Homeಮುಖಪುಟಪುರುಷ ಪಾರಮ್ಯ ಸಮಾಜದಲ್ಲಿ ವಿವಾಹ ನೇರವೇರಿಸಿ ಅಚ್ಚರಿ ಮೂಡಿಸಿದ ಮಹಿಳಾ ಅರ್ಚಕಿ!

ಪುರುಷ ಪಾರಮ್ಯ ಸಮಾಜದಲ್ಲಿ ವಿವಾಹ ನೇರವೇರಿಸಿ ಅಚ್ಚರಿ ಮೂಡಿಸಿದ ಮಹಿಳಾ ಅರ್ಚಕಿ!

ವಧುವಿನ ಒತ್ತಾಸೆಯ ಮೇರೆಗೆ ಮಹಿಳಾ ಅರ್ಚಕಿಯೊಬ್ಬರು ಹಿಂದೂ ಸಂಪ್ರದಾಯದ ಪ್ರಕಾರ ವಿವಾಹ ನಡೆಸಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

- Advertisement -
- Advertisement -

ಮಹಿಳಾ ಅರ್ಚಕಿಯೊಬ್ಬರೂ ಅಚ್ಚುಕಟ್ಟಾಗಿ ವಿವಾಹ ನೆರವೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ವಿಶೇಷ ಘಟನೆಯೊಂದು ಚನ್ನೈನಲ್ಲಿ ನಡೆದಿದೆ.

ತೆಲುಗಿನ ಸುಷ್ಮಾ ಹರಿಣಿ ಮತ್ತು ತಮಿಳಿನ ವಿಗ್ನೇಶ್ ರಾಘವನ್ ಅವರ ವಿವಾಹವನ್ನು ಚನ್ನೈ ನಗರದ ಹೊರವಲಯದಲ್ಲಿರುವ ದಕ್ಷಿಣ ಚಿತ್ರದಲ್ಲಿ ಮಹಿಳಾ ಅರ್ಚಕಿಯೊಬ್ಬರು ಮುಂದೆ ನಿಂತು ನಡೆಸಿಕೊಟ್ಟಿದ್ದಾರೆ.

ವಕೀಲೆಯಾಗಿರುವ ವಧು ಸುಷ್ಮಾ ಹರಿಣಿ ತನ್ನ ಮದುವೆಯಲ್ಲಿ ಮಹಿಳಾ ಪುರೋಹಿತರು ಮತ್ತು ಮಹಿಳಾ ಸಂಗೀತಗಾರರು ಇರಬೇಕೆಂದು ಒತ್ತಾಯಿಸಿದ್ದಾರೆ. ಆಕೆಯ ಪೋಷಕರು ಇದಕ್ಕೆ ಒಪ್ಪಿದ್ದಲ್ಲದೇ ಎಲ್ಲೆಡೆ ಮಹಿಳಾ ಅರ್ಚಕಿಯನ್ನು ಹುಡುಕಲು ಆರಂಭಿಸಿದರು. ಕೊನೆಗೂ ಯಶಸ್ವಿಯಾದ ಅವರು ಮೈಸೂರಿನ ಬ್ರಮರಂಬ ಮಹೇಶ್ವರಿ ಎಂಬ ವೈದಿಕ ವಿದ್ವಾಂಸೆ ಮತ್ತು ವಿವಾಹ ಅರ್ಚಕಿನನ್ನು ಹುಡುಕಿದರು. ಅವರು ವಿವಾಹವನ್ನು ನಡೆಸಲು ಒಪ್ಪಿ, ನೆರವೇರಿಸಿದ್ದಾರೆ.

ಆದರೆ ಕುಟುಂಬವು ಸಾಂಪ್ರದಾಯಿಕ ನಾಗಸ್ವರಂ ಮತ್ತು ಮೃದಂಗಂ ನುಡಿಸಲು ಎಲ್ಲ ಮಹಿಳಾ ಸಂಗೀತ ತಂಡವನ್ನು ಹುಡುಕಲಾಗಲ್ಲಿಲ್ಲ ಎಂದು ಹೇಳಿಕೊಂಡಿದೆ.

“ಮಹಿಳಾ ಅರ್ಚಕಿ ಒಳ್ಳೆಯ ಕೆಲಸ ಮಾಡಿದರು. ಅವರು ಹಿಂದೂ ವಿವಾಹಗಳಲ್ಲಿ ಅನುಸರಿಸಿದ ಆಚರಣೆಗಳನ್ನು ಚೆನ್ನಾಗಿ ನಿರ್ವಹಿಸಿದ್ದಲ್ಲದೆ, ವಧು-ವರರಿಗೆ ಇಂಗ್ಲಿಷ್‌ನಲ್ಲಿ ಪ್ರತಿ ಏಕವ್ಯಕ್ತಿ / ಮಂತ್ರದ ಮಹತ್ವವನ್ನು ವಿವರಿಸಿದರು. ಆರಂಭದಲ್ಲಿ ನಾವು ಅವರ ನೇತೃತ್ವದಲ್ಲಿ ವಿವಾಹ ನೆರವೇರಿಸಲು ಹಿಂಜರಿಯುತ್ತಿದ್ದೆವು ಮತ್ತು ಇದು ಕಠಿಣ ನಿರ್ಧಾರವಾಗಿತ್ತು. ಏಕೆಂದರೆ ಇದುವರೆಗೂ ಎಲ್ಲಿಯೂ ಮಹಿಳಾ ಪುರೋಹಿತರಿಂದ ವಿವಾಹವನ್ನು ಆಚರಿಸಲಾಗಿದೆಯೆಂದು ನಾವು ಕೇಳಿಲ್ಲ. ಆದರೆ ಇದು ನಮಗೆಲ್ಲರಿಗೂ ಬಹಳ ಸಂತೋಷದ ಸಂದರ್ಭವಾಗಿದೆ ” ಎಂದು ವಧು ಸುಷ್ಮಾ ಅವರ ತಂದೆ ಸುರೇಶ್ ರೆಡ್ಡಿ ಹೇಳಿದ್ದಾರೆ.

ಮದುವೆಗೆ ಹಾಜರಾದ ಸಂಬಂಧಿಕರು ಮತ್ತು ಸ್ನೇಹಿತರು ಅರ್ಚಕಿ ಮಹೇಶ್ವರಿಯ ಸಾಮರ್ಥ್ಯದಿಂದ ತೃಪ್ತರಾಗಿದ್ದಾರೆ. ಅಲ್ಲದೇ ಅನೇಕರು ಅವರ ಸಂಪರ್ಕ ವಿವರಗಳನ್ನು ತೆಗೆದುಕೊಂಡಿದ್ದಾರೆ ಎಂದು ಸುರೇಶ್‌ ರೆಡ್ಡಿ ತಿಳಿಸಿದ್ದಾರೆ.

“ಮದುವೆಗಳಲ್ಲಿ ಅರ್ಚಕರ ವೃತ್ತಿಯು ಪುರುಷರ ಭದ್ರಕೋಟೆಯಾಗಿದೆ. ಹಾಗಾಗಿ ಆ ದೃಷ್ಟಿಕೋನವನ್ನು ಬದಲಾಯಿಸಲು ಮತ್ತು ಅದನ್ನು ಮಹಿಳೆಯರು ಕೂಡ ನಡೆಸಬಹುದೆಂದು ಜನರಿಗೆ ಅರಿತು ಮೂಡಿಸಲು ನಾನು ಬಯಸಿದ್ದೆ. ಹಾಗಾಗಿ ನನ್ನ ಮದುವೆಯನ್ನು ಮಹಿಳಾ ಅರ್ಚಕರಿಂದಲೇ ಮಾಡಿಸಿದೆ. ಮಹಿಳಾ ಪುರೋಹಿತರು ಅಸ್ತಿತ್ವದಲ್ಲಿದ್ದಾರೆ ಮತ್ತು ವಿವಾಹಗಳನ್ನು ನಡೆಸಲು ಅವರನ್ನು ನೇಮಿಸುವ ಮೂಲಕ ನಾವು ಪ್ರೋತ್ಸಾಹಿಸಬೇಕು” ಎಂದು ವಧು ಸುಷ್ಮಾ ಹೇಳಿದ್ದಾರೆ.

ಸೇಲಂನಲ್ಲಿ ಮಹಿಳಾ ಅರ್ಚಕರು ವಿವಾಹವನ್ನು ನಡೆಸಿದ ಉದಾಹರಣೆಗಳಿವೆ, ಆದರೆ ಇದು ಒಂದು ನಿರ್ದಿಷ್ಟ ಪಂಥದೊಳಗೆ ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ಆಧಾರ: ದಿ ಹಿಂದೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು...

ಚುನಾವಣಾ ಟ್ರಸ್ಟ್‌ಗಳಿಂದ ರೂ. 3,157.6 ಕೋಟಿ ಪಡೆದ ಬಿಜೆಪಿ: ಎಡಿಆರ್‌

2024–25ರ ಹಣಕಾಸು ವರ್ಷದಲ್ಲಿ ಚುನಾವಣಾ ಟ್ರಸ್ಟ್‌ಗಳು ವಿತರಿಸಿದ ರೂ. 3,826.3 ಕೋಟಿಗಳಲ್ಲಿ ಭಾರತೀಯ ಜನತಾ ಪಕ್ಷವು ಶೇ. 82 ಕ್ಕಿಂತ ಹೆಚ್ಚು ಹಣವನ್ನು ಪಡೆದುಕೊಂಡಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌)...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ. ಶುಕ್ರವಾರ...

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...

ಗಾಜಾ ಕುರಿತು ತೀರ್ಪುಗಾರರ ಹೇಳಿಕೆಗೆ ವಿರೋಧ; ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿದ ಅರುಂಧತಿ ರಾಯ್

ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ ಎಂದು ಬರಹಗಾರ್ತಿ ಅರುಂಧತಿ ರಾಯ್ ಹೇಳಿದ್ದಾರೆ. ತೀರ್ಪುಗಾರರ ಅಧ್ಯಕ್ಷೆ ವಿಮ್ ವೆಂಡರ್ಸ್ ಅವರು, ಗಾಜಾ ಕುರಿತು ಪ್ರಶ್ನಿಸಿದಾಗ 'ರಾಜಕೀಯ ವಿಷಯಗಳಲ್ಲಿ ತೊಡಗಿಸಿಕೊಳ್ಳಲು ಇಷ್ಟಪಡುವುದಿಲ್ಲ' ಎಂದು ಹೇಳಿದ್ದರು. ಈ...

‘ಮಾನವೀಯತೆಯೇ ಏಕೈಕ ಧರ್ಮ..’; ಹಳ್ಳಿಯನ್ನು ಜಾತಿ ಮುಕ್ತ ಎಂದು ಘೋಷಿಸಿದ ಮಹಾರಾಷ್ಟ್ರದ ಸೌಂದಲ ಗ್ರಾಮ

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಸೌಂದಲ ಗ್ರಾಮವು ತನ್ನನ್ನು ತಾನು 'ಜಾತಿ ಮುಕ್ತ' ಎಂದು ಘೋಷಿಸಿಕೊಂಡಿದ್ದು, ಸಂವಿಧಾನದ ಪೀಠಿಕೆ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಮಾರ್ಗದರ್ಶಿ ತತ್ವವಾಗಿ ಅಳವಡಿಸಿಕೊಂಡಿದೆ. ಫೆಬ್ರವರಿ 5 ರಂದು ನಡೆದ...

ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರ ಹಂಚಿಕೆ: ದೂರು ದಾಖಲು

ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ನಿಯೋಜಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ನಕಲಿ...

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...