Homeಮುಖಪುಟಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ರೈಲಿನಿಂದ ಜಿಗಿದ ಮಹಿಳೆ

ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ರೈಲಿನಿಂದ ಜಿಗಿದ ಮಹಿಳೆ

- Advertisement -
- Advertisement -

ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ಮಲ್ಟಿ-ಮೋಡಲ್ ಟ್ರಾನ್ಸ್‌ಪೋರ್ಟ್ ಸಿಸ್ಟಮ್ (ಎಂಎಂಟಿಎಸ್) ರೈಲಿನಿಂದ ಹಾರಿದ ಮಹಿಳೆ ಗಾಯಗೊಂಡ ಘಟನೆ ಮಾರ್ಚ್ 22ರ ಶನಿವಾರ ತೆಲಂಗಾಣದಲ್ಲಿ  ನಡೆದಿದೆ.

ಸಿಕಂದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ತೆಲಾಪುರ-ಮೆಡ್ಚಲ್ ಎಂಎಂಟಿಎಸ್ ರೈಲಿನ ಮಹಿಳಾ ಕೋಚ್‌ಗೆ ನುಗ್ಗಿದ ವ್ಯಕ್ತಿಯೊಬ್ಬ, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ್ದಾನೆ. ಈ ವೇಳೆ ಭಯಭೀತರಾದ ಆಕೆ, ಚಲಿಸುತ್ತಿದ್ದ ರೈಲಿನಿಂದ ಹೊರಗೆ ಹಾರಿದ್ದಾರೆ ಎಂದು ರೈಲ್ವೆ ಪೊಲೀಸರು ಸೋಮವಾರ (ಮಾ.24) ತಿಳಿಸಿದ್ದಾರೆ.

ಮಹಿಳೆ ನಗರದ ಕೊಂಪಲ್ಲಿಯಲ್ಲಿ ರೈಲ್ವೆ ಸೇತುವೆಯ ಬಳಿ ಗಾಯಗೊಂಡು ಬಿದ್ದಿದ್ದರು. ಆಕೆಯನ್ನು ಗಮನಿಸಿದ ದಾರಿಹೋಕರು 108 ಆಂಬ್ಯುಲೆನ್ಸ್‌ಗೆ ಕರೆ ಮಾಡಿ, ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂತ್ರಸ್ತೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯವರಾಗಿದ್ದು, ಹೈದರಾಬಾದ್ ಹೊರವಲಯದಲ್ಲಿರುವ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು.

ಮಹಿಳೆ ತನ್ನ ಮೊಬೈಲ್ ರಿಪೇರಿಗಾಗಿ ಸಿಕಂದರಾಬಾದ್‌ಗೆ ಹೋಗಿದ್ದರು. ಮೊಬೈಲ್ ರಿಪೇರಿ ಮಾಡಿಸಿದ ನಂತರ, ಸಿಕಂದರಾಬಾದ್ ರೈಲು ನಿಲ್ದಾಣ ತಲುಪಿ ತೆಲಾಪುರ್-ಮೆಡ್ಚಲ್ ಎಂಎಂಟಿಎಸ್ ರೈಲು ಹತ್ತಿ ಮಹಿಳೆಯರಿಗೆ ಮೀಸಲಾದ ಕೋಚ್‌ನಲ್ಲಿ ಕುಳಿತಿದ್ದರು.

ಆಕೆಯ ಜೊತೆಗಿದ್ದ ಇಬ್ಬರು ಮಹಿಳೆಯರು ಅಲ್ವಾಲ್ ರೈಲು ನಿಲ್ದಾಣದಲ್ಲಿ ಇಳಿದಿದ್ದರು. ನಂತರ ಒಂದು ಬೋಗಿಯಲ್ಲಿ ಆಕೆ ಒಬ್ಬರೇ ಇದ್ದರು. ರಾತ್ರಿ 8.30ರ ಸುಮಾರಿಗೆ ಮಹಿಳೆಯ ಬಳಿಗೆ ಬಂದ ಯುವಕನೊಬ್ಬ ಲೈಂಗಿಕವಾಗಿ ಸಹಕರಿಸುವಂತೆ ಕೇಳಿದ್ದಾನೆ. ಆಕೆ ನಿರಾಕರಿಸಿದಾಗ, ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. ಅದಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳೆ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ರೈಲಿನಿಂದ ಹೊರಗೆ ಹಾರಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

ಸಂತ್ರಸ್ತೆಯ ತಲೆ, ಗಲ್ಲ, ಬಲಗೈ ಮತ್ತು ಸೊಂಟಕ್ಕೆ ಗಂಭೀರ ಗಾಯಗಳಾಗಿವೆ. ಸಿಕಂದರಾಬಾದ್ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಇನ್ಸ್‌ಪೆಕ್ಟರ್ ಸಾಯಿ ಈಶ್ವರ್ ಗೌಡ್ ಅವರು ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕುಟುಂಬದವರ ಮೇಲೆ ಬಿಸಿ ಎಣ್ಣೆ ಸುರಿದು ದೊಣ್ಣೆ-ಕಲ್ಲುಗಳಿಂದ ಹಲ್ಲೆ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...