Homeಮುಖಪುಟಮಕ್ಕಳು, ಗರ್ಭಿಣಿಯರಿಗಾಗಿ ನಿತ್ಯ 18 ಕಿಮೀ ಸಂಚರಿಸುವ ಅಂಗನವಾಡಿ ಕಾರ್ಯಕರ್ತೆ!

ಮಕ್ಕಳು, ಗರ್ಭಿಣಿಯರಿಗಾಗಿ ನಿತ್ಯ 18 ಕಿಮೀ ಸಂಚರಿಸುವ ಅಂಗನವಾಡಿ ಕಾರ್ಯಕರ್ತೆ!

ನನಗೆ ಸಂಚಾರ ಮಾಡುವ ಕಷ್ಟಕ್ಕಿಂತ ನವಜಾತ ಶಿಶುಗಳು, ಗರ್ಭಿಣಿಯರು ಮತ್ತುಬಾಣಂತಿ ತಾಯಂದಿರು ಪೌಷ್ಟಿಕ ಆಹಾರವನ್ನು ಸೇವಿಸಿ ಆರೋಗ್ಯವಾಗಿರುವುದು ಬಹಳ ಮುಖ್ಯ ಎಂದು ರೇಲು ವಾಸವೆ ತಿಳಿಸುತ್ತಾರೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಜನರಿಗೆ ಸಹಾಯ ಮಾಡುವ ಪ್ರಯತ್ನದಲ್ಲಿ, ಮಹಾರಾಷ್ಟ್ರದ ನಂದೂರ್‌ಬಾರ್‌ನ ಅಂಗನವಾಡಿ ಕಾರ್ಯಕರ್ತೆ ರೇಲು ವಾಸವೆ, ಪ್ರತಿದಿನ 18 ಕಿಲೋಮೀಟರ್ ಸಂಚರಿಸಿ ಕುಗ್ರಾಮಗಳಿಗೆ, ಬುಡಕಟ್ಟು ಹಳ್ಳಿಗಳಿಗೆ ತೆರಳುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಆರು ವರ್ಷದೊಳಗಿನ ಬುಡಕಟ್ಟು ಮಕ್ಕಳಿಗೆ ಸಹಾಯ ಮಾಡಲು ಮತ್ತು ಗರ್ಭಿಣಿಯರು, ಬಾಣಂತಿ ತಾಯಂದಿರನ್ನು ನೋಡಲು, ಅವರಿಗೆ ಸರಿಯಾದ ವೈದ್ಯಕೀಯ ಆರೈಕೆ ಮತ್ತು ತಿಳುವಳಿಕೆ ನೀಡಲು ಪ್ರತಿ ದಿನ ರೇಲು ವಾಸವೆ ನದಿಯನ್ನು ದಾಟಿ ಬುಡಕಟ್ಟು ಗ್ರಾಮಗಳಿಗೆ ತೆರಳುತ್ತಾರೆ.

ಅಂಗನವಾಡಿ ಕಾರ್ಯಕರ್ತೆ ರೇಲು ವಾಸವೆ, ನಾಸಿಕ್‌ಗೆ ಸೇರಿದವರಾಗಿದ್ದು, ಕಳೆದ ಏಪ್ರಿಲ್‌ನಿಂದ ಬುಡಕಟ್ಟು ಗ್ರಾಮಗಳ ನವಜಾತ ಶಿಶುಗಳನ್ನು ಭೇಟಿ ಮಾಡಲು ಪ್ರಾರಂಭಿಸಿದರು. ಜೊತೆಗೆ ಅಲಿಗಟ್ ಮತ್ತು ದಾದರ್‌ನ ಕುಗ್ರಾಮಗಳಲ್ಲಿ ಗರ್ಭಿಣಿ ಮತ್ತು ಬಾಣಂತಿ ತಾಯಂದಿರನ್ನು ನೋಡಿಕೊಳ್ಳಲು ಪ್ರಾರಂಭಿಸಿದರು.

ಇದನ್ನೂ ಓದಿ: ಅಮೆರಿಕ: ಜೋ ಬಿಡೆನ್ ಪತ್ನಿಯ ನೀತಿ ನಿರ್ದೇಶಕಿಯಾಗಿ ಭಾರತೀಯ ಮೂಲದ ಮಾಲಾ ಅಡಿಗಾ ಆಯ್ಕೆ!

ಅಂಗನವಾಡಿ ಕಾರ್ಯಕರ್ತೆಯಾಗಿರುವ ಅವರು ನವಜಾತ ಶಿಶುಗಳು, ಅವರ ತಾಯಂದಿರ ತೂಕ, ಆರೋಗ್ಯ ಮತ್ತು ಸರಿಯಾದ ಬೆಳವಣಿಗೆಯನ್ನು ಪರಿಶೀಲಿಸುತ್ತಲೇ ಇರಬೇಕು. ಹಾಗಾಗಿ ಅವರು ಲಾಕ್‌ಡೌನ್‌ ಲೆಕ್ಕಿಸದೇ ಕೆಲಸ ಮಾಡಿದ್ದಾರೆ.

’ಪ್ರತಿದಿನ ನದಿಯಲ್ಲಿ ಹುಟ್ಟು ಹಾಕಿ ಸಂಚಾರ ಮಾಡುವುದು ಸುಲಭವಲ್ಲ. ಸಂಜೆ ಮನೆಗೆ ಹಿಂದಿರುಗುವ ಹೊತ್ತಿಗೆ ನನ್ನ ಕೈ ನೋವು ಬಂದಿರುತ್ತದೆ. ಆದರೆ ನನಗೆ ಆ ಚಿಂತೆ ಇಲ್ಲ. ಮುಖ್ಯವಾಗಿ ನವಜಾತ ಶಿಶುಗಳು ಮತ್ತು ಗರ್ಭಿಣಿಯರು ಮತ್ತು ಬಾಣಂತಿ ತಾಯಂದಿರು ಪೌಷ್ಟಿಕ ಆಹಾರವನ್ನು ಸೇವಿಸಿ ಆರೋಗ್ಯವಾಗಿರುವುದು ಬಹಳ ಮುಖ್ಯ’ ಎನ್ನುತ್ತಾರೆ. ಕೊರೊನಾ ಸಾಂಕ್ರಾಮಿಕ ರೋಗ ಸುಧಾರಿಸುವವರೆಗೆ ನಾನು ಈ ಕುಗ್ರಾಮಗಳಿಗೆ ಭೇಟಿ ನೀಡುತ್ತೇನೆ “ಎಂದು ರೇಲು ವಾಸವೆ ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದಾರೆ.

Image
PC: ANI

ಕೊರೊನಾದಂತಹ ಸಂಕಷ್ಟಕರ ಸಮಯದಲ್ಲಿ ಅವರು ಮಾಡಿದ, ಮಾಡುತ್ತಿರುವ ಸೇವೆಗಾಗಿ ಕುಗ್ರಾಮಗಳ ಬುಡಕಟ್ಟು ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈಕೆಯ ಸೇವೆ ಕುರಿತು ಮುಖ್ಯಮಂತ್ರಿಗಳ ಕಚೇರಿ ಮತ್ತು ನಂದೂರ್‌ಬಾರ್‌ನ ಜಿಲ್ಲಾ ಪರಿಷತ್ತಿನ ಮುಖ್ಯ ಕಾರ್ಯನಿರ್ವಾಹಕರಿಗೂ ವಿಚಾರ ತಲುಪಿದ್ದು, ಇಂತಹ ಅಮೂಲ್ಯ ಸೇವೆ ಸಲ್ಲಿಸುತ್ತಿರುವುದಕ್ಕಾಗಿ ಮುಖ್ಯಮಂತ್ರಿಗಳ ಪರವಾಗಿ ಅವರು ಧನ್ಯವಾದ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ: ಸೋಂಕಿತರನ್ನು ಗುಣಪಡಿಸುವಲ್ಲಿ ಫಿಜರ್ ಲಸಿಕೆ ಶೇಕಡ 95 ರಷ್ಟು ಪರಿಣಾಮಕಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...