Homeಮುಖಪುಟಪುರುಷ ಪಾರಮ್ಯ ಸಮಾಜದಲ್ಲಿ ವಿವಾಹ ನೇರವೇರಿಸಿ ಅಚ್ಚರಿ ಮೂಡಿಸಿದ ಮಹಿಳಾ ಅರ್ಚಕಿ!

ಪುರುಷ ಪಾರಮ್ಯ ಸಮಾಜದಲ್ಲಿ ವಿವಾಹ ನೇರವೇರಿಸಿ ಅಚ್ಚರಿ ಮೂಡಿಸಿದ ಮಹಿಳಾ ಅರ್ಚಕಿ!

ವಧುವಿನ ಒತ್ತಾಸೆಯ ಮೇರೆಗೆ ಮಹಿಳಾ ಅರ್ಚಕಿಯೊಬ್ಬರು ಹಿಂದೂ ಸಂಪ್ರದಾಯದ ಪ್ರಕಾರ ವಿವಾಹ ನಡೆಸಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

- Advertisement -
- Advertisement -

ಮಹಿಳಾ ಅರ್ಚಕಿಯೊಬ್ಬರೂ ಅಚ್ಚುಕಟ್ಟಾಗಿ ವಿವಾಹ ನೆರವೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ವಿಶೇಷ ಘಟನೆಯೊಂದು ಚನ್ನೈನಲ್ಲಿ ನಡೆದಿದೆ.

ತೆಲುಗಿನ ಸುಷ್ಮಾ ಹರಿಣಿ ಮತ್ತು ತಮಿಳಿನ ವಿಗ್ನೇಶ್ ರಾಘವನ್ ಅವರ ವಿವಾಹವನ್ನು ಚನ್ನೈ ನಗರದ ಹೊರವಲಯದಲ್ಲಿರುವ ದಕ್ಷಿಣ ಚಿತ್ರದಲ್ಲಿ ಮಹಿಳಾ ಅರ್ಚಕಿಯೊಬ್ಬರು ಮುಂದೆ ನಿಂತು ನಡೆಸಿಕೊಟ್ಟಿದ್ದಾರೆ.

ವಕೀಲೆಯಾಗಿರುವ ವಧು ಸುಷ್ಮಾ ಹರಿಣಿ ತನ್ನ ಮದುವೆಯಲ್ಲಿ ಮಹಿಳಾ ಪುರೋಹಿತರು ಮತ್ತು ಮಹಿಳಾ ಸಂಗೀತಗಾರರು ಇರಬೇಕೆಂದು ಒತ್ತಾಯಿಸಿದ್ದಾರೆ. ಆಕೆಯ ಪೋಷಕರು ಇದಕ್ಕೆ ಒಪ್ಪಿದ್ದಲ್ಲದೇ ಎಲ್ಲೆಡೆ ಮಹಿಳಾ ಅರ್ಚಕಿಯನ್ನು ಹುಡುಕಲು ಆರಂಭಿಸಿದರು. ಕೊನೆಗೂ ಯಶಸ್ವಿಯಾದ ಅವರು ಮೈಸೂರಿನ ಬ್ರಮರಂಬ ಮಹೇಶ್ವರಿ ಎಂಬ ವೈದಿಕ ವಿದ್ವಾಂಸೆ ಮತ್ತು ವಿವಾಹ ಅರ್ಚಕಿನನ್ನು ಹುಡುಕಿದರು. ಅವರು ವಿವಾಹವನ್ನು ನಡೆಸಲು ಒಪ್ಪಿ, ನೆರವೇರಿಸಿದ್ದಾರೆ.

ಆದರೆ ಕುಟುಂಬವು ಸಾಂಪ್ರದಾಯಿಕ ನಾಗಸ್ವರಂ ಮತ್ತು ಮೃದಂಗಂ ನುಡಿಸಲು ಎಲ್ಲ ಮಹಿಳಾ ಸಂಗೀತ ತಂಡವನ್ನು ಹುಡುಕಲಾಗಲ್ಲಿಲ್ಲ ಎಂದು ಹೇಳಿಕೊಂಡಿದೆ.

“ಮಹಿಳಾ ಅರ್ಚಕಿ ಒಳ್ಳೆಯ ಕೆಲಸ ಮಾಡಿದರು. ಅವರು ಹಿಂದೂ ವಿವಾಹಗಳಲ್ಲಿ ಅನುಸರಿಸಿದ ಆಚರಣೆಗಳನ್ನು ಚೆನ್ನಾಗಿ ನಿರ್ವಹಿಸಿದ್ದಲ್ಲದೆ, ವಧು-ವರರಿಗೆ ಇಂಗ್ಲಿಷ್‌ನಲ್ಲಿ ಪ್ರತಿ ಏಕವ್ಯಕ್ತಿ / ಮಂತ್ರದ ಮಹತ್ವವನ್ನು ವಿವರಿಸಿದರು. ಆರಂಭದಲ್ಲಿ ನಾವು ಅವರ ನೇತೃತ್ವದಲ್ಲಿ ವಿವಾಹ ನೆರವೇರಿಸಲು ಹಿಂಜರಿಯುತ್ತಿದ್ದೆವು ಮತ್ತು ಇದು ಕಠಿಣ ನಿರ್ಧಾರವಾಗಿತ್ತು. ಏಕೆಂದರೆ ಇದುವರೆಗೂ ಎಲ್ಲಿಯೂ ಮಹಿಳಾ ಪುರೋಹಿತರಿಂದ ವಿವಾಹವನ್ನು ಆಚರಿಸಲಾಗಿದೆಯೆಂದು ನಾವು ಕೇಳಿಲ್ಲ. ಆದರೆ ಇದು ನಮಗೆಲ್ಲರಿಗೂ ಬಹಳ ಸಂತೋಷದ ಸಂದರ್ಭವಾಗಿದೆ ” ಎಂದು ವಧು ಸುಷ್ಮಾ ಅವರ ತಂದೆ ಸುರೇಶ್ ರೆಡ್ಡಿ ಹೇಳಿದ್ದಾರೆ.

ಮದುವೆಗೆ ಹಾಜರಾದ ಸಂಬಂಧಿಕರು ಮತ್ತು ಸ್ನೇಹಿತರು ಅರ್ಚಕಿ ಮಹೇಶ್ವರಿಯ ಸಾಮರ್ಥ್ಯದಿಂದ ತೃಪ್ತರಾಗಿದ್ದಾರೆ. ಅಲ್ಲದೇ ಅನೇಕರು ಅವರ ಸಂಪರ್ಕ ವಿವರಗಳನ್ನು ತೆಗೆದುಕೊಂಡಿದ್ದಾರೆ ಎಂದು ಸುರೇಶ್‌ ರೆಡ್ಡಿ ತಿಳಿಸಿದ್ದಾರೆ.

“ಮದುವೆಗಳಲ್ಲಿ ಅರ್ಚಕರ ವೃತ್ತಿಯು ಪುರುಷರ ಭದ್ರಕೋಟೆಯಾಗಿದೆ. ಹಾಗಾಗಿ ಆ ದೃಷ್ಟಿಕೋನವನ್ನು ಬದಲಾಯಿಸಲು ಮತ್ತು ಅದನ್ನು ಮಹಿಳೆಯರು ಕೂಡ ನಡೆಸಬಹುದೆಂದು ಜನರಿಗೆ ಅರಿತು ಮೂಡಿಸಲು ನಾನು ಬಯಸಿದ್ದೆ. ಹಾಗಾಗಿ ನನ್ನ ಮದುವೆಯನ್ನು ಮಹಿಳಾ ಅರ್ಚಕರಿಂದಲೇ ಮಾಡಿಸಿದೆ. ಮಹಿಳಾ ಪುರೋಹಿತರು ಅಸ್ತಿತ್ವದಲ್ಲಿದ್ದಾರೆ ಮತ್ತು ವಿವಾಹಗಳನ್ನು ನಡೆಸಲು ಅವರನ್ನು ನೇಮಿಸುವ ಮೂಲಕ ನಾವು ಪ್ರೋತ್ಸಾಹಿಸಬೇಕು” ಎಂದು ವಧು ಸುಷ್ಮಾ ಹೇಳಿದ್ದಾರೆ.

ಸೇಲಂನಲ್ಲಿ ಮಹಿಳಾ ಅರ್ಚಕರು ವಿವಾಹವನ್ನು ನಡೆಸಿದ ಉದಾಹರಣೆಗಳಿವೆ, ಆದರೆ ಇದು ಒಂದು ನಿರ್ದಿಷ್ಟ ಪಂಥದೊಳಗೆ ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ಆಧಾರ: ದಿ ಹಿಂದೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...