Homeಮುಖಪುಟಪುರುಷ ಪಾರಮ್ಯ ಸಮಾಜದಲ್ಲಿ ವಿವಾಹ ನೇರವೇರಿಸಿ ಅಚ್ಚರಿ ಮೂಡಿಸಿದ ಮಹಿಳಾ ಅರ್ಚಕಿ!

ಪುರುಷ ಪಾರಮ್ಯ ಸಮಾಜದಲ್ಲಿ ವಿವಾಹ ನೇರವೇರಿಸಿ ಅಚ್ಚರಿ ಮೂಡಿಸಿದ ಮಹಿಳಾ ಅರ್ಚಕಿ!

ವಧುವಿನ ಒತ್ತಾಸೆಯ ಮೇರೆಗೆ ಮಹಿಳಾ ಅರ್ಚಕಿಯೊಬ್ಬರು ಹಿಂದೂ ಸಂಪ್ರದಾಯದ ಪ್ರಕಾರ ವಿವಾಹ ನಡೆಸಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

- Advertisement -
- Advertisement -

ಮಹಿಳಾ ಅರ್ಚಕಿಯೊಬ್ಬರೂ ಅಚ್ಚುಕಟ್ಟಾಗಿ ವಿವಾಹ ನೆರವೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ವಿಶೇಷ ಘಟನೆಯೊಂದು ಚನ್ನೈನಲ್ಲಿ ನಡೆದಿದೆ.

ತೆಲುಗಿನ ಸುಷ್ಮಾ ಹರಿಣಿ ಮತ್ತು ತಮಿಳಿನ ವಿಗ್ನೇಶ್ ರಾಘವನ್ ಅವರ ವಿವಾಹವನ್ನು ಚನ್ನೈ ನಗರದ ಹೊರವಲಯದಲ್ಲಿರುವ ದಕ್ಷಿಣ ಚಿತ್ರದಲ್ಲಿ ಮಹಿಳಾ ಅರ್ಚಕಿಯೊಬ್ಬರು ಮುಂದೆ ನಿಂತು ನಡೆಸಿಕೊಟ್ಟಿದ್ದಾರೆ.

ವಕೀಲೆಯಾಗಿರುವ ವಧು ಸುಷ್ಮಾ ಹರಿಣಿ ತನ್ನ ಮದುವೆಯಲ್ಲಿ ಮಹಿಳಾ ಪುರೋಹಿತರು ಮತ್ತು ಮಹಿಳಾ ಸಂಗೀತಗಾರರು ಇರಬೇಕೆಂದು ಒತ್ತಾಯಿಸಿದ್ದಾರೆ. ಆಕೆಯ ಪೋಷಕರು ಇದಕ್ಕೆ ಒಪ್ಪಿದ್ದಲ್ಲದೇ ಎಲ್ಲೆಡೆ ಮಹಿಳಾ ಅರ್ಚಕಿಯನ್ನು ಹುಡುಕಲು ಆರಂಭಿಸಿದರು. ಕೊನೆಗೂ ಯಶಸ್ವಿಯಾದ ಅವರು ಮೈಸೂರಿನ ಬ್ರಮರಂಬ ಮಹೇಶ್ವರಿ ಎಂಬ ವೈದಿಕ ವಿದ್ವಾಂಸೆ ಮತ್ತು ವಿವಾಹ ಅರ್ಚಕಿನನ್ನು ಹುಡುಕಿದರು. ಅವರು ವಿವಾಹವನ್ನು ನಡೆಸಲು ಒಪ್ಪಿ, ನೆರವೇರಿಸಿದ್ದಾರೆ.

ಆದರೆ ಕುಟುಂಬವು ಸಾಂಪ್ರದಾಯಿಕ ನಾಗಸ್ವರಂ ಮತ್ತು ಮೃದಂಗಂ ನುಡಿಸಲು ಎಲ್ಲ ಮಹಿಳಾ ಸಂಗೀತ ತಂಡವನ್ನು ಹುಡುಕಲಾಗಲ್ಲಿಲ್ಲ ಎಂದು ಹೇಳಿಕೊಂಡಿದೆ.

“ಮಹಿಳಾ ಅರ್ಚಕಿ ಒಳ್ಳೆಯ ಕೆಲಸ ಮಾಡಿದರು. ಅವರು ಹಿಂದೂ ವಿವಾಹಗಳಲ್ಲಿ ಅನುಸರಿಸಿದ ಆಚರಣೆಗಳನ್ನು ಚೆನ್ನಾಗಿ ನಿರ್ವಹಿಸಿದ್ದಲ್ಲದೆ, ವಧು-ವರರಿಗೆ ಇಂಗ್ಲಿಷ್‌ನಲ್ಲಿ ಪ್ರತಿ ಏಕವ್ಯಕ್ತಿ / ಮಂತ್ರದ ಮಹತ್ವವನ್ನು ವಿವರಿಸಿದರು. ಆರಂಭದಲ್ಲಿ ನಾವು ಅವರ ನೇತೃತ್ವದಲ್ಲಿ ವಿವಾಹ ನೆರವೇರಿಸಲು ಹಿಂಜರಿಯುತ್ತಿದ್ದೆವು ಮತ್ತು ಇದು ಕಠಿಣ ನಿರ್ಧಾರವಾಗಿತ್ತು. ಏಕೆಂದರೆ ಇದುವರೆಗೂ ಎಲ್ಲಿಯೂ ಮಹಿಳಾ ಪುರೋಹಿತರಿಂದ ವಿವಾಹವನ್ನು ಆಚರಿಸಲಾಗಿದೆಯೆಂದು ನಾವು ಕೇಳಿಲ್ಲ. ಆದರೆ ಇದು ನಮಗೆಲ್ಲರಿಗೂ ಬಹಳ ಸಂತೋಷದ ಸಂದರ್ಭವಾಗಿದೆ ” ಎಂದು ವಧು ಸುಷ್ಮಾ ಅವರ ತಂದೆ ಸುರೇಶ್ ರೆಡ್ಡಿ ಹೇಳಿದ್ದಾರೆ.

ಮದುವೆಗೆ ಹಾಜರಾದ ಸಂಬಂಧಿಕರು ಮತ್ತು ಸ್ನೇಹಿತರು ಅರ್ಚಕಿ ಮಹೇಶ್ವರಿಯ ಸಾಮರ್ಥ್ಯದಿಂದ ತೃಪ್ತರಾಗಿದ್ದಾರೆ. ಅಲ್ಲದೇ ಅನೇಕರು ಅವರ ಸಂಪರ್ಕ ವಿವರಗಳನ್ನು ತೆಗೆದುಕೊಂಡಿದ್ದಾರೆ ಎಂದು ಸುರೇಶ್‌ ರೆಡ್ಡಿ ತಿಳಿಸಿದ್ದಾರೆ.

“ಮದುವೆಗಳಲ್ಲಿ ಅರ್ಚಕರ ವೃತ್ತಿಯು ಪುರುಷರ ಭದ್ರಕೋಟೆಯಾಗಿದೆ. ಹಾಗಾಗಿ ಆ ದೃಷ್ಟಿಕೋನವನ್ನು ಬದಲಾಯಿಸಲು ಮತ್ತು ಅದನ್ನು ಮಹಿಳೆಯರು ಕೂಡ ನಡೆಸಬಹುದೆಂದು ಜನರಿಗೆ ಅರಿತು ಮೂಡಿಸಲು ನಾನು ಬಯಸಿದ್ದೆ. ಹಾಗಾಗಿ ನನ್ನ ಮದುವೆಯನ್ನು ಮಹಿಳಾ ಅರ್ಚಕರಿಂದಲೇ ಮಾಡಿಸಿದೆ. ಮಹಿಳಾ ಪುರೋಹಿತರು ಅಸ್ತಿತ್ವದಲ್ಲಿದ್ದಾರೆ ಮತ್ತು ವಿವಾಹಗಳನ್ನು ನಡೆಸಲು ಅವರನ್ನು ನೇಮಿಸುವ ಮೂಲಕ ನಾವು ಪ್ರೋತ್ಸಾಹಿಸಬೇಕು” ಎಂದು ವಧು ಸುಷ್ಮಾ ಹೇಳಿದ್ದಾರೆ.

ಸೇಲಂನಲ್ಲಿ ಮಹಿಳಾ ಅರ್ಚಕರು ವಿವಾಹವನ್ನು ನಡೆಸಿದ ಉದಾಹರಣೆಗಳಿವೆ, ಆದರೆ ಇದು ಒಂದು ನಿರ್ದಿಷ್ಟ ಪಂಥದೊಳಗೆ ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ಆಧಾರ: ದಿ ಹಿಂದೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...