Homeಕರೋನಾ ತಲ್ಲಣ’ಥೂ... ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

"ಸಿಇಒ ಪ್ರತಿದಿನ 300 ಮಂದಿಗೆ ಕೊರೊನಾ ರ್‍ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಿಸಬೇಕು ಎಂದು ಟಾರ್ಗೆಟ್ ನೀಡುತ್ತಿದ್ದರು, ಇದು ಮಾಡದಿದ್ದರೆ ಅವರನ್ನು ಏಕವಚನದಲ್ಲಿ ನಿಂದಿಸುತ್ತಿದ್ದರು. ಇದರಿಂದಾಗಿ ವೈದ್ಯ ನಾಗೇಂದ್ರ ಒತ್ತಡಕ್ಕೀಡಾಗಿದ್ದರು" ಎಂದು ವೈದ್ಯರ ಸಂಬಂಧಿಕರು ಹೇಳಿದ್ದಾರೆ.

- Advertisement -
- Advertisement -

ಅಸಹಜ ಸಾವೀಗೀಡಾಗಿದ್ದ ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಅವರ ಅಂತಿಮ ದರ್ಶನಕ್ಕೆ ಹೋಗಿದ್ದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ ಅವರಿಗೆ ಮಹಿಳಾ ವೈದ್ಯೆಯೊಬ್ಬರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಆಕ್ರೋಶಗೊಂಡಿದ್ದ ಮಹಿಳಾ ವೈದ್ಯೆ ‘”ನಿಮ್ಮ ನಮಸ್ಕಾರ, ನಿಮ್ಮ ಸರ್ಕಾರ ಬೇಕಿಲ್ಲ, ನಮಗೆ ನಾಗೇಂದ್ರ ಬೇಕು. ಕೊಡಿಸಕ್ಕಾಗುದಾದರೆ ಕೊಡಿಸಿ, ಇಲ್ಲಾಂದ್ರ ತೊಲಗಿ. ಬ್ರೇಕಿಂಗ್ ನ್ಯೂಸ್ ಹಾಕಿ ಹೋಗಿ. 30 ಲಕ್ಷ ಪರಿಹಾರ ಕೊಡ್ತೀರಾ? ಥೂ, ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ, ನಾವು ವೈದ್ಯರು ನಮ್ಮ ಒಂದು ತಿಂಗಳ ಸಂಬಳ ಕೊಟ್ಟರೆ ಹತ್ತುಕೋಟಿ ಆಗುತ್ತೆ. ನಾಚಿಕೆ ಆಗಲ್ವ ನಿಮಗೆ. ನಾಚಿಕೆ ಇಲ್ಲದೆ ಇಲ್ಲಿ ತನಕ ಬಂದಿದ್ದೀರ. ಯೋಗ್ಯತೆನೆ ಇಲ್ಲ. ನಿಮ್ಮನ್ನು ಬೇಡಿಕೊಳ್ಳಬೇಕಾ. ನನಗೆ ತುಂಬಾ ಒತ್ತಡ ಆಗುತ್ತಿದೆ ಅವರು ಹೇಳುತ್ತಿದ್ದರು ಯಾರೂ ಕೇಳಲಿಲ್ಲ. ಸಾಯಿಸಿಬಿಟ್ರಲ್ಲ, ಹೋಗಿ ಸಮಾಧಾನ ಆಯಿತಲ್ಲ. ನಮ್ಮನ್ನೆಲ್ಲ ಬಳಸಿಕೊಲ್ಳುವ ಯೋಗ್ಯತೆ ನಿಮಗಿಲ್ಲ. ನಮ್ಮಂತವರನ್ನು ಉಪಯೋಗಿಸಿಕೊಳ್ಳುವ ಯೋಗ್ಯತೆ ನಿಮಗಿಲ್ಲ.” ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಮೈಸೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

Posted by Naanu Gauri on Friday, August 21, 2020

ಮೃತ ನಾಗೇಂದ್ರ ಕುಟುಂಬಕ್ಕೆ ನಿನ್ನೆ 30 ಲಕ್ಷ ಪರಿಹಾರ ಕೊಡುವುದಾಗಿ ಘೋಷಿಸಿದ್ದ ಸಚಿವ ಸುಧಾಕರ್‌ ಇಂದು 50 ಲಕ್ಷ ಪರಿಹಾರ ಹಾಗು ವೈದ್ಯರ ಪತ್ನಿಗೆ ಸಬ್‌ರಿಜಿಸ್ಟ್ರಾರ್‌ ಹುದ್ದೆ ನೀಡುವುದಾಗಿ ಹೇಳಿದ್ದಾರೆ.

ನಂಜನಗೂಡಿನ ತಾಲ್ಲೂಕು ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ನಾಗೇಂದ್ರ ನಿನ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಇಒ ಪ್ರಶಾಂತ ಕುಮಾರ್ ಮಿಶ್ರಾ ನೀಡುತ್ತಿದ್ದ ಕಿರುಕುಳವೆ ಅವರ ಆತ್ಮಹತ್ಯೆಗೆ ಕಾರಣ ಎಂದು ಅವರ ಸಂಬಂಧಿಕರು ಆರೋಪಿಸಿದ್ದಾರೆ. ಅಲ್ಲದೇ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಎದುರು ಶವವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಂತಿಮ ದರ್ಶನಕ್ಕೆ ಬಂದಿದ್ದ ಸಚಿವರಿಗೆ ಅಲ್ಲಿದ್ದವರು ಛೀಮಾರಿ ಹಾಕಿದ್ದಾರೆ.

ಈ ವೇಳೆ ನೆರೆದಿದ್ದ ಇತರ ವೈದ್ಯರು ಸರ್ಕಾರಕ್ಕೆ ದಿಕ್ಕಾರ ಕೂಗಿ ಇನ್ನು ಮುಂದೆ ನಾವು ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿದ್ದಾರೆ. ಸೋಮವಾರದಿಂದ ಪ್ರತಿಭಟನೆ ನಡೆಸುತ್ತೇವೆ ಎಂದು ಘೋಷಿಸಿದ್ದಾರೆ. ಇಡೀ ಘಟನೆಯಲ್ಲಿ ಸಚಿವ ಸುಧಾಕರ್ ಮೂಕ ಪ್ರೇಕ್ಷಕರಾಗಿ ನಿಂತೆ ಇದ್ದರು.‍

“ಸಿಇಒ ಪ್ರತಿದಿನ 300 ಮಂದಿಗೆ ಕೊರೊನಾ ರ್‍ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಿಸಬೇಕು ಎಂದು ಟಾರ್ಗೆಟ್ ನೀಡುತ್ತಿದ್ದರು, ಇದು ಮಾಡದಿದ್ದರೆ ಅವರನ್ನು ಏಕವಚನದಲ್ಲಿ ನಿಂದಿಸುತ್ತಿದ್ದರು. ಇದರಿಂದಾಗಿ ವೈದ್ಯ ನಾಗೇಂದ್ರ ಒತ್ತಡಕ್ಕೀಡಾಗಿದ್ದರು” ಎಂದು ವೈದ್ಯರ ಸಂಬಂಧಿಕರು ಹೇಳಿದ್ದಾರೆ.

ಘಟನೆ ಖಂಡಿಸಿ ಪ್ರಸ್ತುತ ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯರ, ಆರೋಗ್ಯ ಸಿಬ್ಬಂದಿ ಮುಷ್ಕರ ಹೂಡಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ ಎನ್ನಲಾಗಿದ್ದು, ಅಲ್ಲದೆ ಸೋಮವಾರದಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರಕ್ಕೆ ನಿರ್ಧರಿಸಲಾಗಿದ್ದು, ಕರ್ತವ್ಯಕ್ಕೆ ಗೈರುಹಾಜರಾಗಲಿದ್ದಾರೆ.

ನಿನ್ನೆ ಮೂವತ್ತು ಲಕ್ಷ ರುಪಾಯಿ ವೈದ್ಯರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಹೇಳಿದ್ದ ಸಚಿವ ಸುಧಾಕರ್ ಇದೀಗ 50 ಲಕ್ಷ ರೂ. ಪರಿಹಾರ ಧನ ಹಾಗು ಮೃತಪಟ್ಟ ವೈದ್ಯರ ಸಬ್ ರಿಜಿಸ್ಟ್ರಾರ್ ಉದ್ಯೋಗವನ್ನು ನೀಡಲು ಮುಖ್ಯಮಂತ್ರಿ ಒಪ್ಪಿಗೆ ನಿಡಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ, ನಿರುದ್ಯೋಗದ ಕುರಿತು ಎಚ್ಚರಿಸಿದ್ದೆ, ಮಾಧ್ಯಮಗಳು ಅಣಕಿಸಿದ್ದವು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...