Homeಮುಖಪುಟಪುರುಷ ಪಾರಮ್ಯ ಸಮಾಜದಲ್ಲಿ ವಿವಾಹ ನೇರವೇರಿಸಿ ಅಚ್ಚರಿ ಮೂಡಿಸಿದ ಮಹಿಳಾ ಅರ್ಚಕಿ!

ಪುರುಷ ಪಾರಮ್ಯ ಸಮಾಜದಲ್ಲಿ ವಿವಾಹ ನೇರವೇರಿಸಿ ಅಚ್ಚರಿ ಮೂಡಿಸಿದ ಮಹಿಳಾ ಅರ್ಚಕಿ!

ವಧುವಿನ ಒತ್ತಾಸೆಯ ಮೇರೆಗೆ ಮಹಿಳಾ ಅರ್ಚಕಿಯೊಬ್ಬರು ಹಿಂದೂ ಸಂಪ್ರದಾಯದ ಪ್ರಕಾರ ವಿವಾಹ ನಡೆಸಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

- Advertisement -
- Advertisement -

ಮಹಿಳಾ ಅರ್ಚಕಿಯೊಬ್ಬರೂ ಅಚ್ಚುಕಟ್ಟಾಗಿ ವಿವಾಹ ನೆರವೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ವಿಶೇಷ ಘಟನೆಯೊಂದು ಚನ್ನೈನಲ್ಲಿ ನಡೆದಿದೆ.

ತೆಲುಗಿನ ಸುಷ್ಮಾ ಹರಿಣಿ ಮತ್ತು ತಮಿಳಿನ ವಿಗ್ನೇಶ್ ರಾಘವನ್ ಅವರ ವಿವಾಹವನ್ನು ಚನ್ನೈ ನಗರದ ಹೊರವಲಯದಲ್ಲಿರುವ ದಕ್ಷಿಣ ಚಿತ್ರದಲ್ಲಿ ಮಹಿಳಾ ಅರ್ಚಕಿಯೊಬ್ಬರು ಮುಂದೆ ನಿಂತು ನಡೆಸಿಕೊಟ್ಟಿದ್ದಾರೆ.

ವಕೀಲೆಯಾಗಿರುವ ವಧು ಸುಷ್ಮಾ ಹರಿಣಿ ತನ್ನ ಮದುವೆಯಲ್ಲಿ ಮಹಿಳಾ ಪುರೋಹಿತರು ಮತ್ತು ಮಹಿಳಾ ಸಂಗೀತಗಾರರು ಇರಬೇಕೆಂದು ಒತ್ತಾಯಿಸಿದ್ದಾರೆ. ಆಕೆಯ ಪೋಷಕರು ಇದಕ್ಕೆ ಒಪ್ಪಿದ್ದಲ್ಲದೇ ಎಲ್ಲೆಡೆ ಮಹಿಳಾ ಅರ್ಚಕಿಯನ್ನು ಹುಡುಕಲು ಆರಂಭಿಸಿದರು. ಕೊನೆಗೂ ಯಶಸ್ವಿಯಾದ ಅವರು ಮೈಸೂರಿನ ಬ್ರಮರಂಬ ಮಹೇಶ್ವರಿ ಎಂಬ ವೈದಿಕ ವಿದ್ವಾಂಸೆ ಮತ್ತು ವಿವಾಹ ಅರ್ಚಕಿನನ್ನು ಹುಡುಕಿದರು. ಅವರು ವಿವಾಹವನ್ನು ನಡೆಸಲು ಒಪ್ಪಿ, ನೆರವೇರಿಸಿದ್ದಾರೆ.

ಆದರೆ ಕುಟುಂಬವು ಸಾಂಪ್ರದಾಯಿಕ ನಾಗಸ್ವರಂ ಮತ್ತು ಮೃದಂಗಂ ನುಡಿಸಲು ಎಲ್ಲ ಮಹಿಳಾ ಸಂಗೀತ ತಂಡವನ್ನು ಹುಡುಕಲಾಗಲ್ಲಿಲ್ಲ ಎಂದು ಹೇಳಿಕೊಂಡಿದೆ.

“ಮಹಿಳಾ ಅರ್ಚಕಿ ಒಳ್ಳೆಯ ಕೆಲಸ ಮಾಡಿದರು. ಅವರು ಹಿಂದೂ ವಿವಾಹಗಳಲ್ಲಿ ಅನುಸರಿಸಿದ ಆಚರಣೆಗಳನ್ನು ಚೆನ್ನಾಗಿ ನಿರ್ವಹಿಸಿದ್ದಲ್ಲದೆ, ವಧು-ವರರಿಗೆ ಇಂಗ್ಲಿಷ್‌ನಲ್ಲಿ ಪ್ರತಿ ಏಕವ್ಯಕ್ತಿ / ಮಂತ್ರದ ಮಹತ್ವವನ್ನು ವಿವರಿಸಿದರು. ಆರಂಭದಲ್ಲಿ ನಾವು ಅವರ ನೇತೃತ್ವದಲ್ಲಿ ವಿವಾಹ ನೆರವೇರಿಸಲು ಹಿಂಜರಿಯುತ್ತಿದ್ದೆವು ಮತ್ತು ಇದು ಕಠಿಣ ನಿರ್ಧಾರವಾಗಿತ್ತು. ಏಕೆಂದರೆ ಇದುವರೆಗೂ ಎಲ್ಲಿಯೂ ಮಹಿಳಾ ಪುರೋಹಿತರಿಂದ ವಿವಾಹವನ್ನು ಆಚರಿಸಲಾಗಿದೆಯೆಂದು ನಾವು ಕೇಳಿಲ್ಲ. ಆದರೆ ಇದು ನಮಗೆಲ್ಲರಿಗೂ ಬಹಳ ಸಂತೋಷದ ಸಂದರ್ಭವಾಗಿದೆ ” ಎಂದು ವಧು ಸುಷ್ಮಾ ಅವರ ತಂದೆ ಸುರೇಶ್ ರೆಡ್ಡಿ ಹೇಳಿದ್ದಾರೆ.

ಮದುವೆಗೆ ಹಾಜರಾದ ಸಂಬಂಧಿಕರು ಮತ್ತು ಸ್ನೇಹಿತರು ಅರ್ಚಕಿ ಮಹೇಶ್ವರಿಯ ಸಾಮರ್ಥ್ಯದಿಂದ ತೃಪ್ತರಾಗಿದ್ದಾರೆ. ಅಲ್ಲದೇ ಅನೇಕರು ಅವರ ಸಂಪರ್ಕ ವಿವರಗಳನ್ನು ತೆಗೆದುಕೊಂಡಿದ್ದಾರೆ ಎಂದು ಸುರೇಶ್‌ ರೆಡ್ಡಿ ತಿಳಿಸಿದ್ದಾರೆ.

“ಮದುವೆಗಳಲ್ಲಿ ಅರ್ಚಕರ ವೃತ್ತಿಯು ಪುರುಷರ ಭದ್ರಕೋಟೆಯಾಗಿದೆ. ಹಾಗಾಗಿ ಆ ದೃಷ್ಟಿಕೋನವನ್ನು ಬದಲಾಯಿಸಲು ಮತ್ತು ಅದನ್ನು ಮಹಿಳೆಯರು ಕೂಡ ನಡೆಸಬಹುದೆಂದು ಜನರಿಗೆ ಅರಿತು ಮೂಡಿಸಲು ನಾನು ಬಯಸಿದ್ದೆ. ಹಾಗಾಗಿ ನನ್ನ ಮದುವೆಯನ್ನು ಮಹಿಳಾ ಅರ್ಚಕರಿಂದಲೇ ಮಾಡಿಸಿದೆ. ಮಹಿಳಾ ಪುರೋಹಿತರು ಅಸ್ತಿತ್ವದಲ್ಲಿದ್ದಾರೆ ಮತ್ತು ವಿವಾಹಗಳನ್ನು ನಡೆಸಲು ಅವರನ್ನು ನೇಮಿಸುವ ಮೂಲಕ ನಾವು ಪ್ರೋತ್ಸಾಹಿಸಬೇಕು” ಎಂದು ವಧು ಸುಷ್ಮಾ ಹೇಳಿದ್ದಾರೆ.

ಸೇಲಂನಲ್ಲಿ ಮಹಿಳಾ ಅರ್ಚಕರು ವಿವಾಹವನ್ನು ನಡೆಸಿದ ಉದಾಹರಣೆಗಳಿವೆ, ಆದರೆ ಇದು ಒಂದು ನಿರ್ದಿಷ್ಟ ಪಂಥದೊಳಗೆ ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ಆಧಾರ: ದಿ ಹಿಂದೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...