Homeಕರೋನಾ ತಲ್ಲಣ’ಥೂ... ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

"ಸಿಇಒ ಪ್ರತಿದಿನ 300 ಮಂದಿಗೆ ಕೊರೊನಾ ರ್‍ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಿಸಬೇಕು ಎಂದು ಟಾರ್ಗೆಟ್ ನೀಡುತ್ತಿದ್ದರು, ಇದು ಮಾಡದಿದ್ದರೆ ಅವರನ್ನು ಏಕವಚನದಲ್ಲಿ ನಿಂದಿಸುತ್ತಿದ್ದರು. ಇದರಿಂದಾಗಿ ವೈದ್ಯ ನಾಗೇಂದ್ರ ಒತ್ತಡಕ್ಕೀಡಾಗಿದ್ದರು" ಎಂದು ವೈದ್ಯರ ಸಂಬಂಧಿಕರು ಹೇಳಿದ್ದಾರೆ.

- Advertisement -
- Advertisement -

ಅಸಹಜ ಸಾವೀಗೀಡಾಗಿದ್ದ ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಅವರ ಅಂತಿಮ ದರ್ಶನಕ್ಕೆ ಹೋಗಿದ್ದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ ಅವರಿಗೆ ಮಹಿಳಾ ವೈದ್ಯೆಯೊಬ್ಬರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಆಕ್ರೋಶಗೊಂಡಿದ್ದ ಮಹಿಳಾ ವೈದ್ಯೆ ‘”ನಿಮ್ಮ ನಮಸ್ಕಾರ, ನಿಮ್ಮ ಸರ್ಕಾರ ಬೇಕಿಲ್ಲ, ನಮಗೆ ನಾಗೇಂದ್ರ ಬೇಕು. ಕೊಡಿಸಕ್ಕಾಗುದಾದರೆ ಕೊಡಿಸಿ, ಇಲ್ಲಾಂದ್ರ ತೊಲಗಿ. ಬ್ರೇಕಿಂಗ್ ನ್ಯೂಸ್ ಹಾಕಿ ಹೋಗಿ. 30 ಲಕ್ಷ ಪರಿಹಾರ ಕೊಡ್ತೀರಾ? ಥೂ, ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ, ನಾವು ವೈದ್ಯರು ನಮ್ಮ ಒಂದು ತಿಂಗಳ ಸಂಬಳ ಕೊಟ್ಟರೆ ಹತ್ತುಕೋಟಿ ಆಗುತ್ತೆ. ನಾಚಿಕೆ ಆಗಲ್ವ ನಿಮಗೆ. ನಾಚಿಕೆ ಇಲ್ಲದೆ ಇಲ್ಲಿ ತನಕ ಬಂದಿದ್ದೀರ. ಯೋಗ್ಯತೆನೆ ಇಲ್ಲ. ನಿಮ್ಮನ್ನು ಬೇಡಿಕೊಳ್ಳಬೇಕಾ. ನನಗೆ ತುಂಬಾ ಒತ್ತಡ ಆಗುತ್ತಿದೆ ಅವರು ಹೇಳುತ್ತಿದ್ದರು ಯಾರೂ ಕೇಳಲಿಲ್ಲ. ಸಾಯಿಸಿಬಿಟ್ರಲ್ಲ, ಹೋಗಿ ಸಮಾಧಾನ ಆಯಿತಲ್ಲ. ನಮ್ಮನ್ನೆಲ್ಲ ಬಳಸಿಕೊಲ್ಳುವ ಯೋಗ್ಯತೆ ನಿಮಗಿಲ್ಲ. ನಮ್ಮಂತವರನ್ನು ಉಪಯೋಗಿಸಿಕೊಳ್ಳುವ ಯೋಗ್ಯತೆ ನಿಮಗಿಲ್ಲ.” ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಮೈಸೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

Posted by Naanu Gauri on Friday, August 21, 2020

ಮೃತ ನಾಗೇಂದ್ರ ಕುಟುಂಬಕ್ಕೆ ನಿನ್ನೆ 30 ಲಕ್ಷ ಪರಿಹಾರ ಕೊಡುವುದಾಗಿ ಘೋಷಿಸಿದ್ದ ಸಚಿವ ಸುಧಾಕರ್‌ ಇಂದು 50 ಲಕ್ಷ ಪರಿಹಾರ ಹಾಗು ವೈದ್ಯರ ಪತ್ನಿಗೆ ಸಬ್‌ರಿಜಿಸ್ಟ್ರಾರ್‌ ಹುದ್ದೆ ನೀಡುವುದಾಗಿ ಹೇಳಿದ್ದಾರೆ.

ನಂಜನಗೂಡಿನ ತಾಲ್ಲೂಕು ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ನಾಗೇಂದ್ರ ನಿನ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಇಒ ಪ್ರಶಾಂತ ಕುಮಾರ್ ಮಿಶ್ರಾ ನೀಡುತ್ತಿದ್ದ ಕಿರುಕುಳವೆ ಅವರ ಆತ್ಮಹತ್ಯೆಗೆ ಕಾರಣ ಎಂದು ಅವರ ಸಂಬಂಧಿಕರು ಆರೋಪಿಸಿದ್ದಾರೆ. ಅಲ್ಲದೇ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಎದುರು ಶವವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಂತಿಮ ದರ್ಶನಕ್ಕೆ ಬಂದಿದ್ದ ಸಚಿವರಿಗೆ ಅಲ್ಲಿದ್ದವರು ಛೀಮಾರಿ ಹಾಕಿದ್ದಾರೆ.

ಈ ವೇಳೆ ನೆರೆದಿದ್ದ ಇತರ ವೈದ್ಯರು ಸರ್ಕಾರಕ್ಕೆ ದಿಕ್ಕಾರ ಕೂಗಿ ಇನ್ನು ಮುಂದೆ ನಾವು ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿದ್ದಾರೆ. ಸೋಮವಾರದಿಂದ ಪ್ರತಿಭಟನೆ ನಡೆಸುತ್ತೇವೆ ಎಂದು ಘೋಷಿಸಿದ್ದಾರೆ. ಇಡೀ ಘಟನೆಯಲ್ಲಿ ಸಚಿವ ಸುಧಾಕರ್ ಮೂಕ ಪ್ರೇಕ್ಷಕರಾಗಿ ನಿಂತೆ ಇದ್ದರು.‍

“ಸಿಇಒ ಪ್ರತಿದಿನ 300 ಮಂದಿಗೆ ಕೊರೊನಾ ರ್‍ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಿಸಬೇಕು ಎಂದು ಟಾರ್ಗೆಟ್ ನೀಡುತ್ತಿದ್ದರು, ಇದು ಮಾಡದಿದ್ದರೆ ಅವರನ್ನು ಏಕವಚನದಲ್ಲಿ ನಿಂದಿಸುತ್ತಿದ್ದರು. ಇದರಿಂದಾಗಿ ವೈದ್ಯ ನಾಗೇಂದ್ರ ಒತ್ತಡಕ್ಕೀಡಾಗಿದ್ದರು” ಎಂದು ವೈದ್ಯರ ಸಂಬಂಧಿಕರು ಹೇಳಿದ್ದಾರೆ.

ಘಟನೆ ಖಂಡಿಸಿ ಪ್ರಸ್ತುತ ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯರ, ಆರೋಗ್ಯ ಸಿಬ್ಬಂದಿ ಮುಷ್ಕರ ಹೂಡಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ ಎನ್ನಲಾಗಿದ್ದು, ಅಲ್ಲದೆ ಸೋಮವಾರದಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರಕ್ಕೆ ನಿರ್ಧರಿಸಲಾಗಿದ್ದು, ಕರ್ತವ್ಯಕ್ಕೆ ಗೈರುಹಾಜರಾಗಲಿದ್ದಾರೆ.

ನಿನ್ನೆ ಮೂವತ್ತು ಲಕ್ಷ ರುಪಾಯಿ ವೈದ್ಯರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಹೇಳಿದ್ದ ಸಚಿವ ಸುಧಾಕರ್ ಇದೀಗ 50 ಲಕ್ಷ ರೂ. ಪರಿಹಾರ ಧನ ಹಾಗು ಮೃತಪಟ್ಟ ವೈದ್ಯರ ಸಬ್ ರಿಜಿಸ್ಟ್ರಾರ್ ಉದ್ಯೋಗವನ್ನು ನೀಡಲು ಮುಖ್ಯಮಂತ್ರಿ ಒಪ್ಪಿಗೆ ನಿಡಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ, ನಿರುದ್ಯೋಗದ ಕುರಿತು ಎಚ್ಚರಿಸಿದ್ದೆ, ಮಾಧ್ಯಮಗಳು ಅಣಕಿಸಿದ್ದವು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...