Homeಮುಖಪುಟಅಸ್ಸಾಂ | ದುರ್ಗಾ ದೇವಸ್ಥಾನದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಅಸ್ಸಾಂ | ದುರ್ಗಾ ದೇವಸ್ಥಾನದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ರಾಸ್ ಹಬ್ಬದ ದಿನ ದುರ್ಗಾ ದೇವಾಲಯದ ಆವರಣದಲ್ಲಿ ಯುವತಿಯೊಬ್ಬರ ಮೇಲೆ ಒಂಬತ್ತು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಕೃತ್ಯದ ಮಾಸ್ಟರ್‌ಮೈಂಡ್‌ಗಳೆಂದು ನಂಬಲಾದ ಇನ್ನಿಬ್ಬರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಅಸ್ಸಾಂ

ಬಂಧಿತ ವ್ಯಕ್ತಿಗಳನ್ನು ಕುಲದೀಪ್ ನಾಥ್, ಪಿಂಕು ದಾಸ್, ಮೃಣಾಲ್ ರಭಾ, ಗಗನ್ ದಾಸ್, ಬಿಜೋಯ್ ರಭಾ, ಸೌರವ್ ಬೋರೋ ಮತ್ತು ದೀಪಂಕರ್ ಮುಖಿಯಾ ಎಂದು ಗುರುತಿಸಲಾಗಿದೆ. ಈ ಆರೋಪಿಗಳು 18 ವರ್ಷದಿಂದ 23 ವರ್ಷ ವಯಸ್ಸಿನವರು ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಮಾಸ್ಟರ್‌ಮೈಂಡ್‌ಗಳೆಂದು ನಂಬಲಾದ ಇನ್ನಿಬ್ಬರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗುರುವಾರ ಮಧ್ಯರಾತ್ರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸರಿಗೆ ಘಟನೆಯ ಬಗ್ಗೆ ತಿಳಿದು ಬಂದಿತ್ತು. ನಗರದ ಹೊರವಲಯದ ಬೋರಗಾಂವ್‌ನ ನಿಜಾರಪರ್ ಪ್ರದೇಶದ ದುರ್ಗಾ ದೇವಸ್ಥಾನದ ಆವರಣದಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ವರದಿಯಾಗಿದೆ.

“ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗುತ್ತಿರುವ ವಿಡಿಯೋವನ್ನು ಬೋರಗಾಂವ್ ನಿವಾಸಿಗಳ ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ ಎಂದು ನಮಗೆ ತಿಳಿಯಿತು. ಶೀಘ್ರದಲ್ಲೇ, ನಾವು ಅದನ್ನು ಪಡೆದು ತನಿಖೆ ನಡೆಸಿದೆವು. ಎಂಟರಿಂದ ಒಂಬತ್ತು ದುಷ್ಕರ್ಮಿಗಳು ಬೆತ್ತಲೆಯಾಗಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ದುಷ್ಕರ್ಮಿಗಳು ಅವರ ಮೇಲೆ ಹಿಂಸಾತ್ಮಕವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಕ್ಷಣವೇ ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ವಿಡಿಯೋದಲ್ಲಿ ಮುಖಗಳು ಸ್ಪಷ್ಟವಾಗಿ ಗೋಚರಿಸುವ ಇಬ್ಬರು ಆರೋಪಿಗಳನ್ನು ಗುರುತಿಸಬಹುದು ಎಂದು ಅವರು ಹೇಳಿದ್ದಾರೆ. “ನಂತರದ ದಾಳಿಗಳಲ್ಲಿ, ನಾವು ನಗರದ ಮೂರು ವಿಭಿನ್ನ ಪ್ರದೇಶಗಳಿಂದ ಏಳು ಜನರನ್ನು ಬಂಧಿಸಿದ್ದೇವೆ. ಇನ್ನಿಬ್ಬರಿಗಾಗಿ ಶೋಧ ನಡೆಸುತ್ತಿದ್ದೇವೆ,” ಎಂದು ಹೇಳಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ನವೆಂಬರ್ 17 ರಂದು ಈ ಘಟನೆ ನಡೆದಿದೆ ಎಂದು ಪೊಲೀಸರಿಗೆ ತಿಳಿದುಬಂದಿದೆ. ಅಸ್ಸಾಂ

“ಆರೋಪಿಗಳು ರಾಸ್ ಹಬ್ಬವನ್ನು ನೋಡಲು ಹೋಗಿದ್ದರು. ಹೀಗಿರುವಾಗ ಕೆಲವರು ಬೆಟ್ಟದ ಮೇಲಿರುವ ದುರ್ಗಾ ದೇವಸ್ಥಾನಕ್ಕೆ ಮದ್ಯ ಸೇವಿಸಲು ಹೋದರೆ ಇನ್ನು ಕೆಲವರು ಮಾದಕ ವಸ್ತು ಸೇವಿಸಲು ತೆರಳಿದ್ದರು. ಆರೋಪಿಯೊಬ್ಬ ಯುವತಿಯನ್ನು ಸ್ಥಳಕ್ಕೆ ಕರೆದೊಯ್ದಿದ್ದ. ಅವರೆಲ್ಲರೂ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಕೃತ್ಯವನ್ನು ಸಹ ಚಿತ್ರೀಕರಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

“ನಾವು ಸಂತ್ರಸ್ತೆಯ ಗುರುತನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಅವರ ಹೇಳಿಕೆಯನ್ನು ಆಧರಿಸಿ ನಾವು ಪ್ರಕರಣವನ್ನು ದಾಖಲಿಸುತ್ತೇವೆ ಅಥವಾ ನಾವೆ ಅದನ್ನು ಸ್ವಯಂಪ್ರೇರಿತವಾಗಿ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಟ ಅಲ್ಲು ಅರ್ಜುನ್ ಬಂಧನ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಆರ್‌ಎಸ್‌ ನಾಯಕ ಕೆಟಿಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...