Homeಮುಖಪುಟಬೆಂಕಿ ಹಚ್ಚಿ ಯುವತಿಯ ಕೊಲೆ; ವಿಡಿಯೋದಲ್ಲಿ ದುಷ್ಕರ್ಮಿಗಳ ಹೆಸರು ಹೇಳಿದರೂ ಆರೋಪಿಗಳ ಬಂಧನವಿಲ್ಲ!

ಬೆಂಕಿ ಹಚ್ಚಿ ಯುವತಿಯ ಕೊಲೆ; ವಿಡಿಯೋದಲ್ಲಿ ದುಷ್ಕರ್ಮಿಗಳ ಹೆಸರು ಹೇಳಿದರೂ ಆರೋಪಿಗಳ ಬಂಧನವಿಲ್ಲ!

ಬಿಹಾರದಲ್ಲೊಂದು ಅಮಾನವೀಯ ಘಟನೆ, ಅನ್ಯಾಯ

- Advertisement -
- Advertisement -

ನಾಲ್ಕು ತಿಂಗಳಲ್ಲಿ ಮದುವೆಯಾಬೇಕಿದ್ದ 20 ವರ್ಷದ ಯುವತಿಯನ್ನು ದುಷ್ಕರ್ಮಿಗಳು ಕಿರುಕುಳ ನೀಡಿ ಸುಟ್ಟು ಹಾಕಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯ ದೆಸಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಯುವತಿಯು ತನ್ನ ಮೇಲೆ ದೌರ್ಜನ್ಯ ಎಸಗಿದವರು ಸತೀಶ್ ರಾಯ್ ಹಾಗೂ ಚಂದನ್ ಕುಮಾರ್‌ ರಾಯ್ ಎಂದು ಹೇಳಿರುವ ವಿಡಿಯೋ ವೈರಲಾಗಿದ್ದರೂ, ಆರೋಪಿಗಳ ಬಂಧನ ಇದುವರೆಗೂ ನಡೆದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಕಾಶ್ಮೀರಿಗಳ 600 ಹೇಬಿಯಸ್ ಕಾರ್ಪಸ್ ವರ್ಷದಿಂದ ಬಾಕಿ, ಅರ್ನಬ್ ಅರ್ಜಿ ಒಂದೇ ದಿನದಲ್ಲಿ ವಿಚಾರಣೆ; ಅನ್ಯಾಯ!

“ಅವಳಿಗೆ ನಾಲ್ಕು ತಿಂಗಳಲ್ಲಿ ಮದುವೆ ನಡೆಯಬೇಕಿತ್ತು. ಆದರೆ ಸತೀಶ್ ಕುಮಾರ್ ರಾಯ್ ಮತ್ತು ಚಂದನ್ ಕುಮಾರ್ ರಾಯ್ ನನ್ನ ಮಗಳನ್ನು ಸುಟ್ಟುಹಾಕಿದರು. ಅವಳು ಕೊನೆಯುಸಿರೆಳೆಯುವ ಮುನ್ನ ವೀಡಿಯೊದಲ್ಲಿ ದುಷ್ಕರ್ಮಿಳ ಹೆಸರು ಹೇಳಿದ್ದಾಳೆ. ಆದರೆ ನಮ್ಮ ಪರವಾಗಿ ಧ್ವನಿ ಎತ್ತುವವರು ಯಾರೂ ಇಲ್ಲ” ಎಂದು ದುಷ್ಕರ್ಮಿಗಳಿಂದ ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಗುಲ್ನಾಜ್ ಖತೂನ್ ಅವರ ತಾಯಿ ಹೇಳುತ್ತಾರೆ.

“ಅವರು ಮೂರು ತಿಂಗಳಿನಿಂದ ಅವಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಮತ್ತು ಹಿಂಬಾಲಿಸುತ್ತಿದ್ದರು” ಎಂದು ಅವರು ಹೇಳಿದರೆ, ಸಂತ್ರಸ್ತೆಯ ತಂಗಿ ಗುಲ್ಶನ್ ಪರ್ವೇಜ್ ಆರೋಪಿಗಳ ಹೆಸರುಗಳನ್ನು ಹೇಳುತ್ತಾರೆ.

“ನನ್ನ ತಂಗಿ ಹೋಗಿ ಕಸವನ್ನು ಎಸೆಯುತ್ತಿದ್ದಾಗ ಆರೋಪಿಗಳು ಅವಳಿಗೆ ಕಿರುಕುಳ ನೀಡುತ್ತಿದ್ದರು. ಅಕ್ಟೋಬರ್ 30 ರಂದು ಸಂಜೆ 5 ಗಂಟೆಗೆ ಚಂದನ್ ಕುಮಾರ್ ಮತ್ತು ಸತೀಶ್ ಕುಮಾರ್ ಅವಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದರು” ಎಂದು ಪಾಟ್ನಾದಲ್ಲಿ ಕೆಲಸ ಮಾಡುತ್ತಿರುವ ಯುವತಿಯ ಸಹೋದರ ಹೇಳುತ್ತಾರೆ.

ಇದನ್ನೂ ಓದಿ: ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಟೈಲರ್‌ ಆಗಿದ್ದ ತನ್ನ ತಾಯಿಗೆ ಸಂತ್ರಸ್ಥೆ ಗುಲ್ನಾಜ್ ಸಹಾಯ ಮಾಡುತ್ತಿದ್ದರು. ಅವರ ಮೇಲೆ ದೌರ್ಜನ್ಯ ನಡೆಸಿ ಕೊಲೆ ಮಾಡಿದ ಆರೋಪಿಗಳ ಹೆಸರನ್ನು ಸಂತ್ರಸ್ತೆ ಯುವತಿ ವಿಡಿಯೋದಲ್ಲಿ ಹೇಳಿದ್ದು, ಅಲ್ಲದೆ ಅವರ ಕುಟುಂಬ ಕೂಡಾ ಸ್ಪಷ್ಟವಾಗಿ ಆರೋಪಿಗಳನ್ನು ಹೆಸರಿಸಿದರೂ ಆರೋಪಿಗಳ ಬಂಧನ ಇನ್ನೂ ಆಗಿಲ್ಲ ಎಂದು ಸಬ್‌ರಂಗ್‌ ವರದಿ ಮಾಡಿದೆ.

ಅಷ್ಟೇ ಅಲ್ಲದೆ ಜಸ್ಟಿಸ್ ಫಾರ್ ಗುಲ್ನಾಝ್ (#JusticeForGulnaz) ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿದ್ದು, ಗುಲ್ನಾಜ್ ಅವರ ತಾಯಿ ತಮ್ಮ ಕುಟುಂಬದೊಂದಿಗೆ ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸುತ್ತಿರುವ ವೀಡಿಯೊಗಳು ವೈರಲ್ ಆಗಿದೆ. ಇಷ್ಟಾಗಿಯೂ ಬಿಹಾರದ ಮರು ಚುನಾಯಿತ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಥವಾ ಬಿಹಾರ ಪೊಲೀಸರಿಂದ ಇನ್ನೂ ಯಾವುದೇ ಹೇಳಿಕೆಗಳು ಹೊರ ಬಂದಿಲ್ಲ.

ಎಬಿಪಿ ನ್ಯೂಸ್ ವರದಿಯ ಪ್ರಕಾರ “ಸತೀಶ್ ಯಾದವ್ ಹಳ್ಳಿಯ ಕುಖ್ಯಾತ ಗೂಂಡಾ ಆಗಿದ್ದು, ಯುವತಿಗೆ ಕಿರುಕುಳ ನಿಡುತ್ತಿದ್ದ. ಯುವತಿಯು ಈ ಬಗ್ಗೆ ದೂರಿದಾಗ ನೀಡಿದಾಗ ಸತೀಶ್ ಮತ್ತು ಅವನ ಇಬ್ಬರು ಸಹಚರರು ಗುಲ್ನಾಜ್ ಅವರನ್ನು ಅವರ ಮನೆಯ ಬಳಿ ಜೀವಂತವಾಗಿ ಸುಟ್ಟುಹಾಕಿದರು” ಎಂದು ಹೇಳಿದೆ.

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಮೀಸಲಾತಿ ಮಸಲತ್ತು! ನೈಜ ಹಿಂದುಳಿದವರಿಗೆ ಸಾಮಾಜಿಕ ಅನ್ಯಾಯ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...