Homeಮುಖಪುಟಶೀಘ್ರವೇ ಯುದ್ಧವಿಮಾನ ’ರಫೇಲ್’ ಹಾರಿಸಲಿರುವ ಮಹಿಳಾ ಪೈಲಟ್

ಶೀಘ್ರವೇ ಯುದ್ಧವಿಮಾನ ’ರಫೇಲ್’ ಹಾರಿಸಲಿರುವ ಮಹಿಳಾ ಪೈಲಟ್

ಪ್ರಸ್ತುತ ಐಎಎಫ್‌ನ 10 ಸಕ್ರಿಯ ಮಹಿಳಾ ಫೈಟರ್ ಪೈಲಟ್‌ಗಳಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗಿದೆ.

- Advertisement -
- Advertisement -

ನಿನ್ನೆಯಷ್ಟೇ ಭಾರತೀಯ ನೌಕಾಪಡೆಯ ಯುದ್ಧನೌಕೆಗೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ನೌಕಾಪಡೆ ಐತಿಹಾಸಿಕ ಕ್ರಮ ಕೈಗೊಂಡಿತ್ತು. ಈ ಬೆನ್ನಲ್ಲೇ ವಾಯಸೇನೆ ಕೂಡ ಮಹಿಳಾ ಪೈಲಟ್ ಒಬ್ಬರನ್ನು ರಫೇಲ್ ಯುದ್ಧವಿಮಾನ ಹಾರಿಸಲು ನಿಯೋಜಿಸಲು ಮುಂದಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಂಬಾಲದಲ್ಲಿರುವ ಭಾರತೀಯ ಸೇನಾಪಡೆಯ ಗೋಲ್ಡನ್ ಆರೋಸ್ ಸ್ವ್ಕಾಡ್ರರ್‌ಗೆ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಪ್ರಸ್ತುತ ಐಎಎಫ್‌ನ 10 ಸಕ್ರಿಯ ಮಹಿಳಾ ಫೈಟರ್ ಪೈಲಟ್‌ಗಳಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗಿದೆ. ಮಿಗ್-21 ಯುದ್ಧವಿಮಾನ ಹಾರಾಟ ನಡೆಸಿರುವ ಅನುಭವವಿರುವ ಮಹಿಳಾ ಪೈಲಟ್‌ ಅನ್ನು ಆತಂರಿಕ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗಿದೆ. ಇವರಿಗೆ ರಫೇಲ್ ಹಾರಾಟ ತರಬೇತಿ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:  ರಫೇಲ್‌ ಯುದ್ದ ವಿಮಾನಗಳು ವಾಯುಪಡೆಗೆ ಇಂದು ಅಧೀಕೃತ ಸೇರ್ಪಡೆ

ಸೆಪ್ಟೆಂಬರ್‌ 10ರಂದು 5 ರಫೇಲ್‌ ವಿಮಾನಗಳು ಅಧೀಕೃತವಾಗಿ ಭಾರತೀಯ ವಾಯುಪಡೆಗೆ ಹರ್ಯಾಣದ ಅಂಬಾಲ ವಾಯುನೆಲೆಗೆ ಸೇರ್ಪಡೆಯಾಗಿದ್ದವು. ಅಕ್ಟೋಬರ್ ಮತ್ತು ಡಿಸೆಂಬರ್‌ನಲ್ಲಿ ಹೆಚ್ಚಿನ ರಫೇಲ್‌ಗಳು ಬರಲಿದ್ದು, 2021ರ ಅಂತ್ಯದ ವೇಳೆಗೆ 36 ರಫೇಲ್‌ಗಳು ಭಾರತದ ವಾಯುಪಡೆಗೆ ಸೇರ್ಪಡೆಯಾಗಲಿವೆ.

ಮಹಿಳಾ ಪೈಲಟ್‌ಗಳಿಗೂ ಪುರುಷ ಸಿಬ್ಬಂದಿಗಳಿಗೆ ನೀಡುವ ತರಬೇತಿಯನ್ನೇ ನೀಡಲಾಗುತ್ತದೆ. ವಾಯುಪಡೆಯಲ್ಲಿ 10 ಮಹಿಳಾ ಪೈಲಟ್‌ಗಳು, 18 ಮಹಿಳಾ ನಾವಿಗೇಟರ್‌ಗಳು ಸೇರಿ ಒಟ್ಟು 1,875 ಮಹಿಳಾ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.

ಭಾರತೀಯ ನೌಕಾಪಡೆಯ ಸಬ್ ಲೆಫ್ಟಿನೆಂಟ್ ಕುಮುದಿನಿ ತ್ಯಾಗಿ ಮತ್ತು ಸಬ್ ಲೆಫ್ಟಿನೆಂಟ್ ರಿತಿ ಸಿಂಗ್‌ ಯುದ್ಧನೌಕೆಯ ಕರ್ತವ್ಯಕ್ಕೆ ನಿಯೋಜನೆಗೊಂಡ ಮೊಟ್ಟ ಮೊದಲ ಮಹಿಳೆಯರಾಗಿದ್ದಾರೆ. ಈಗ ವಾಯುಸೇನೆ ಕೂಡ ರಫೇಲ್ ಯುದ್ಧವಿಮಾನಕ್ಕೆ ಮಹಿಳಾ ಪೈಲಟ್‌ ಒಬ್ಬರನ್ನು ನಿಯೋಜಿಸಲು ಮುಂದಾಗಿರುವುದು ಪ್ರಶಂಸನಿಯ. ಭಾರತೀಯ ವಾಯುಪಡೆಯಲ್ಲಿ ಮಹಿಳಾ ಪೈಲಟ್‌ಗಳ ಸಂಖ್ಯೆ ಸಾಧಾರಣವಾಗಿದ್ದರೂ, ಇಂತಹ ನಿರ್ಣಯಗಳು ಸೇನೆಗೆ ಸೇರಬಯಸುವ ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸಬಲ್ಲವು.


ಇದನ್ನೂ ಓದಿ:  ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...