Homeಮುಖಪುಟಶೀಘ್ರವೇ ಯುದ್ಧವಿಮಾನ ’ರಫೇಲ್’ ಹಾರಿಸಲಿರುವ ಮಹಿಳಾ ಪೈಲಟ್

ಶೀಘ್ರವೇ ಯುದ್ಧವಿಮಾನ ’ರಫೇಲ್’ ಹಾರಿಸಲಿರುವ ಮಹಿಳಾ ಪೈಲಟ್

ಪ್ರಸ್ತುತ ಐಎಎಫ್‌ನ 10 ಸಕ್ರಿಯ ಮಹಿಳಾ ಫೈಟರ್ ಪೈಲಟ್‌ಗಳಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗಿದೆ.

- Advertisement -
- Advertisement -

ನಿನ್ನೆಯಷ್ಟೇ ಭಾರತೀಯ ನೌಕಾಪಡೆಯ ಯುದ್ಧನೌಕೆಗೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ನೌಕಾಪಡೆ ಐತಿಹಾಸಿಕ ಕ್ರಮ ಕೈಗೊಂಡಿತ್ತು. ಈ ಬೆನ್ನಲ್ಲೇ ವಾಯಸೇನೆ ಕೂಡ ಮಹಿಳಾ ಪೈಲಟ್ ಒಬ್ಬರನ್ನು ರಫೇಲ್ ಯುದ್ಧವಿಮಾನ ಹಾರಿಸಲು ನಿಯೋಜಿಸಲು ಮುಂದಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಂಬಾಲದಲ್ಲಿರುವ ಭಾರತೀಯ ಸೇನಾಪಡೆಯ ಗೋಲ್ಡನ್ ಆರೋಸ್ ಸ್ವ್ಕಾಡ್ರರ್‌ಗೆ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಪ್ರಸ್ತುತ ಐಎಎಫ್‌ನ 10 ಸಕ್ರಿಯ ಮಹಿಳಾ ಫೈಟರ್ ಪೈಲಟ್‌ಗಳಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗಿದೆ. ಮಿಗ್-21 ಯುದ್ಧವಿಮಾನ ಹಾರಾಟ ನಡೆಸಿರುವ ಅನುಭವವಿರುವ ಮಹಿಳಾ ಪೈಲಟ್‌ ಅನ್ನು ಆತಂರಿಕ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗಿದೆ. ಇವರಿಗೆ ರಫೇಲ್ ಹಾರಾಟ ತರಬೇತಿ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:  ರಫೇಲ್‌ ಯುದ್ದ ವಿಮಾನಗಳು ವಾಯುಪಡೆಗೆ ಇಂದು ಅಧೀಕೃತ ಸೇರ್ಪಡೆ

ಸೆಪ್ಟೆಂಬರ್‌ 10ರಂದು 5 ರಫೇಲ್‌ ವಿಮಾನಗಳು ಅಧೀಕೃತವಾಗಿ ಭಾರತೀಯ ವಾಯುಪಡೆಗೆ ಹರ್ಯಾಣದ ಅಂಬಾಲ ವಾಯುನೆಲೆಗೆ ಸೇರ್ಪಡೆಯಾಗಿದ್ದವು. ಅಕ್ಟೋಬರ್ ಮತ್ತು ಡಿಸೆಂಬರ್‌ನಲ್ಲಿ ಹೆಚ್ಚಿನ ರಫೇಲ್‌ಗಳು ಬರಲಿದ್ದು, 2021ರ ಅಂತ್ಯದ ವೇಳೆಗೆ 36 ರಫೇಲ್‌ಗಳು ಭಾರತದ ವಾಯುಪಡೆಗೆ ಸೇರ್ಪಡೆಯಾಗಲಿವೆ.

ಮಹಿಳಾ ಪೈಲಟ್‌ಗಳಿಗೂ ಪುರುಷ ಸಿಬ್ಬಂದಿಗಳಿಗೆ ನೀಡುವ ತರಬೇತಿಯನ್ನೇ ನೀಡಲಾಗುತ್ತದೆ. ವಾಯುಪಡೆಯಲ್ಲಿ 10 ಮಹಿಳಾ ಪೈಲಟ್‌ಗಳು, 18 ಮಹಿಳಾ ನಾವಿಗೇಟರ್‌ಗಳು ಸೇರಿ ಒಟ್ಟು 1,875 ಮಹಿಳಾ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.

ಭಾರತೀಯ ನೌಕಾಪಡೆಯ ಸಬ್ ಲೆಫ್ಟಿನೆಂಟ್ ಕುಮುದಿನಿ ತ್ಯಾಗಿ ಮತ್ತು ಸಬ್ ಲೆಫ್ಟಿನೆಂಟ್ ರಿತಿ ಸಿಂಗ್‌ ಯುದ್ಧನೌಕೆಯ ಕರ್ತವ್ಯಕ್ಕೆ ನಿಯೋಜನೆಗೊಂಡ ಮೊಟ್ಟ ಮೊದಲ ಮಹಿಳೆಯರಾಗಿದ್ದಾರೆ. ಈಗ ವಾಯುಸೇನೆ ಕೂಡ ರಫೇಲ್ ಯುದ್ಧವಿಮಾನಕ್ಕೆ ಮಹಿಳಾ ಪೈಲಟ್‌ ಒಬ್ಬರನ್ನು ನಿಯೋಜಿಸಲು ಮುಂದಾಗಿರುವುದು ಪ್ರಶಂಸನಿಯ. ಭಾರತೀಯ ವಾಯುಪಡೆಯಲ್ಲಿ ಮಹಿಳಾ ಪೈಲಟ್‌ಗಳ ಸಂಖ್ಯೆ ಸಾಧಾರಣವಾಗಿದ್ದರೂ, ಇಂತಹ ನಿರ್ಣಯಗಳು ಸೇನೆಗೆ ಸೇರಬಯಸುವ ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸಬಲ್ಲವು.


ಇದನ್ನೂ ಓದಿ:  ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...