Homeಕರೋನಾ ತಲ್ಲಣ’ಥೂ... ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

"ಸಿಇಒ ಪ್ರತಿದಿನ 300 ಮಂದಿಗೆ ಕೊರೊನಾ ರ್‍ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಿಸಬೇಕು ಎಂದು ಟಾರ್ಗೆಟ್ ನೀಡುತ್ತಿದ್ದರು, ಇದು ಮಾಡದಿದ್ದರೆ ಅವರನ್ನು ಏಕವಚನದಲ್ಲಿ ನಿಂದಿಸುತ್ತಿದ್ದರು. ಇದರಿಂದಾಗಿ ವೈದ್ಯ ನಾಗೇಂದ್ರ ಒತ್ತಡಕ್ಕೀಡಾಗಿದ್ದರು" ಎಂದು ವೈದ್ಯರ ಸಂಬಂಧಿಕರು ಹೇಳಿದ್ದಾರೆ.

- Advertisement -
- Advertisement -

ಅಸಹಜ ಸಾವೀಗೀಡಾಗಿದ್ದ ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಅವರ ಅಂತಿಮ ದರ್ಶನಕ್ಕೆ ಹೋಗಿದ್ದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ ಅವರಿಗೆ ಮಹಿಳಾ ವೈದ್ಯೆಯೊಬ್ಬರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಆಕ್ರೋಶಗೊಂಡಿದ್ದ ಮಹಿಳಾ ವೈದ್ಯೆ ‘”ನಿಮ್ಮ ನಮಸ್ಕಾರ, ನಿಮ್ಮ ಸರ್ಕಾರ ಬೇಕಿಲ್ಲ, ನಮಗೆ ನಾಗೇಂದ್ರ ಬೇಕು. ಕೊಡಿಸಕ್ಕಾಗುದಾದರೆ ಕೊಡಿಸಿ, ಇಲ್ಲಾಂದ್ರ ತೊಲಗಿ. ಬ್ರೇಕಿಂಗ್ ನ್ಯೂಸ್ ಹಾಕಿ ಹೋಗಿ. 30 ಲಕ್ಷ ಪರಿಹಾರ ಕೊಡ್ತೀರಾ? ಥೂ, ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ, ನಾವು ವೈದ್ಯರು ನಮ್ಮ ಒಂದು ತಿಂಗಳ ಸಂಬಳ ಕೊಟ್ಟರೆ ಹತ್ತುಕೋಟಿ ಆಗುತ್ತೆ. ನಾಚಿಕೆ ಆಗಲ್ವ ನಿಮಗೆ. ನಾಚಿಕೆ ಇಲ್ಲದೆ ಇಲ್ಲಿ ತನಕ ಬಂದಿದ್ದೀರ. ಯೋಗ್ಯತೆನೆ ಇಲ್ಲ. ನಿಮ್ಮನ್ನು ಬೇಡಿಕೊಳ್ಳಬೇಕಾ. ನನಗೆ ತುಂಬಾ ಒತ್ತಡ ಆಗುತ್ತಿದೆ ಅವರು ಹೇಳುತ್ತಿದ್ದರು ಯಾರೂ ಕೇಳಲಿಲ್ಲ. ಸಾಯಿಸಿಬಿಟ್ರಲ್ಲ, ಹೋಗಿ ಸಮಾಧಾನ ಆಯಿತಲ್ಲ. ನಮ್ಮನ್ನೆಲ್ಲ ಬಳಸಿಕೊಲ್ಳುವ ಯೋಗ್ಯತೆ ನಿಮಗಿಲ್ಲ. ನಮ್ಮಂತವರನ್ನು ಉಪಯೋಗಿಸಿಕೊಳ್ಳುವ ಯೋಗ್ಯತೆ ನಿಮಗಿಲ್ಲ.” ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಮೈಸೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

Posted by Naanu Gauri on Friday, August 21, 2020

ಮೃತ ನಾಗೇಂದ್ರ ಕುಟುಂಬಕ್ಕೆ ನಿನ್ನೆ 30 ಲಕ್ಷ ಪರಿಹಾರ ಕೊಡುವುದಾಗಿ ಘೋಷಿಸಿದ್ದ ಸಚಿವ ಸುಧಾಕರ್‌ ಇಂದು 50 ಲಕ್ಷ ಪರಿಹಾರ ಹಾಗು ವೈದ್ಯರ ಪತ್ನಿಗೆ ಸಬ್‌ರಿಜಿಸ್ಟ್ರಾರ್‌ ಹುದ್ದೆ ನೀಡುವುದಾಗಿ ಹೇಳಿದ್ದಾರೆ.

ನಂಜನಗೂಡಿನ ತಾಲ್ಲೂಕು ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ನಾಗೇಂದ್ರ ನಿನ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಇಒ ಪ್ರಶಾಂತ ಕುಮಾರ್ ಮಿಶ್ರಾ ನೀಡುತ್ತಿದ್ದ ಕಿರುಕುಳವೆ ಅವರ ಆತ್ಮಹತ್ಯೆಗೆ ಕಾರಣ ಎಂದು ಅವರ ಸಂಬಂಧಿಕರು ಆರೋಪಿಸಿದ್ದಾರೆ. ಅಲ್ಲದೇ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಎದುರು ಶವವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಂತಿಮ ದರ್ಶನಕ್ಕೆ ಬಂದಿದ್ದ ಸಚಿವರಿಗೆ ಅಲ್ಲಿದ್ದವರು ಛೀಮಾರಿ ಹಾಕಿದ್ದಾರೆ.

ಈ ವೇಳೆ ನೆರೆದಿದ್ದ ಇತರ ವೈದ್ಯರು ಸರ್ಕಾರಕ್ಕೆ ದಿಕ್ಕಾರ ಕೂಗಿ ಇನ್ನು ಮುಂದೆ ನಾವು ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿದ್ದಾರೆ. ಸೋಮವಾರದಿಂದ ಪ್ರತಿಭಟನೆ ನಡೆಸುತ್ತೇವೆ ಎಂದು ಘೋಷಿಸಿದ್ದಾರೆ. ಇಡೀ ಘಟನೆಯಲ್ಲಿ ಸಚಿವ ಸುಧಾಕರ್ ಮೂಕ ಪ್ರೇಕ್ಷಕರಾಗಿ ನಿಂತೆ ಇದ್ದರು.‍

“ಸಿಇಒ ಪ್ರತಿದಿನ 300 ಮಂದಿಗೆ ಕೊರೊನಾ ರ್‍ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಿಸಬೇಕು ಎಂದು ಟಾರ್ಗೆಟ್ ನೀಡುತ್ತಿದ್ದರು, ಇದು ಮಾಡದಿದ್ದರೆ ಅವರನ್ನು ಏಕವಚನದಲ್ಲಿ ನಿಂದಿಸುತ್ತಿದ್ದರು. ಇದರಿಂದಾಗಿ ವೈದ್ಯ ನಾಗೇಂದ್ರ ಒತ್ತಡಕ್ಕೀಡಾಗಿದ್ದರು” ಎಂದು ವೈದ್ಯರ ಸಂಬಂಧಿಕರು ಹೇಳಿದ್ದಾರೆ.

ಘಟನೆ ಖಂಡಿಸಿ ಪ್ರಸ್ತುತ ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯರ, ಆರೋಗ್ಯ ಸಿಬ್ಬಂದಿ ಮುಷ್ಕರ ಹೂಡಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ ಎನ್ನಲಾಗಿದ್ದು, ಅಲ್ಲದೆ ಸೋಮವಾರದಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರಕ್ಕೆ ನಿರ್ಧರಿಸಲಾಗಿದ್ದು, ಕರ್ತವ್ಯಕ್ಕೆ ಗೈರುಹಾಜರಾಗಲಿದ್ದಾರೆ.

ನಿನ್ನೆ ಮೂವತ್ತು ಲಕ್ಷ ರುಪಾಯಿ ವೈದ್ಯರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಹೇಳಿದ್ದ ಸಚಿವ ಸುಧಾಕರ್ ಇದೀಗ 50 ಲಕ್ಷ ರೂ. ಪರಿಹಾರ ಧನ ಹಾಗು ಮೃತಪಟ್ಟ ವೈದ್ಯರ ಸಬ್ ರಿಜಿಸ್ಟ್ರಾರ್ ಉದ್ಯೋಗವನ್ನು ನೀಡಲು ಮುಖ್ಯಮಂತ್ರಿ ಒಪ್ಪಿಗೆ ನಿಡಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ, ನಿರುದ್ಯೋಗದ ಕುರಿತು ಎಚ್ಚರಿಸಿದ್ದೆ, ಮಾಧ್ಯಮಗಳು ಅಣಕಿಸಿದ್ದವು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...