Homeಮುಖಪುಟಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

ಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

- Advertisement -
- Advertisement -

ಕೊರೊನಾ ಸೋಂಕು ಯಾವುದೇ ವ್ಯಕ್ತಿ, ವಯಸ್ಸು, ಸಮಯ ಎಂದು ನೋಡುವುದಿಲ್ಲ. ಎಲ್ಲರಲ್ಲೂ ಹರಡುತ್ತಾ ಹೋಗುತ್ತದೆ. ಹೀಗೆ ಕೊರೊನಾ ಸೋಂಕಿಗೆ ಒಳಗಾದ ವರನನ್ನು, ಪಿಪಿಎ ಕಿಟ್ ಧರಿಸಿದ್ದ ವಧು, ಕೋವಿಡ್ ವಾರ್ಡ್ ಹೊರಗೆ ಮದುವೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.

ಕೇರಳದ ಅಲಪ್ಪುಳ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಲಪ್ಪುಳ ಜಿಲ್ಲೆಯ ಕೈನಕರಿ ನಿವಾಸಿ ಶರತ್ ಮೂನ್ (28) ಮತ್ತು ತೆಕ್ಕಾನಾರ್ಯ ನಿವಾಸಿ ಅಭಿರಾಮಿ (20) ಕೋವಿಡ್ ವಾರ್ಡ್ ಹೊರಗೆ ಮದುವೆಯಾಗಿದ್ದಾರೆ.

ವರ ಶರತ್ ಮೂನ್ ಮತ್ತು ಅವರ ತಾಯಿಗೆ ಕೊರೊನಾ ಸೋಂಕು ತಗುಲಿದ್ದು, ಏಪ್ರಿಲ್ 21 ರಿಂದ ಆಸ್ಪತ್ರೆಯಲ್ಲಿದ್ದಾರೆ. ಮದುವೆಗೆ ಮತ್ತೆ ಯಾವುದೇ ಶುಭ ದಿನಾಂಕಗಳಿಲ್ಲ ಎಂದು ಎರಡು ಕುಟುಂಬಗಳು ಸೇರಿ ಕೊರೊನಾ ನಿಯಮಾವಳಿಗಳನ್ನು ಅನುಸರಿಸಿಕೊಂಡು, ಜಿಲ್ಲಾಧಿಕಾರಿ ಮತ್ತು ಆಸ್ಪತ್ರೆ ಅಧಿಕಾರಿಗಳ ಒಪ್ಪಿಗೆ ಪಡೆದು, ಆಸ್ಪತ್ರೆಯಲ್ಲಿ ಮದುವೆ ಮಾಡಿಸಿದ್ದಾರೆ.

ಇದನ್ನೂ ಓದಿ: ದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

 

ವಧು ಅಭಿರಾಮಿ ಪಿಪಿಇ ಕಿಟ್ ಧರಿಸಿ, ಸಂಬಂಧಿಕರೊಡನೆ ‘ಮುಹೂರ್ತಕ್ಕೆ ಸರಿಯಾಗಿ ಆಸ್ಪತ್ರೆಗೆ ತಲುಪಿದ್ದಾರೆ. ತುಳಸಿ ಎಲೆಗಳಿಂದ ಮಾಡಿದ ಹೂಮಾಲೆಗಳನ್ನು ಧರಿಸಿದ್, ವಧುವಿನ ತಾಯಿ ಮತ್ತು ಕೆಲವು ಆಸ್ಪತ್ರೆಯ ಸಿಬ್ಬಂದಿ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.

ಮನೆಯಲ್ಲಿ ಕ್ವಾರಂಟೈನ್‌ನಲ್ಲಿರುವ ವರನತಂದೆ ಎನ್. ಶಶಿಧರನ್, ತನ್ನ ಮಗನ ಮದುವೆಗೆ ಹಾಜರಾಗದಿರುವುದರ ಬಗ್ಗೆ ಬೇಸರವಾಗಿದ್ದರೂ, ನಿಗದಿ ಪಡಿಸಿದ್ದ ಮುಹೂರ್ತದಲ್ಲಿ ಮದುವೆ ನಡೆದಿರುವುದಕ್ಕೆ ಸಂತೋಷವಾಯಿತು ಎಂದು ಹೇಳಿದ್ದಾರೆ.

ಕೋವಿಡ್ ಪ್ರೋಟೋಕಾಲ್ ಅನುಸರಿಸಿ ವಿವಾಹವನ್ನು ನಡೆಸಲಾಗಿದೆ ಎಂದು ಎಂಸಿಎಚ್ ಅಧಿಕಾರಿಗಳು ತಿಳಿಸಿದ್ದಾರೆ. ಗಲ್ಫ್‌ನಲ್ಲಿ ಕೆಲಸ ಮಾಡುತ್ತಿರುವ ಶರತ್ ಮೂನ್ ಮತ್ತು ಅವರ ತಾಯಿ ಜಿಜಿಮೋಲ್ ಅವರು ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾಗಿ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.

ಒಂದು ವರ್ಷದ ಹಿಂದೆ ಮದುವೆ ನಡೆಸಲು ನಿಶ್ಚಯಿಸಲಾಗಿತ್ತು. ಕೊರೊನಾ ಕಾರಣದಿಂದ ಮುಂದೂಡಲಾಗಿತ್ತು. ಈಗ ಮತ್ತೆ ಮುಂದೂಡಿದರೆ ಒಳ್ಳೆಯ ಮುಹೂರ್ತ ದೊರೆಯುವುದಿಲ್ಲ ಎಂದು ಅಧಿಕಾರಿಗಳ ಅನುಮತಿ ಪಡೆದು ಮದುವೆ ನಡೆಸಲಾಗಿದೆ.


ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...