Homeಕರ್ನಾಟಕಜೈಪುರ: ಬುರ್ಖಾ ಧರಿಸಿದ ಮಹಿಳೆಗೆ ಕೆನರಾ ಬ್ಯಾಂಕ್‌ ಪ್ರವೇಶಕ್ಕೆ ತಡೆ

ಜೈಪುರ: ಬುರ್ಖಾ ಧರಿಸಿದ ಮಹಿಳೆಗೆ ಕೆನರಾ ಬ್ಯಾಂಕ್‌ ಪ್ರವೇಶಕ್ಕೆ ತಡೆ

- Advertisement -
- Advertisement -

ಬುರ್ಖಾ ಧರಿಸಿದ ಮಹಿಳೆಗೆ ಕೆನರಾ ಬ್ಯಾಂಕ್‌ನ ಶಾಖೆಯೊಂದಕ್ಕೆ ಪ್ರವೇಶಕ್ಕೆ ನಿರಾಕರಣೆ ಮಾಡಿರುವ ಘಟನೆ ರಾಜಸ್ಥಾನದ  ಜೈಪುರದಲ್ಲಿ ನಡೆದಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ  ಬ್ಯಾಂಕ್ ಗೈಡ್‌ಲೈನ್ಸ್‌ ಇದೆ. ಬುರ್ಖಾ ಧರಿಸಿ ಬ್ಯಾಂಕ್‌ ಒಳಗಡೆ ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಬ್ಯಾಂಕ್ ನ ಭದ್ರತಾ ಸಿಬ್ಬಂದಿ ಮಹಿಳೆಗೆ ಹೇಳುವುದು ಸೆರೆಯಾಗಿದೆ.

ವೈರಲ್ ಆಗಿರುವ 5 ನಿಮಿಷಗಳ ವಿಡಿಯೋದಲ್ಲಿ, ಮಹಿಳೆ ಜೈಪುರದ ಕೆನರಾ ಬ್ಯಾಂಕ್‌ಗೆ ಪ್ರವೇಶಕ್ಕೆ ಅನುಮತಿ ನೀಡುವಂತೆ  ಮನವಿ ಮಾಡುವುದು ಸೆರೆಯಾಗಿದೆ. ಬ್ಯಾಂಕ್ ಒಳಗಡೆ ಬುರ್ಖಾ ಧರಿಸಿ ಬರಲು ಅನುಮತಿ ಇಲ್ಲ ಎಂದು ಹೇಳಿದ ಭದ್ರತಾ ಸಿಬ್ಬಂದಿ ಬ್ಯಾಂಕ್ ಒಳಗಡೆ ಬರಲು ಮಹಿಳೆಗೆ ಬುರ್ಖಾ ತೆಗೆಯುವಂತೆ ಹೇಳುವುದು ಕಂಡು ಬಂದಿದೆ.

ಮಹಿಳೆ ಬುರ್ಖಾಗೆ ಧರಿಸಿದವರಿಗೆ ಪ್ರವೇಶಕ್ಕೆ ಅನುಮತಿ ಇಲ್ಲ ಹೇಳಿರುವ ಗೈಡ್‌ ಲೈನ್ಸ್‌ ತೋರಿಸಿ ಎಂದು ಭದ್ರತಾ ಸಿಬ್ಬಂದಿಗೆ ಮತ್ತೆ ಮತ್ತೆ ಆಗ್ರಹಿಸಿದ್ದಾರೆ.  ಈ ವೇಳೆ ಆತ ಬ್ಯಾಂಕ್‌ ನ ವ್ಯವಸ್ಥಾಪಕರು ಅನುಮತಿ ಕೊಟ್ಟರೆ ಒಳಗೆ ಬರಲು ಅನುಮತಿ ಕೊಡುವುದಾಗಿ ಹೇಳಿದ್ದಾರೆ. ಮಹಿಳೆ ಅನುಮೋದನೆಯನ್ನು ಪಡೆದ ನಂತರ ಭದ್ರತಾ ಸಿಬ್ಬಂದಿಗಳು ಹಿಂತಿರುಗಲು ಕಾಯುತ್ತಿದ್ದರು. ಈ ವೇಳೆ ಒಂದೆರಡು ಜನರು ಬ್ಯಾಂಕ್ ಒಳಗಡೆ  ಪ್ರವೇಶಿಸುವುದನ್ನು ಕಾಣಬಹುದು. ಒಬ್ಬ ವ್ಯಕ್ತಿ ನಂತರ ಮಹಿಳೆಯನ್ನು ಶಾಖಾ ವ್ಯವಸ್ಥಾಪಕರ ಕಚೇರಿಗೆ ಕರೆದೊಯ್ಯುತ್ತಾರೆ. ಅಲ್ಲಿ ಅವರು ಬುರ್ಖಾ ಧರಿಸಿದರೆ ಪ್ರವೇಶ ನಿರಾಕರಣೆ ಬಗ್ಗೆ ಹೊರಡಿಸಿದ ಗೈಡ್‌ ಲೈನ್ ತೋರಿಸುವಂತೆ  ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಮ್ಯಾನೇಜರ್, ಅವರಿಗೆ ಬ್ಯಾಂಕ್ ಆವರಣಕ್ಕೆ ಪ್ರವೇಶಿಸಲು ಅವಕಾಶ ನೀಡದಿರುವುದು ಬುರ್ಖಾದ ಕಾರಣದಿಂದಲ್ಲ. ಊಟದ ಸಮಯದ ಕಾರಣ ಅನುಮತಿ ನೀಡಲಾಗಿಲ್ಲ ಎಂದು ಹೇಳಿದ್ದಾರೆ. ಇದಲ್ಲದೆ ಬ್ಯಾಂಕ್ ಆವರಣದೊಳಗೆ ರೆಕಾರ್ಡಿಂಗ್ ನಿಲ್ಲಿಸುವಂತೆ ಮ್ಯಾನೇಜರ್ ಮಹಿಳೆಗೆ ಸೂಚಿಸುವುದು ವಿಡಿಯೋದಲ್ಲಿ ಸೆರೆಯಾಗಿದೆ.

ನಂತರ ಬ್ಯಾಂಕ್‌ನ ಇತರ ಇಬ್ಬರು ಮಹಿಳಾ  ಉದ್ಯೋಗಿಗಳು ಮಧ್ಯಪ್ರವೇಶಿಸಿ ಮಹಿಳೆಯ ಬಳಿ ಕ್ಷಮೆಯಾಚಿಸುವುದನ್ನು ಕಾಣಬಹುದು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿದ್ದು, ಬ್ಯಾಂಕ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವು ಸಾಮಾಜಿಕ ಜಾಲತಾಣದ ಬಳಕೆದಾರರು ಆಗ್ರಹಿಸಿದ್ದಾರೆ.

ಇದನ್ನು ಓದಿ: ಭಾರತ್ ಜೋಡೋ ವರ್ಷಾಚರಣೆ: ದ್ವೇಷ ಅಳಿದು, ದೇಶ ಒಗ್ಗೂಡಿಸುವವರೆಗೂ ಯಾತ್ರೆ ಮುಂದುವರಿಯುತ್ತದೆ; ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...