Homeಮುಖಪುಟಸಾಮೂಹಿಕ ಅತ್ಯಾಚಾರವೆಸಗಿ ರೈಲಿನ ಹಳಿ ಮೇಲೆ ಎಸೆದ ದುರುಳರು; ಕಾಲು ಕಳೆದುಕೊಂಡ ಸಂತ್ರಸ್ತ ಮಹಿಳೆ

ಸಾಮೂಹಿಕ ಅತ್ಯಾಚಾರವೆಸಗಿ ರೈಲಿನ ಹಳಿ ಮೇಲೆ ಎಸೆದ ದುರುಳರು; ಕಾಲು ಕಳೆದುಕೊಂಡ ಸಂತ್ರಸ್ತ ಮಹಿಳೆ

- Advertisement -
- Advertisement -

ಜೂನ್ 24 ರಿಂದ ಕಾಣೆಯಾಗಿದ್ದ 35 ವರ್ಷದ ಮಹಿಳೆಯು ಪಾಣಿಪತ್ ರೈಲು ನಿಲ್ದಾಣದಲ್ಲಿ ಅಸ್ವಸ್ಥರಾಗಿ ಪತ್ತೆಯಾಗಿದ್ದಾರೆ. ರೈಲಿನ ಖಾಲಿ ಕೋಚ್‌ನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಆಕೆಯನ್ನು ಹಳಿಗಳ ಮೇಲೆ ಎಸೆದ ಪರಿಣಾಮ ರೈಲು ಹರಿದು ಕಾಲು ಕಳೆದುಕೊಂಡ ಘಟನೆ ವರದಿಯಾಗಿದೆ.

ಜೂನ್ 26 ರಂದು ಆಕೆಯ ಪತಿಯಿಂದ ಪತ್ನಿ ನಾಪತ್ತೆಯ ಬಗ್ಗೆ ಪೊಲೀಸರಿಗೆ ದೂರು ಬಂದಿದ್ದು, ಜೂನ್ 24 ರಂದು ನಡೆದ ವಿವಾದದ ನಂತರ ಆಕೆ ಕಾಣೆಯಾಗಿದ್ದಾಳೆ ಎಂದು ಹೇಳಿದ್ದಾರೆ. ಈ ಆಕೆ ಮೊದಲು ಕಾಣೆಯಾಗಿದ್ದಾಗ, ಸಾಮಾನ್ಯವಾಗಿ ತಾನಾಗಿಯೇ ಮನೆಗೆ ಹಿಂತಿರುಗುತ್ತಿದ್ದಳು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿದ್ದ ನನ್ನನ್ನು ಸಂಪರ್ಕಿಸಿದ ವ್ಯಕ್ತಿಯು, ಪತಿ ಕಳುಹಿಸಿದ್ದಾನೆಂದು ಹೇಳಿ ಕರೆದೊಯ್ದರು ಎಂದು ಸಂತ್ರಸ್ತ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

“ಮಹಿಳೆಯನ್ನು ಕರೆದುಕೊಂಡು ಹೋಗಿ ನಿಂತಿದ್ದ ರೈಲಿನ ಖಾಲಿ ಬೋಗಿಯನ್ನು ಹತ್ತಿಸಿದರು, ಅಲ್ಲಿ ಅವನು ಆಕೆಯ ಮೇಲೆ ಅತ್ಯಾಚಾರ ಮಾಡಿದನು ಎಂದು ಆಕೆ ಹೇಳಿದ್ದಾಳೆ. ನಂತರ, ಇತರ ಇಬ್ಬರು ಪುರುಷರು ಅವನೊಂದಿಗೆ ಸೇರಿಕೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದರು” ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ನಂತರ, ಆಕೆಯನ್ನು ಸೋನಿಪತ್‌ಗೆ ಕರೆದೊಯ್ಯಲಾಯಿತು. ಅಲ್ಲಿ ಆರೋಪಿಗಳು ಆಕೆಯನ್ನು ಹಳಿಗಳ ಮೇಲೆ ಎಸೆದರು, ರೈಲು ಆಕೆಯ ಮೇಲೆ ಹಾದು ಹೋಗಿದ್ದ ತೀವ್ರ ಗಾಯವಾಗಿದೆ.

ಸೋನಿಪತ್ ರೈಲ್ವೆ ಹಳಿಗಳ ಬಳಿಯ ಅಂಗಡಿಯವರು ನೀಡಿದ ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಮಹಿಳೆಯೊಬ್ಬರು ಅಳುವುದನ್ನು ಕೇಳಿ ಅವರು ಸಹಾಯ ಮಾಡಲು ಧಾವಿಸಿದರು. ಆಕೆಯ ಸುತ್ತಲೂ ಜನಸಮೂಹ ಜಮಾಯಿಸಿತ್ತು, ರೈಲ್ವೆ ಹಳಿಯ ಸ್ವಿಚ್‌ಗೆ ಸಿಲುಕಿದ ನಂತರ ಆಕೆಯ ಕಾಲು ತುಂಡಾಗಿರುವುದನ್ನು ಪ್ರತ್ಯಕ್ಷದರ್ಶಿಗಳು ಗಮನಿಸಿದರು. ಘಟನೆಯ ಬಗ್ಗೆ ಪಕ್ಕದಲ್ಲಿದ್ದವರು ರೈಲ್ವೆ ಪೊಲೀಸರಿಗೆ ವರದಿ ಮಾಡಿದರು, ಇದರಿಂದಾಗಿ ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೋನಿಪತ್ ಜನರಲ್ ಆಸ್ಪತ್ರೆಯಿಂದ ರೋಹ್ಟಕ್ ಪಿಜಿಐಗೆ ಕರೆದೊಯ್ಯಲಾಯಿತು.

“ಸಾಮೂಹಿಕ ಅತ್ಯಾಚಾರಕ್ಕಾಗಿ ನಾವು ಶೂನ್ಯ ಎಫ್‌ಐಆರ್ ದಾಖಲಿಸಿದ್ದೇವೆ, ಮುಂದಿನ ಕ್ರಮಕ್ಕಾಗಿ ಪಾಣಿಪತ್ ಸರ್ಕಾರಿ ರೈಲ್ವೆ ಪೊಲೀಸರಿಗೆ (ಜಿಆರ್‌ಪಿ) ಕಳುಹಿಸಿದ್ದೇವೆ” ಎಂದು ಅಧಿಕಾರಿ ಹೇಳಿದರು. ಘಟನೆಯ ವ್ಯಾಪ್ತಿಯನ್ನು ಲೆಕ್ಕಿಸದೆ ಯಾವುದೇ ಪೊಲೀಸ್ ಠಾಣೆಯಲ್ಲಿ ಶೂನ್ಯ ಎಫ್‌ಐಆರ್ ದಾಖಲಿಸಬಹುದು, ಸೂಕ್ತ ಪೊಲೀಸ್ ಠಾಣೆಗೆ ಕ್ರಮಕ್ಕಾಗಿ ವರ್ಗಾಯಿಸಬಹುದು.

ಬಿಹಾರದ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ; ನಿತೀಶ್ ಕುಮಾರ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...