Homeಮುಖಪುಟಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

ಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

- Advertisement -
- Advertisement -

ಕೊರೊನಾ ಸೋಂಕು ಯಾವುದೇ ವ್ಯಕ್ತಿ, ವಯಸ್ಸು, ಸಮಯ ಎಂದು ನೋಡುವುದಿಲ್ಲ. ಎಲ್ಲರಲ್ಲೂ ಹರಡುತ್ತಾ ಹೋಗುತ್ತದೆ. ಹೀಗೆ ಕೊರೊನಾ ಸೋಂಕಿಗೆ ಒಳಗಾದ ವರನನ್ನು, ಪಿಪಿಎ ಕಿಟ್ ಧರಿಸಿದ್ದ ವಧು, ಕೋವಿಡ್ ವಾರ್ಡ್ ಹೊರಗೆ ಮದುವೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.

ಕೇರಳದ ಅಲಪ್ಪುಳ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಲಪ್ಪುಳ ಜಿಲ್ಲೆಯ ಕೈನಕರಿ ನಿವಾಸಿ ಶರತ್ ಮೂನ್ (28) ಮತ್ತು ತೆಕ್ಕಾನಾರ್ಯ ನಿವಾಸಿ ಅಭಿರಾಮಿ (20) ಕೋವಿಡ್ ವಾರ್ಡ್ ಹೊರಗೆ ಮದುವೆಯಾಗಿದ್ದಾರೆ.

ವರ ಶರತ್ ಮೂನ್ ಮತ್ತು ಅವರ ತಾಯಿಗೆ ಕೊರೊನಾ ಸೋಂಕು ತಗುಲಿದ್ದು, ಏಪ್ರಿಲ್ 21 ರಿಂದ ಆಸ್ಪತ್ರೆಯಲ್ಲಿದ್ದಾರೆ. ಮದುವೆಗೆ ಮತ್ತೆ ಯಾವುದೇ ಶುಭ ದಿನಾಂಕಗಳಿಲ್ಲ ಎಂದು ಎರಡು ಕುಟುಂಬಗಳು ಸೇರಿ ಕೊರೊನಾ ನಿಯಮಾವಳಿಗಳನ್ನು ಅನುಸರಿಸಿಕೊಂಡು, ಜಿಲ್ಲಾಧಿಕಾರಿ ಮತ್ತು ಆಸ್ಪತ್ರೆ ಅಧಿಕಾರಿಗಳ ಒಪ್ಪಿಗೆ ಪಡೆದು, ಆಸ್ಪತ್ರೆಯಲ್ಲಿ ಮದುವೆ ಮಾಡಿಸಿದ್ದಾರೆ.

ಇದನ್ನೂ ಓದಿ: ದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

 

ವಧು ಅಭಿರಾಮಿ ಪಿಪಿಇ ಕಿಟ್ ಧರಿಸಿ, ಸಂಬಂಧಿಕರೊಡನೆ ‘ಮುಹೂರ್ತಕ್ಕೆ ಸರಿಯಾಗಿ ಆಸ್ಪತ್ರೆಗೆ ತಲುಪಿದ್ದಾರೆ. ತುಳಸಿ ಎಲೆಗಳಿಂದ ಮಾಡಿದ ಹೂಮಾಲೆಗಳನ್ನು ಧರಿಸಿದ್, ವಧುವಿನ ತಾಯಿ ಮತ್ತು ಕೆಲವು ಆಸ್ಪತ್ರೆಯ ಸಿಬ್ಬಂದಿ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.

ಮನೆಯಲ್ಲಿ ಕ್ವಾರಂಟೈನ್‌ನಲ್ಲಿರುವ ವರನತಂದೆ ಎನ್. ಶಶಿಧರನ್, ತನ್ನ ಮಗನ ಮದುವೆಗೆ ಹಾಜರಾಗದಿರುವುದರ ಬಗ್ಗೆ ಬೇಸರವಾಗಿದ್ದರೂ, ನಿಗದಿ ಪಡಿಸಿದ್ದ ಮುಹೂರ್ತದಲ್ಲಿ ಮದುವೆ ನಡೆದಿರುವುದಕ್ಕೆ ಸಂತೋಷವಾಯಿತು ಎಂದು ಹೇಳಿದ್ದಾರೆ.

ಕೋವಿಡ್ ಪ್ರೋಟೋಕಾಲ್ ಅನುಸರಿಸಿ ವಿವಾಹವನ್ನು ನಡೆಸಲಾಗಿದೆ ಎಂದು ಎಂಸಿಎಚ್ ಅಧಿಕಾರಿಗಳು ತಿಳಿಸಿದ್ದಾರೆ. ಗಲ್ಫ್‌ನಲ್ಲಿ ಕೆಲಸ ಮಾಡುತ್ತಿರುವ ಶರತ್ ಮೂನ್ ಮತ್ತು ಅವರ ತಾಯಿ ಜಿಜಿಮೋಲ್ ಅವರು ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾಗಿ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.

ಒಂದು ವರ್ಷದ ಹಿಂದೆ ಮದುವೆ ನಡೆಸಲು ನಿಶ್ಚಯಿಸಲಾಗಿತ್ತು. ಕೊರೊನಾ ಕಾರಣದಿಂದ ಮುಂದೂಡಲಾಗಿತ್ತು. ಈಗ ಮತ್ತೆ ಮುಂದೂಡಿದರೆ ಒಳ್ಳೆಯ ಮುಹೂರ್ತ ದೊರೆಯುವುದಿಲ್ಲ ಎಂದು ಅಧಿಕಾರಿಗಳ ಅನುಮತಿ ಪಡೆದು ಮದುವೆ ನಡೆಸಲಾಗಿದೆ.


ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...