Homeಕರ್ನಾಟಕಜೈಪುರ: ಬುರ್ಖಾ ಧರಿಸಿದ ಮಹಿಳೆಗೆ ಕೆನರಾ ಬ್ಯಾಂಕ್‌ ಪ್ರವೇಶಕ್ಕೆ ತಡೆ

ಜೈಪುರ: ಬುರ್ಖಾ ಧರಿಸಿದ ಮಹಿಳೆಗೆ ಕೆನರಾ ಬ್ಯಾಂಕ್‌ ಪ್ರವೇಶಕ್ಕೆ ತಡೆ

- Advertisement -
- Advertisement -

ಬುರ್ಖಾ ಧರಿಸಿದ ಮಹಿಳೆಗೆ ಕೆನರಾ ಬ್ಯಾಂಕ್‌ನ ಶಾಖೆಯೊಂದಕ್ಕೆ ಪ್ರವೇಶಕ್ಕೆ ನಿರಾಕರಣೆ ಮಾಡಿರುವ ಘಟನೆ ರಾಜಸ್ಥಾನದ  ಜೈಪುರದಲ್ಲಿ ನಡೆದಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ  ಬ್ಯಾಂಕ್ ಗೈಡ್‌ಲೈನ್ಸ್‌ ಇದೆ. ಬುರ್ಖಾ ಧರಿಸಿ ಬ್ಯಾಂಕ್‌ ಒಳಗಡೆ ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಬ್ಯಾಂಕ್ ನ ಭದ್ರತಾ ಸಿಬ್ಬಂದಿ ಮಹಿಳೆಗೆ ಹೇಳುವುದು ಸೆರೆಯಾಗಿದೆ.

ವೈರಲ್ ಆಗಿರುವ 5 ನಿಮಿಷಗಳ ವಿಡಿಯೋದಲ್ಲಿ, ಮಹಿಳೆ ಜೈಪುರದ ಕೆನರಾ ಬ್ಯಾಂಕ್‌ಗೆ ಪ್ರವೇಶಕ್ಕೆ ಅನುಮತಿ ನೀಡುವಂತೆ  ಮನವಿ ಮಾಡುವುದು ಸೆರೆಯಾಗಿದೆ. ಬ್ಯಾಂಕ್ ಒಳಗಡೆ ಬುರ್ಖಾ ಧರಿಸಿ ಬರಲು ಅನುಮತಿ ಇಲ್ಲ ಎಂದು ಹೇಳಿದ ಭದ್ರತಾ ಸಿಬ್ಬಂದಿ ಬ್ಯಾಂಕ್ ಒಳಗಡೆ ಬರಲು ಮಹಿಳೆಗೆ ಬುರ್ಖಾ ತೆಗೆಯುವಂತೆ ಹೇಳುವುದು ಕಂಡು ಬಂದಿದೆ.

ಮಹಿಳೆ ಬುರ್ಖಾಗೆ ಧರಿಸಿದವರಿಗೆ ಪ್ರವೇಶಕ್ಕೆ ಅನುಮತಿ ಇಲ್ಲ ಹೇಳಿರುವ ಗೈಡ್‌ ಲೈನ್ಸ್‌ ತೋರಿಸಿ ಎಂದು ಭದ್ರತಾ ಸಿಬ್ಬಂದಿಗೆ ಮತ್ತೆ ಮತ್ತೆ ಆಗ್ರಹಿಸಿದ್ದಾರೆ.  ಈ ವೇಳೆ ಆತ ಬ್ಯಾಂಕ್‌ ನ ವ್ಯವಸ್ಥಾಪಕರು ಅನುಮತಿ ಕೊಟ್ಟರೆ ಒಳಗೆ ಬರಲು ಅನುಮತಿ ಕೊಡುವುದಾಗಿ ಹೇಳಿದ್ದಾರೆ. ಮಹಿಳೆ ಅನುಮೋದನೆಯನ್ನು ಪಡೆದ ನಂತರ ಭದ್ರತಾ ಸಿಬ್ಬಂದಿಗಳು ಹಿಂತಿರುಗಲು ಕಾಯುತ್ತಿದ್ದರು. ಈ ವೇಳೆ ಒಂದೆರಡು ಜನರು ಬ್ಯಾಂಕ್ ಒಳಗಡೆ  ಪ್ರವೇಶಿಸುವುದನ್ನು ಕಾಣಬಹುದು. ಒಬ್ಬ ವ್ಯಕ್ತಿ ನಂತರ ಮಹಿಳೆಯನ್ನು ಶಾಖಾ ವ್ಯವಸ್ಥಾಪಕರ ಕಚೇರಿಗೆ ಕರೆದೊಯ್ಯುತ್ತಾರೆ. ಅಲ್ಲಿ ಅವರು ಬುರ್ಖಾ ಧರಿಸಿದರೆ ಪ್ರವೇಶ ನಿರಾಕರಣೆ ಬಗ್ಗೆ ಹೊರಡಿಸಿದ ಗೈಡ್‌ ಲೈನ್ ತೋರಿಸುವಂತೆ  ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಮ್ಯಾನೇಜರ್, ಅವರಿಗೆ ಬ್ಯಾಂಕ್ ಆವರಣಕ್ಕೆ ಪ್ರವೇಶಿಸಲು ಅವಕಾಶ ನೀಡದಿರುವುದು ಬುರ್ಖಾದ ಕಾರಣದಿಂದಲ್ಲ. ಊಟದ ಸಮಯದ ಕಾರಣ ಅನುಮತಿ ನೀಡಲಾಗಿಲ್ಲ ಎಂದು ಹೇಳಿದ್ದಾರೆ. ಇದಲ್ಲದೆ ಬ್ಯಾಂಕ್ ಆವರಣದೊಳಗೆ ರೆಕಾರ್ಡಿಂಗ್ ನಿಲ್ಲಿಸುವಂತೆ ಮ್ಯಾನೇಜರ್ ಮಹಿಳೆಗೆ ಸೂಚಿಸುವುದು ವಿಡಿಯೋದಲ್ಲಿ ಸೆರೆಯಾಗಿದೆ.

ನಂತರ ಬ್ಯಾಂಕ್‌ನ ಇತರ ಇಬ್ಬರು ಮಹಿಳಾ  ಉದ್ಯೋಗಿಗಳು ಮಧ್ಯಪ್ರವೇಶಿಸಿ ಮಹಿಳೆಯ ಬಳಿ ಕ್ಷಮೆಯಾಚಿಸುವುದನ್ನು ಕಾಣಬಹುದು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿದ್ದು, ಬ್ಯಾಂಕ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವು ಸಾಮಾಜಿಕ ಜಾಲತಾಣದ ಬಳಕೆದಾರರು ಆಗ್ರಹಿಸಿದ್ದಾರೆ.

ಇದನ್ನು ಓದಿ: ಭಾರತ್ ಜೋಡೋ ವರ್ಷಾಚರಣೆ: ದ್ವೇಷ ಅಳಿದು, ದೇಶ ಒಗ್ಗೂಡಿಸುವವರೆಗೂ ಯಾತ್ರೆ ಮುಂದುವರಿಯುತ್ತದೆ; ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...