Homeಮುಖಪುಟಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

ಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

- Advertisement -
- Advertisement -

ಕೊರೊನಾ ಸೋಂಕು ಯಾವುದೇ ವ್ಯಕ್ತಿ, ವಯಸ್ಸು, ಸಮಯ ಎಂದು ನೋಡುವುದಿಲ್ಲ. ಎಲ್ಲರಲ್ಲೂ ಹರಡುತ್ತಾ ಹೋಗುತ್ತದೆ. ಹೀಗೆ ಕೊರೊನಾ ಸೋಂಕಿಗೆ ಒಳಗಾದ ವರನನ್ನು, ಪಿಪಿಎ ಕಿಟ್ ಧರಿಸಿದ್ದ ವಧು, ಕೋವಿಡ್ ವಾರ್ಡ್ ಹೊರಗೆ ಮದುವೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.

ಕೇರಳದ ಅಲಪ್ಪುಳ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಲಪ್ಪುಳ ಜಿಲ್ಲೆಯ ಕೈನಕರಿ ನಿವಾಸಿ ಶರತ್ ಮೂನ್ (28) ಮತ್ತು ತೆಕ್ಕಾನಾರ್ಯ ನಿವಾಸಿ ಅಭಿರಾಮಿ (20) ಕೋವಿಡ್ ವಾರ್ಡ್ ಹೊರಗೆ ಮದುವೆಯಾಗಿದ್ದಾರೆ.

ವರ ಶರತ್ ಮೂನ್ ಮತ್ತು ಅವರ ತಾಯಿಗೆ ಕೊರೊನಾ ಸೋಂಕು ತಗುಲಿದ್ದು, ಏಪ್ರಿಲ್ 21 ರಿಂದ ಆಸ್ಪತ್ರೆಯಲ್ಲಿದ್ದಾರೆ. ಮದುವೆಗೆ ಮತ್ತೆ ಯಾವುದೇ ಶುಭ ದಿನಾಂಕಗಳಿಲ್ಲ ಎಂದು ಎರಡು ಕುಟುಂಬಗಳು ಸೇರಿ ಕೊರೊನಾ ನಿಯಮಾವಳಿಗಳನ್ನು ಅನುಸರಿಸಿಕೊಂಡು, ಜಿಲ್ಲಾಧಿಕಾರಿ ಮತ್ತು ಆಸ್ಪತ್ರೆ ಅಧಿಕಾರಿಗಳ ಒಪ್ಪಿಗೆ ಪಡೆದು, ಆಸ್ಪತ್ರೆಯಲ್ಲಿ ಮದುವೆ ಮಾಡಿಸಿದ್ದಾರೆ.

ಇದನ್ನೂ ಓದಿ: ದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

 

ವಧು ಅಭಿರಾಮಿ ಪಿಪಿಇ ಕಿಟ್ ಧರಿಸಿ, ಸಂಬಂಧಿಕರೊಡನೆ ‘ಮುಹೂರ್ತಕ್ಕೆ ಸರಿಯಾಗಿ ಆಸ್ಪತ್ರೆಗೆ ತಲುಪಿದ್ದಾರೆ. ತುಳಸಿ ಎಲೆಗಳಿಂದ ಮಾಡಿದ ಹೂಮಾಲೆಗಳನ್ನು ಧರಿಸಿದ್, ವಧುವಿನ ತಾಯಿ ಮತ್ತು ಕೆಲವು ಆಸ್ಪತ್ರೆಯ ಸಿಬ್ಬಂದಿ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.

ಮನೆಯಲ್ಲಿ ಕ್ವಾರಂಟೈನ್‌ನಲ್ಲಿರುವ ವರನತಂದೆ ಎನ್. ಶಶಿಧರನ್, ತನ್ನ ಮಗನ ಮದುವೆಗೆ ಹಾಜರಾಗದಿರುವುದರ ಬಗ್ಗೆ ಬೇಸರವಾಗಿದ್ದರೂ, ನಿಗದಿ ಪಡಿಸಿದ್ದ ಮುಹೂರ್ತದಲ್ಲಿ ಮದುವೆ ನಡೆದಿರುವುದಕ್ಕೆ ಸಂತೋಷವಾಯಿತು ಎಂದು ಹೇಳಿದ್ದಾರೆ.

ಕೋವಿಡ್ ಪ್ರೋಟೋಕಾಲ್ ಅನುಸರಿಸಿ ವಿವಾಹವನ್ನು ನಡೆಸಲಾಗಿದೆ ಎಂದು ಎಂಸಿಎಚ್ ಅಧಿಕಾರಿಗಳು ತಿಳಿಸಿದ್ದಾರೆ. ಗಲ್ಫ್‌ನಲ್ಲಿ ಕೆಲಸ ಮಾಡುತ್ತಿರುವ ಶರತ್ ಮೂನ್ ಮತ್ತು ಅವರ ತಾಯಿ ಜಿಜಿಮೋಲ್ ಅವರು ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾಗಿ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.

ಒಂದು ವರ್ಷದ ಹಿಂದೆ ಮದುವೆ ನಡೆಸಲು ನಿಶ್ಚಯಿಸಲಾಗಿತ್ತು. ಕೊರೊನಾ ಕಾರಣದಿಂದ ಮುಂದೂಡಲಾಗಿತ್ತು. ಈಗ ಮತ್ತೆ ಮುಂದೂಡಿದರೆ ಒಳ್ಳೆಯ ಮುಹೂರ್ತ ದೊರೆಯುವುದಿಲ್ಲ ಎಂದು ಅಧಿಕಾರಿಗಳ ಅನುಮತಿ ಪಡೆದು ಮದುವೆ ನಡೆಸಲಾಗಿದೆ.


ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....