Homeಮುಖಪುಟಪುರುಷ ಪಾರಮ್ಯ ಸಮಾಜದಲ್ಲಿ ವಿವಾಹ ನೇರವೇರಿಸಿ ಅಚ್ಚರಿ ಮೂಡಿಸಿದ ಮಹಿಳಾ ಅರ್ಚಕಿ!

ಪುರುಷ ಪಾರಮ್ಯ ಸಮಾಜದಲ್ಲಿ ವಿವಾಹ ನೇರವೇರಿಸಿ ಅಚ್ಚರಿ ಮೂಡಿಸಿದ ಮಹಿಳಾ ಅರ್ಚಕಿ!

ವಧುವಿನ ಒತ್ತಾಸೆಯ ಮೇರೆಗೆ ಮಹಿಳಾ ಅರ್ಚಕಿಯೊಬ್ಬರು ಹಿಂದೂ ಸಂಪ್ರದಾಯದ ಪ್ರಕಾರ ವಿವಾಹ ನಡೆಸಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

- Advertisement -
- Advertisement -

ಮಹಿಳಾ ಅರ್ಚಕಿಯೊಬ್ಬರೂ ಅಚ್ಚುಕಟ್ಟಾಗಿ ವಿವಾಹ ನೆರವೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ವಿಶೇಷ ಘಟನೆಯೊಂದು ಚನ್ನೈನಲ್ಲಿ ನಡೆದಿದೆ.

ತೆಲುಗಿನ ಸುಷ್ಮಾ ಹರಿಣಿ ಮತ್ತು ತಮಿಳಿನ ವಿಗ್ನೇಶ್ ರಾಘವನ್ ಅವರ ವಿವಾಹವನ್ನು ಚನ್ನೈ ನಗರದ ಹೊರವಲಯದಲ್ಲಿರುವ ದಕ್ಷಿಣ ಚಿತ್ರದಲ್ಲಿ ಮಹಿಳಾ ಅರ್ಚಕಿಯೊಬ್ಬರು ಮುಂದೆ ನಿಂತು ನಡೆಸಿಕೊಟ್ಟಿದ್ದಾರೆ.

ವಕೀಲೆಯಾಗಿರುವ ವಧು ಸುಷ್ಮಾ ಹರಿಣಿ ತನ್ನ ಮದುವೆಯಲ್ಲಿ ಮಹಿಳಾ ಪುರೋಹಿತರು ಮತ್ತು ಮಹಿಳಾ ಸಂಗೀತಗಾರರು ಇರಬೇಕೆಂದು ಒತ್ತಾಯಿಸಿದ್ದಾರೆ. ಆಕೆಯ ಪೋಷಕರು ಇದಕ್ಕೆ ಒಪ್ಪಿದ್ದಲ್ಲದೇ ಎಲ್ಲೆಡೆ ಮಹಿಳಾ ಅರ್ಚಕಿಯನ್ನು ಹುಡುಕಲು ಆರಂಭಿಸಿದರು. ಕೊನೆಗೂ ಯಶಸ್ವಿಯಾದ ಅವರು ಮೈಸೂರಿನ ಬ್ರಮರಂಬ ಮಹೇಶ್ವರಿ ಎಂಬ ವೈದಿಕ ವಿದ್ವಾಂಸೆ ಮತ್ತು ವಿವಾಹ ಅರ್ಚಕಿನನ್ನು ಹುಡುಕಿದರು. ಅವರು ವಿವಾಹವನ್ನು ನಡೆಸಲು ಒಪ್ಪಿ, ನೆರವೇರಿಸಿದ್ದಾರೆ.

ಆದರೆ ಕುಟುಂಬವು ಸಾಂಪ್ರದಾಯಿಕ ನಾಗಸ್ವರಂ ಮತ್ತು ಮೃದಂಗಂ ನುಡಿಸಲು ಎಲ್ಲ ಮಹಿಳಾ ಸಂಗೀತ ತಂಡವನ್ನು ಹುಡುಕಲಾಗಲ್ಲಿಲ್ಲ ಎಂದು ಹೇಳಿಕೊಂಡಿದೆ.

“ಮಹಿಳಾ ಅರ್ಚಕಿ ಒಳ್ಳೆಯ ಕೆಲಸ ಮಾಡಿದರು. ಅವರು ಹಿಂದೂ ವಿವಾಹಗಳಲ್ಲಿ ಅನುಸರಿಸಿದ ಆಚರಣೆಗಳನ್ನು ಚೆನ್ನಾಗಿ ನಿರ್ವಹಿಸಿದ್ದಲ್ಲದೆ, ವಧು-ವರರಿಗೆ ಇಂಗ್ಲಿಷ್‌ನಲ್ಲಿ ಪ್ರತಿ ಏಕವ್ಯಕ್ತಿ / ಮಂತ್ರದ ಮಹತ್ವವನ್ನು ವಿವರಿಸಿದರು. ಆರಂಭದಲ್ಲಿ ನಾವು ಅವರ ನೇತೃತ್ವದಲ್ಲಿ ವಿವಾಹ ನೆರವೇರಿಸಲು ಹಿಂಜರಿಯುತ್ತಿದ್ದೆವು ಮತ್ತು ಇದು ಕಠಿಣ ನಿರ್ಧಾರವಾಗಿತ್ತು. ಏಕೆಂದರೆ ಇದುವರೆಗೂ ಎಲ್ಲಿಯೂ ಮಹಿಳಾ ಪುರೋಹಿತರಿಂದ ವಿವಾಹವನ್ನು ಆಚರಿಸಲಾಗಿದೆಯೆಂದು ನಾವು ಕೇಳಿಲ್ಲ. ಆದರೆ ಇದು ನಮಗೆಲ್ಲರಿಗೂ ಬಹಳ ಸಂತೋಷದ ಸಂದರ್ಭವಾಗಿದೆ ” ಎಂದು ವಧು ಸುಷ್ಮಾ ಅವರ ತಂದೆ ಸುರೇಶ್ ರೆಡ್ಡಿ ಹೇಳಿದ್ದಾರೆ.

ಮದುವೆಗೆ ಹಾಜರಾದ ಸಂಬಂಧಿಕರು ಮತ್ತು ಸ್ನೇಹಿತರು ಅರ್ಚಕಿ ಮಹೇಶ್ವರಿಯ ಸಾಮರ್ಥ್ಯದಿಂದ ತೃಪ್ತರಾಗಿದ್ದಾರೆ. ಅಲ್ಲದೇ ಅನೇಕರು ಅವರ ಸಂಪರ್ಕ ವಿವರಗಳನ್ನು ತೆಗೆದುಕೊಂಡಿದ್ದಾರೆ ಎಂದು ಸುರೇಶ್‌ ರೆಡ್ಡಿ ತಿಳಿಸಿದ್ದಾರೆ.

“ಮದುವೆಗಳಲ್ಲಿ ಅರ್ಚಕರ ವೃತ್ತಿಯು ಪುರುಷರ ಭದ್ರಕೋಟೆಯಾಗಿದೆ. ಹಾಗಾಗಿ ಆ ದೃಷ್ಟಿಕೋನವನ್ನು ಬದಲಾಯಿಸಲು ಮತ್ತು ಅದನ್ನು ಮಹಿಳೆಯರು ಕೂಡ ನಡೆಸಬಹುದೆಂದು ಜನರಿಗೆ ಅರಿತು ಮೂಡಿಸಲು ನಾನು ಬಯಸಿದ್ದೆ. ಹಾಗಾಗಿ ನನ್ನ ಮದುವೆಯನ್ನು ಮಹಿಳಾ ಅರ್ಚಕರಿಂದಲೇ ಮಾಡಿಸಿದೆ. ಮಹಿಳಾ ಪುರೋಹಿತರು ಅಸ್ತಿತ್ವದಲ್ಲಿದ್ದಾರೆ ಮತ್ತು ವಿವಾಹಗಳನ್ನು ನಡೆಸಲು ಅವರನ್ನು ನೇಮಿಸುವ ಮೂಲಕ ನಾವು ಪ್ರೋತ್ಸಾಹಿಸಬೇಕು” ಎಂದು ವಧು ಸುಷ್ಮಾ ಹೇಳಿದ್ದಾರೆ.

ಸೇಲಂನಲ್ಲಿ ಮಹಿಳಾ ಅರ್ಚಕರು ವಿವಾಹವನ್ನು ನಡೆಸಿದ ಉದಾಹರಣೆಗಳಿವೆ, ಆದರೆ ಇದು ಒಂದು ನಿರ್ದಿಷ್ಟ ಪಂಥದೊಳಗೆ ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ಆಧಾರ: ದಿ ಹಿಂದೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...