Homeಮುಖಪುಟಪುರುಷ ಪಾರಮ್ಯ ಸಮಾಜದಲ್ಲಿ ವಿವಾಹ ನೇರವೇರಿಸಿ ಅಚ್ಚರಿ ಮೂಡಿಸಿದ ಮಹಿಳಾ ಅರ್ಚಕಿ!

ಪುರುಷ ಪಾರಮ್ಯ ಸಮಾಜದಲ್ಲಿ ವಿವಾಹ ನೇರವೇರಿಸಿ ಅಚ್ಚರಿ ಮೂಡಿಸಿದ ಮಹಿಳಾ ಅರ್ಚಕಿ!

ವಧುವಿನ ಒತ್ತಾಸೆಯ ಮೇರೆಗೆ ಮಹಿಳಾ ಅರ್ಚಕಿಯೊಬ್ಬರು ಹಿಂದೂ ಸಂಪ್ರದಾಯದ ಪ್ರಕಾರ ವಿವಾಹ ನಡೆಸಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

- Advertisement -
- Advertisement -

ಮಹಿಳಾ ಅರ್ಚಕಿಯೊಬ್ಬರೂ ಅಚ್ಚುಕಟ್ಟಾಗಿ ವಿವಾಹ ನೆರವೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ವಿಶೇಷ ಘಟನೆಯೊಂದು ಚನ್ನೈನಲ್ಲಿ ನಡೆದಿದೆ.

ತೆಲುಗಿನ ಸುಷ್ಮಾ ಹರಿಣಿ ಮತ್ತು ತಮಿಳಿನ ವಿಗ್ನೇಶ್ ರಾಘವನ್ ಅವರ ವಿವಾಹವನ್ನು ಚನ್ನೈ ನಗರದ ಹೊರವಲಯದಲ್ಲಿರುವ ದಕ್ಷಿಣ ಚಿತ್ರದಲ್ಲಿ ಮಹಿಳಾ ಅರ್ಚಕಿಯೊಬ್ಬರು ಮುಂದೆ ನಿಂತು ನಡೆಸಿಕೊಟ್ಟಿದ್ದಾರೆ.

ವಕೀಲೆಯಾಗಿರುವ ವಧು ಸುಷ್ಮಾ ಹರಿಣಿ ತನ್ನ ಮದುವೆಯಲ್ಲಿ ಮಹಿಳಾ ಪುರೋಹಿತರು ಮತ್ತು ಮಹಿಳಾ ಸಂಗೀತಗಾರರು ಇರಬೇಕೆಂದು ಒತ್ತಾಯಿಸಿದ್ದಾರೆ. ಆಕೆಯ ಪೋಷಕರು ಇದಕ್ಕೆ ಒಪ್ಪಿದ್ದಲ್ಲದೇ ಎಲ್ಲೆಡೆ ಮಹಿಳಾ ಅರ್ಚಕಿಯನ್ನು ಹುಡುಕಲು ಆರಂಭಿಸಿದರು. ಕೊನೆಗೂ ಯಶಸ್ವಿಯಾದ ಅವರು ಮೈಸೂರಿನ ಬ್ರಮರಂಬ ಮಹೇಶ್ವರಿ ಎಂಬ ವೈದಿಕ ವಿದ್ವಾಂಸೆ ಮತ್ತು ವಿವಾಹ ಅರ್ಚಕಿನನ್ನು ಹುಡುಕಿದರು. ಅವರು ವಿವಾಹವನ್ನು ನಡೆಸಲು ಒಪ್ಪಿ, ನೆರವೇರಿಸಿದ್ದಾರೆ.

ಆದರೆ ಕುಟುಂಬವು ಸಾಂಪ್ರದಾಯಿಕ ನಾಗಸ್ವರಂ ಮತ್ತು ಮೃದಂಗಂ ನುಡಿಸಲು ಎಲ್ಲ ಮಹಿಳಾ ಸಂಗೀತ ತಂಡವನ್ನು ಹುಡುಕಲಾಗಲ್ಲಿಲ್ಲ ಎಂದು ಹೇಳಿಕೊಂಡಿದೆ.

“ಮಹಿಳಾ ಅರ್ಚಕಿ ಒಳ್ಳೆಯ ಕೆಲಸ ಮಾಡಿದರು. ಅವರು ಹಿಂದೂ ವಿವಾಹಗಳಲ್ಲಿ ಅನುಸರಿಸಿದ ಆಚರಣೆಗಳನ್ನು ಚೆನ್ನಾಗಿ ನಿರ್ವಹಿಸಿದ್ದಲ್ಲದೆ, ವಧು-ವರರಿಗೆ ಇಂಗ್ಲಿಷ್‌ನಲ್ಲಿ ಪ್ರತಿ ಏಕವ್ಯಕ್ತಿ / ಮಂತ್ರದ ಮಹತ್ವವನ್ನು ವಿವರಿಸಿದರು. ಆರಂಭದಲ್ಲಿ ನಾವು ಅವರ ನೇತೃತ್ವದಲ್ಲಿ ವಿವಾಹ ನೆರವೇರಿಸಲು ಹಿಂಜರಿಯುತ್ತಿದ್ದೆವು ಮತ್ತು ಇದು ಕಠಿಣ ನಿರ್ಧಾರವಾಗಿತ್ತು. ಏಕೆಂದರೆ ಇದುವರೆಗೂ ಎಲ್ಲಿಯೂ ಮಹಿಳಾ ಪುರೋಹಿತರಿಂದ ವಿವಾಹವನ್ನು ಆಚರಿಸಲಾಗಿದೆಯೆಂದು ನಾವು ಕೇಳಿಲ್ಲ. ಆದರೆ ಇದು ನಮಗೆಲ್ಲರಿಗೂ ಬಹಳ ಸಂತೋಷದ ಸಂದರ್ಭವಾಗಿದೆ ” ಎಂದು ವಧು ಸುಷ್ಮಾ ಅವರ ತಂದೆ ಸುರೇಶ್ ರೆಡ್ಡಿ ಹೇಳಿದ್ದಾರೆ.

ಮದುವೆಗೆ ಹಾಜರಾದ ಸಂಬಂಧಿಕರು ಮತ್ತು ಸ್ನೇಹಿತರು ಅರ್ಚಕಿ ಮಹೇಶ್ವರಿಯ ಸಾಮರ್ಥ್ಯದಿಂದ ತೃಪ್ತರಾಗಿದ್ದಾರೆ. ಅಲ್ಲದೇ ಅನೇಕರು ಅವರ ಸಂಪರ್ಕ ವಿವರಗಳನ್ನು ತೆಗೆದುಕೊಂಡಿದ್ದಾರೆ ಎಂದು ಸುರೇಶ್‌ ರೆಡ್ಡಿ ತಿಳಿಸಿದ್ದಾರೆ.

“ಮದುವೆಗಳಲ್ಲಿ ಅರ್ಚಕರ ವೃತ್ತಿಯು ಪುರುಷರ ಭದ್ರಕೋಟೆಯಾಗಿದೆ. ಹಾಗಾಗಿ ಆ ದೃಷ್ಟಿಕೋನವನ್ನು ಬದಲಾಯಿಸಲು ಮತ್ತು ಅದನ್ನು ಮಹಿಳೆಯರು ಕೂಡ ನಡೆಸಬಹುದೆಂದು ಜನರಿಗೆ ಅರಿತು ಮೂಡಿಸಲು ನಾನು ಬಯಸಿದ್ದೆ. ಹಾಗಾಗಿ ನನ್ನ ಮದುವೆಯನ್ನು ಮಹಿಳಾ ಅರ್ಚಕರಿಂದಲೇ ಮಾಡಿಸಿದೆ. ಮಹಿಳಾ ಪುರೋಹಿತರು ಅಸ್ತಿತ್ವದಲ್ಲಿದ್ದಾರೆ ಮತ್ತು ವಿವಾಹಗಳನ್ನು ನಡೆಸಲು ಅವರನ್ನು ನೇಮಿಸುವ ಮೂಲಕ ನಾವು ಪ್ರೋತ್ಸಾಹಿಸಬೇಕು” ಎಂದು ವಧು ಸುಷ್ಮಾ ಹೇಳಿದ್ದಾರೆ.

ಸೇಲಂನಲ್ಲಿ ಮಹಿಳಾ ಅರ್ಚಕರು ವಿವಾಹವನ್ನು ನಡೆಸಿದ ಉದಾಹರಣೆಗಳಿವೆ, ಆದರೆ ಇದು ಒಂದು ನಿರ್ದಿಷ್ಟ ಪಂಥದೊಳಗೆ ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ಆಧಾರ: ದಿ ಹಿಂದೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...