ್ದೀರಿ ಎಂದು ಮಹಿಳಾ ಪೊಲೀಸ್ ಪ್ರಶ್ನಿಸಿದ್ದಾರೆ.

ಕೂಡಲೇ ತಮ್ಮ ತಂದೆಗೆ ಫೋನಾಯಿಸಿದ ಪ್ರಕಾಶ್ ಕನಾನಿ ಮಹಿಳಾ ಪೊಲೀಸ್ ಮೇಲೆ ಆರೋಪಗಳ ಸುರಿಮಳೆಗೈದಿದ್ದಾರೆ. ಅಲ್ಲಿಂದ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಫೋನ್ ಹೋಗಿ ಕೆಲ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸಚಿವರ ಪುತ್ರರನ್ನು ಅಲ್ಲಿಂದ ಕಳಿಸಲಾಗಿದೆ. ಮಹಿಳಾ ಪೊಲೀಸ್ ಅನ್ನು ಸಹ ಅಲ್ಲಿಂದ ಹೊರಕಳಿಸಲಾಗಿದೆ.

ಅಂದು ನಡೆದ ಘಟನೆಯನ್ನು ಕೆಲವರು ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಮಹಿಳಾ ಪೊಲೀಸ್ ತನ್ನ ಕೆಲಸ ತಾನು ಮಾಡಿದ್ದಾರೆ. ಆದರೆ ಸಚಿವರ ಪುತ್ರ ನಿಯಮ ಮೀರಿ ವರ್ತಿಸಿದ್ದು, ಬೆದರಿಕೆ ಹಾಕಿದ್ದಾನೆ. ಶಿಕ್ಷೆ ಆಗಬೇಕಾದುದ್ದು ಆತನಿಗೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಕಳೆದ ಬುಧವಾರ ರಾತ್ರಿ ಸೂರತ್‌ನ ಮಂಗಂಧ್ ಚೌಕ್‌ನಲ್ಲಿ ರಾತ್ರಿ 10.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ವಿಶೇಷ ಶಾಖೆ) ಪಿಎಲ್ ಚೌಧರಿ ತಿಳಿಸಿದ್ದಾರೆ. “ಆಡಿಯೋ ಕ್ಲಿಪ್ ಸೂರತ್ ಪೊಲೀಸ್ ಆಯುಕ್ತ (ಆರ್ ಬಿ ಬ್ರಹ್ಮಭಟ್) ಅವರ ಗಮನಕ್ಕೆ ಬಂದಿದೆ. ಅವರು ಎಸಿಪಿ (ಎ-ಡಿವಿಷನ್) ಸಿಕೆ ಪಟೇಲ್ ಅವರಿಗೆ ವಿಚಾರಣೆ ನಡೆಸಲು ಆದೇಶಿಸಿದ್ದಾರೆ ಎಂದು ತಿಳಿಸಿದ್ದರು.

ಇಂದು ವಿಚಾರಣೆಯ ಬಳಿಕೆ ಮಹಿಳಾ ಪೊಲೀಸ್‌ದೆ ತಪ್ಪು ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಸುನೀತಾ ಯಾದವ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ತನಿಖೆ ನಡೆದರೆ ಸೇವೆಯಿಂದ ಅಮಾನತು ಮಾಡಬೇಕು, ಅಥವಾ ವಜಾಗೊಳಿಸಬೇಕು. ಆದರೆ ಇಲ್ಲಿ ಮಹಿಲಾ ಪೊಲೀಸ್ ವತಿಯಿಂದಲೇ ರಾಜೀನಾಮೆ ಪಡೆಯಲಾಗಿದೆ. ಇದರಲ್ಲಿ ಅಧಿಕಾರದ ದುರ್ಬಳಕೆ ನಡೆದಿದೆ ಎಂದು ಹಲವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...