Homeಮುಖಪುಟಮಕ್ಕಳು, ಗರ್ಭಿಣಿಯರಿಗಾಗಿ ನಿತ್ಯ 18 ಕಿಮೀ ಸಂಚರಿಸುವ ಅಂಗನವಾಡಿ ಕಾರ್ಯಕರ್ತೆ!

ಮಕ್ಕಳು, ಗರ್ಭಿಣಿಯರಿಗಾಗಿ ನಿತ್ಯ 18 ಕಿಮೀ ಸಂಚರಿಸುವ ಅಂಗನವಾಡಿ ಕಾರ್ಯಕರ್ತೆ!

ನನಗೆ ಸಂಚಾರ ಮಾಡುವ ಕಷ್ಟಕ್ಕಿಂತ ನವಜಾತ ಶಿಶುಗಳು, ಗರ್ಭಿಣಿಯರು ಮತ್ತುಬಾಣಂತಿ ತಾಯಂದಿರು ಪೌಷ್ಟಿಕ ಆಹಾರವನ್ನು ಸೇವಿಸಿ ಆರೋಗ್ಯವಾಗಿರುವುದು ಬಹಳ ಮುಖ್ಯ ಎಂದು ರೇಲು ವಾಸವೆ ತಿಳಿಸುತ್ತಾರೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಜನರಿಗೆ ಸಹಾಯ ಮಾಡುವ ಪ್ರಯತ್ನದಲ್ಲಿ, ಮಹಾರಾಷ್ಟ್ರದ ನಂದೂರ್‌ಬಾರ್‌ನ ಅಂಗನವಾಡಿ ಕಾರ್ಯಕರ್ತೆ ರೇಲು ವಾಸವೆ, ಪ್ರತಿದಿನ 18 ಕಿಲೋಮೀಟರ್ ಸಂಚರಿಸಿ ಕುಗ್ರಾಮಗಳಿಗೆ, ಬುಡಕಟ್ಟು ಹಳ್ಳಿಗಳಿಗೆ ತೆರಳುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಆರು ವರ್ಷದೊಳಗಿನ ಬುಡಕಟ್ಟು ಮಕ್ಕಳಿಗೆ ಸಹಾಯ ಮಾಡಲು ಮತ್ತು ಗರ್ಭಿಣಿಯರು, ಬಾಣಂತಿ ತಾಯಂದಿರನ್ನು ನೋಡಲು, ಅವರಿಗೆ ಸರಿಯಾದ ವೈದ್ಯಕೀಯ ಆರೈಕೆ ಮತ್ತು ತಿಳುವಳಿಕೆ ನೀಡಲು ಪ್ರತಿ ದಿನ ರೇಲು ವಾಸವೆ ನದಿಯನ್ನು ದಾಟಿ ಬುಡಕಟ್ಟು ಗ್ರಾಮಗಳಿಗೆ ತೆರಳುತ್ತಾರೆ.

ಅಂಗನವಾಡಿ ಕಾರ್ಯಕರ್ತೆ ರೇಲು ವಾಸವೆ, ನಾಸಿಕ್‌ಗೆ ಸೇರಿದವರಾಗಿದ್ದು, ಕಳೆದ ಏಪ್ರಿಲ್‌ನಿಂದ ಬುಡಕಟ್ಟು ಗ್ರಾಮಗಳ ನವಜಾತ ಶಿಶುಗಳನ್ನು ಭೇಟಿ ಮಾಡಲು ಪ್ರಾರಂಭಿಸಿದರು. ಜೊತೆಗೆ ಅಲಿಗಟ್ ಮತ್ತು ದಾದರ್‌ನ ಕುಗ್ರಾಮಗಳಲ್ಲಿ ಗರ್ಭಿಣಿ ಮತ್ತು ಬಾಣಂತಿ ತಾಯಂದಿರನ್ನು ನೋಡಿಕೊಳ್ಳಲು ಪ್ರಾರಂಭಿಸಿದರು.

ಇದನ್ನೂ ಓದಿ: ಅಮೆರಿಕ: ಜೋ ಬಿಡೆನ್ ಪತ್ನಿಯ ನೀತಿ ನಿರ್ದೇಶಕಿಯಾಗಿ ಭಾರತೀಯ ಮೂಲದ ಮಾಲಾ ಅಡಿಗಾ ಆಯ್ಕೆ!

ಅಂಗನವಾಡಿ ಕಾರ್ಯಕರ್ತೆಯಾಗಿರುವ ಅವರು ನವಜಾತ ಶಿಶುಗಳು, ಅವರ ತಾಯಂದಿರ ತೂಕ, ಆರೋಗ್ಯ ಮತ್ತು ಸರಿಯಾದ ಬೆಳವಣಿಗೆಯನ್ನು ಪರಿಶೀಲಿಸುತ್ತಲೇ ಇರಬೇಕು. ಹಾಗಾಗಿ ಅವರು ಲಾಕ್‌ಡೌನ್‌ ಲೆಕ್ಕಿಸದೇ ಕೆಲಸ ಮಾಡಿದ್ದಾರೆ.

’ಪ್ರತಿದಿನ ನದಿಯಲ್ಲಿ ಹುಟ್ಟು ಹಾಕಿ ಸಂಚಾರ ಮಾಡುವುದು ಸುಲಭವಲ್ಲ. ಸಂಜೆ ಮನೆಗೆ ಹಿಂದಿರುಗುವ ಹೊತ್ತಿಗೆ ನನ್ನ ಕೈ ನೋವು ಬಂದಿರುತ್ತದೆ. ಆದರೆ ನನಗೆ ಆ ಚಿಂತೆ ಇಲ್ಲ. ಮುಖ್ಯವಾಗಿ ನವಜಾತ ಶಿಶುಗಳು ಮತ್ತು ಗರ್ಭಿಣಿಯರು ಮತ್ತು ಬಾಣಂತಿ ತಾಯಂದಿರು ಪೌಷ್ಟಿಕ ಆಹಾರವನ್ನು ಸೇವಿಸಿ ಆರೋಗ್ಯವಾಗಿರುವುದು ಬಹಳ ಮುಖ್ಯ’ ಎನ್ನುತ್ತಾರೆ. ಕೊರೊನಾ ಸಾಂಕ್ರಾಮಿಕ ರೋಗ ಸುಧಾರಿಸುವವರೆಗೆ ನಾನು ಈ ಕುಗ್ರಾಮಗಳಿಗೆ ಭೇಟಿ ನೀಡುತ್ತೇನೆ “ಎಂದು ರೇಲು ವಾಸವೆ ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದಾರೆ.

Image
PC: ANI

ಕೊರೊನಾದಂತಹ ಸಂಕಷ್ಟಕರ ಸಮಯದಲ್ಲಿ ಅವರು ಮಾಡಿದ, ಮಾಡುತ್ತಿರುವ ಸೇವೆಗಾಗಿ ಕುಗ್ರಾಮಗಳ ಬುಡಕಟ್ಟು ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈಕೆಯ ಸೇವೆ ಕುರಿತು ಮುಖ್ಯಮಂತ್ರಿಗಳ ಕಚೇರಿ ಮತ್ತು ನಂದೂರ್‌ಬಾರ್‌ನ ಜಿಲ್ಲಾ ಪರಿಷತ್ತಿನ ಮುಖ್ಯ ಕಾರ್ಯನಿರ್ವಾಹಕರಿಗೂ ವಿಚಾರ ತಲುಪಿದ್ದು, ಇಂತಹ ಅಮೂಲ್ಯ ಸೇವೆ ಸಲ್ಲಿಸುತ್ತಿರುವುದಕ್ಕಾಗಿ ಮುಖ್ಯಮಂತ್ರಿಗಳ ಪರವಾಗಿ ಅವರು ಧನ್ಯವಾದ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ: ಸೋಂಕಿತರನ್ನು ಗುಣಪಡಿಸುವಲ್ಲಿ ಫಿಜರ್ ಲಸಿಕೆ ಶೇಕಡ 95 ರಷ್ಟು ಪರಿಣಾಮಕಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...