Homeಮುಖಪುಟಬೆಂಗಳೂರು ವಿಮಾನ ನಿಲ್ದಾಣದ ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿ ನಾಪತ್ತೆ: ತಿಂಗಳಲ್ಲಿ ಎರಡನೇ ಪ್ರಕರಣ

ಬೆಂಗಳೂರು ವಿಮಾನ ನಿಲ್ದಾಣದ ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿ ನಾಪತ್ತೆ: ತಿಂಗಳಲ್ಲಿ ಎರಡನೇ ಪ್ರಕರಣ

- Advertisement -
- Advertisement -

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ದ ಟರ್ಮಿನಲ್ 1ರ ಕ್ಯಾಬ್ ಕಂಪನಿಯೊಂದರಲ್ಲಿ ಬುಕಿಂಗ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ 27 ವರ್ಷದ ಮಹಿಳೆ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಆಕೆಯ ಸಹೋದರ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಕಳೆದ ಬುಧವಾರ ದೂರು ನೀಡಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ತುಮಕೂರು ಮೂಲದ ನೇತ್ರಾ ನಾಪತ್ತೆಯಾದ ಮಹಿಳೆ. ಈಕೆ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್‌ 1ರ ವಿಐಟಿ ಕ್ಯಾಬ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ವಿಮಾನ ನಿಲ್ದಾಣದ ಸಮೀಪದ ಹುಣಸಮಾರನಹಳ್ಳಿಯ ‘ಯಮುನಾ’ ಪಿಜಿಯಲ್ಲಿ ವಾಸವಿದ್ದರು.

ಪ್ರತಿದಿನ ಮನೆಗೆ ಕರೆ ಮಾಡಿ ಮಾತನಾಡುತ್ತಿದ್ದ ನೇತ್ರಾ, ಡಿಸೆಂಬರ್ 29,2023ರಂದು ಮಧ್ಯಾಹ್ನ ಕೊನೆಯದಾಗಿ ಕರೆ ಮಾಡಿದ್ದರು. ಆ ದಿನ ರಾತ್ರಿ ಪಾಳಿ ಕೆಲಸ (ನೈಟ್ ಡ್ಯೂಟಿ) ಇರುವುದಾಗಿ ತಿಳಿಸಿದ್ದರು. ಮರುದಿನ (ಡಿಸೆಂಬರ್ 30,2023) ಆಕೆ ಕರೆ ಮಾಡಿರಲಿಲ್ಲ. ಮನೆಯವರು ಕರೆ ಮಾಡಿದಾಗ ನೇತ್ರಾಳ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಚಾರ್ಜ್ ಮುಗಿದಿರಬಹುದು ಎಂದು ಮನೆಯವರು ಅಂದುಕೊಂಡಿದ್ದರು. ಡಿಸೆಂಬರ್ 31ರಂದು ಕೂಡ ಮನೆಯವರು ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಎಂದು ಹೇಳುತ್ತಿತ್ತು. ಇದರಿಂದ ಮನೆಯವರು ಆತಂಕಗೊಂಡಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಎರಡ್ಮೂರು ದಿನಗಳಿಂದ ನೇತ್ರಾಳ ಮೊಬೈಲ್ ಸ್ವಿಚ್ ಆಫ್ ಆದ ಕಾರಣ, ಆಕೆಯ ಸಹೋದರ ಮಹೇಶ್ ಕುಮಾರ್ ಜನವರಿ 2ರಂದು ನೇತ್ರಾ ಕೆಲಸ ಮಾಡುತ್ತಿದ್ದ ವಿಐಟಿ ಕ್ಯಾಬ್ ಕಂಪನಿಗೆ ಭೇಟಿ ನೀಡಿದ್ದರು. ಕಂಪನಿಯವರನ್ನು ವಿಚಾರಿಸಿದಾಗ, ರಾತ್ರಿ ಪಾಳಿ ಕೆಲಸ ಮುಗಿಸಿ ಡಿಸೆಂಬರ್ 30ರಂದು ಬೆಳಿಗ್ಗೆ 6 ಗಂಟೆಗೆ ನೇತ್ರಾ ಕಚೇರಿಯಿಂದ ತೆರಳಿದ್ದು, ಇದುವರೆಗೆ ಬಂದಿಲ್ಲ ಎಂದು ತಿಳಿಸಿದ್ದಾರೆ. ನೇತ್ರಾಳ ಸ್ನೇಹಿತರು, ಸಹೋದ್ಯೋಗಿಗಳನ್ನು ವಿಚಾರಿಸಿದರೂ, ಆಕೆ ಎಲ್ಲಿದ್ದಾರೆ ಎಂಬ ಮಾಹಿತಿ ಸಿಕ್ಕಿಲ್ಲ. ಇದರಿಂದ ಭಯಭೀತರಾದ ಸಹೋದರ ಮಹೇಶ್ ಕುಮಾರ್ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ನೇತ್ರಾಳ ಕುರಿತು ಇದುವರೆಗೆ ಪೊಲೀಸ್ ಮೂಲಗಳಿಂದ ಯಾವುದೇ ಮಾಹಿತಿ ದೊರೆತಿಲ್ಲ.

ತಿಂಗಳಲ್ಲಿ ಎರಡನೇ ಪ್ರಕರಣ:

ಒಂದು ತಿಂಗಳೊಳಗೆ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಎರಡನೇ ಪ್ರಕರಣ ಇದಾಗಿದ್ದು, ಕಳೆದ ನಾಲ್ಕು ತಿಂಗಳಲ್ಲಿ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ನಾಲ್ಕನೇ ನಾಪತ್ತೆ ಎಫ್‌ಐಆರ್ ದಾಖಲಾಗಿದೆ. ಡಿಸೆಂಬರ್ 3, 2023 ರಂದು, ಇಂಡಿಗೋ ವಿಮಾನಯಾನ ಸಂಸ್ಥೆಯ ಕಾರ್ಗೋ ವಿಭಾಗದಲ್ಲಿ ಉದ್ಯೋಗಿಯಾಗಿದ್ದ 22 ವರ್ಷದ ಯುವತಿ ನಾಪತ್ತೆಯಾಗಿದ್ದರು. ಈ ಸಂಬಂಧ ಆಕೆಯ ತಾಯಿ ನಾಪತ್ತೆ ದೂರು ದಾಖಲಿಸಿದ್ದಾರೆ.

ಡಿಸೆಂಬರ್ 4,2023 ರಂದು ವಿಮಾನ ನಿಲ್ದಾಣದಿಂದ ಬಿಹಾರಕ್ಕೆ ಹೊರಟಿದ್ದ ವ್ಯಕ್ತಿ ತನ್ನ ಊರು ತಲುಪಿಲ್ಲ. ಅವರು ವಿಮಾನ ನಿಲ್ದಾಣದೊಳಗೆ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಸೆಪ್ಟೆಂಬರ್ 17, 2023 ರಂದು, ಉದ್ಯೋಗ ನಿಮಿತ್ತ ದೆಹಲಿಯಿಂದ ವಿಮಾನದಲ್ಲಿ ಆಗಮಿಸಿದ್ದ ಕೇಶ ವಿನ್ಯಾಸಕಿ ಟರ್ಮಿನಲ್ 1ರಿಂದ ಕಣ್ಮರೆಯಾಗಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಮಲ ಹೊರುವ ಪದ್ಧತಿ ಇನ್ನೂ ಜೀವಂತ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...