Homeಮುಖಪುಟಪುರುಷ ಪಾರಮ್ಯ ಸಮಾಜದಲ್ಲಿ ವಿವಾಹ ನೇರವೇರಿಸಿ ಅಚ್ಚರಿ ಮೂಡಿಸಿದ ಮಹಿಳಾ ಅರ್ಚಕಿ!

ಪುರುಷ ಪಾರಮ್ಯ ಸಮಾಜದಲ್ಲಿ ವಿವಾಹ ನೇರವೇರಿಸಿ ಅಚ್ಚರಿ ಮೂಡಿಸಿದ ಮಹಿಳಾ ಅರ್ಚಕಿ!

ವಧುವಿನ ಒತ್ತಾಸೆಯ ಮೇರೆಗೆ ಮಹಿಳಾ ಅರ್ಚಕಿಯೊಬ್ಬರು ಹಿಂದೂ ಸಂಪ್ರದಾಯದ ಪ್ರಕಾರ ವಿವಾಹ ನಡೆಸಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

- Advertisement -
- Advertisement -

ಮಹಿಳಾ ಅರ್ಚಕಿಯೊಬ್ಬರೂ ಅಚ್ಚುಕಟ್ಟಾಗಿ ವಿವಾಹ ನೆರವೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ವಿಶೇಷ ಘಟನೆಯೊಂದು ಚನ್ನೈನಲ್ಲಿ ನಡೆದಿದೆ.

ತೆಲುಗಿನ ಸುಷ್ಮಾ ಹರಿಣಿ ಮತ್ತು ತಮಿಳಿನ ವಿಗ್ನೇಶ್ ರಾಘವನ್ ಅವರ ವಿವಾಹವನ್ನು ಚನ್ನೈ ನಗರದ ಹೊರವಲಯದಲ್ಲಿರುವ ದಕ್ಷಿಣ ಚಿತ್ರದಲ್ಲಿ ಮಹಿಳಾ ಅರ್ಚಕಿಯೊಬ್ಬರು ಮುಂದೆ ನಿಂತು ನಡೆಸಿಕೊಟ್ಟಿದ್ದಾರೆ.

ವಕೀಲೆಯಾಗಿರುವ ವಧು ಸುಷ್ಮಾ ಹರಿಣಿ ತನ್ನ ಮದುವೆಯಲ್ಲಿ ಮಹಿಳಾ ಪುರೋಹಿತರು ಮತ್ತು ಮಹಿಳಾ ಸಂಗೀತಗಾರರು ಇರಬೇಕೆಂದು ಒತ್ತಾಯಿಸಿದ್ದಾರೆ. ಆಕೆಯ ಪೋಷಕರು ಇದಕ್ಕೆ ಒಪ್ಪಿದ್ದಲ್ಲದೇ ಎಲ್ಲೆಡೆ ಮಹಿಳಾ ಅರ್ಚಕಿಯನ್ನು ಹುಡುಕಲು ಆರಂಭಿಸಿದರು. ಕೊನೆಗೂ ಯಶಸ್ವಿಯಾದ ಅವರು ಮೈಸೂರಿನ ಬ್ರಮರಂಬ ಮಹೇಶ್ವರಿ ಎಂಬ ವೈದಿಕ ವಿದ್ವಾಂಸೆ ಮತ್ತು ವಿವಾಹ ಅರ್ಚಕಿನನ್ನು ಹುಡುಕಿದರು. ಅವರು ವಿವಾಹವನ್ನು ನಡೆಸಲು ಒಪ್ಪಿ, ನೆರವೇರಿಸಿದ್ದಾರೆ.

ಆದರೆ ಕುಟುಂಬವು ಸಾಂಪ್ರದಾಯಿಕ ನಾಗಸ್ವರಂ ಮತ್ತು ಮೃದಂಗಂ ನುಡಿಸಲು ಎಲ್ಲ ಮಹಿಳಾ ಸಂಗೀತ ತಂಡವನ್ನು ಹುಡುಕಲಾಗಲ್ಲಿಲ್ಲ ಎಂದು ಹೇಳಿಕೊಂಡಿದೆ.

“ಮಹಿಳಾ ಅರ್ಚಕಿ ಒಳ್ಳೆಯ ಕೆಲಸ ಮಾಡಿದರು. ಅವರು ಹಿಂದೂ ವಿವಾಹಗಳಲ್ಲಿ ಅನುಸರಿಸಿದ ಆಚರಣೆಗಳನ್ನು ಚೆನ್ನಾಗಿ ನಿರ್ವಹಿಸಿದ್ದಲ್ಲದೆ, ವಧು-ವರರಿಗೆ ಇಂಗ್ಲಿಷ್‌ನಲ್ಲಿ ಪ್ರತಿ ಏಕವ್ಯಕ್ತಿ / ಮಂತ್ರದ ಮಹತ್ವವನ್ನು ವಿವರಿಸಿದರು. ಆರಂಭದಲ್ಲಿ ನಾವು ಅವರ ನೇತೃತ್ವದಲ್ಲಿ ವಿವಾಹ ನೆರವೇರಿಸಲು ಹಿಂಜರಿಯುತ್ತಿದ್ದೆವು ಮತ್ತು ಇದು ಕಠಿಣ ನಿರ್ಧಾರವಾಗಿತ್ತು. ಏಕೆಂದರೆ ಇದುವರೆಗೂ ಎಲ್ಲಿಯೂ ಮಹಿಳಾ ಪುರೋಹಿತರಿಂದ ವಿವಾಹವನ್ನು ಆಚರಿಸಲಾಗಿದೆಯೆಂದು ನಾವು ಕೇಳಿಲ್ಲ. ಆದರೆ ಇದು ನಮಗೆಲ್ಲರಿಗೂ ಬಹಳ ಸಂತೋಷದ ಸಂದರ್ಭವಾಗಿದೆ ” ಎಂದು ವಧು ಸುಷ್ಮಾ ಅವರ ತಂದೆ ಸುರೇಶ್ ರೆಡ್ಡಿ ಹೇಳಿದ್ದಾರೆ.

ಮದುವೆಗೆ ಹಾಜರಾದ ಸಂಬಂಧಿಕರು ಮತ್ತು ಸ್ನೇಹಿತರು ಅರ್ಚಕಿ ಮಹೇಶ್ವರಿಯ ಸಾಮರ್ಥ್ಯದಿಂದ ತೃಪ್ತರಾಗಿದ್ದಾರೆ. ಅಲ್ಲದೇ ಅನೇಕರು ಅವರ ಸಂಪರ್ಕ ವಿವರಗಳನ್ನು ತೆಗೆದುಕೊಂಡಿದ್ದಾರೆ ಎಂದು ಸುರೇಶ್‌ ರೆಡ್ಡಿ ತಿಳಿಸಿದ್ದಾರೆ.

“ಮದುವೆಗಳಲ್ಲಿ ಅರ್ಚಕರ ವೃತ್ತಿಯು ಪುರುಷರ ಭದ್ರಕೋಟೆಯಾಗಿದೆ. ಹಾಗಾಗಿ ಆ ದೃಷ್ಟಿಕೋನವನ್ನು ಬದಲಾಯಿಸಲು ಮತ್ತು ಅದನ್ನು ಮಹಿಳೆಯರು ಕೂಡ ನಡೆಸಬಹುದೆಂದು ಜನರಿಗೆ ಅರಿತು ಮೂಡಿಸಲು ನಾನು ಬಯಸಿದ್ದೆ. ಹಾಗಾಗಿ ನನ್ನ ಮದುವೆಯನ್ನು ಮಹಿಳಾ ಅರ್ಚಕರಿಂದಲೇ ಮಾಡಿಸಿದೆ. ಮಹಿಳಾ ಪುರೋಹಿತರು ಅಸ್ತಿತ್ವದಲ್ಲಿದ್ದಾರೆ ಮತ್ತು ವಿವಾಹಗಳನ್ನು ನಡೆಸಲು ಅವರನ್ನು ನೇಮಿಸುವ ಮೂಲಕ ನಾವು ಪ್ರೋತ್ಸಾಹಿಸಬೇಕು” ಎಂದು ವಧು ಸುಷ್ಮಾ ಹೇಳಿದ್ದಾರೆ.

ಸೇಲಂನಲ್ಲಿ ಮಹಿಳಾ ಅರ್ಚಕರು ವಿವಾಹವನ್ನು ನಡೆಸಿದ ಉದಾಹರಣೆಗಳಿವೆ, ಆದರೆ ಇದು ಒಂದು ನಿರ್ದಿಷ್ಟ ಪಂಥದೊಳಗೆ ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ಆಧಾರ: ದಿ ಹಿಂದೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...