Homeಮುಖಪುಟಬೆಂಕಿ ಹಚ್ಚಿ ಯುವತಿಯ ಕೊಲೆ; ವಿಡಿಯೋದಲ್ಲಿ ದುಷ್ಕರ್ಮಿಗಳ ಹೆಸರು ಹೇಳಿದರೂ ಆರೋಪಿಗಳ ಬಂಧನವಿಲ್ಲ!

ಬೆಂಕಿ ಹಚ್ಚಿ ಯುವತಿಯ ಕೊಲೆ; ವಿಡಿಯೋದಲ್ಲಿ ದುಷ್ಕರ್ಮಿಗಳ ಹೆಸರು ಹೇಳಿದರೂ ಆರೋಪಿಗಳ ಬಂಧನವಿಲ್ಲ!

ಬಿಹಾರದಲ್ಲೊಂದು ಅಮಾನವೀಯ ಘಟನೆ, ಅನ್ಯಾಯ

- Advertisement -
- Advertisement -

ನಾಲ್ಕು ತಿಂಗಳಲ್ಲಿ ಮದುವೆಯಾಬೇಕಿದ್ದ 20 ವರ್ಷದ ಯುವತಿಯನ್ನು ದುಷ್ಕರ್ಮಿಗಳು ಕಿರುಕುಳ ನೀಡಿ ಸುಟ್ಟು ಹಾಕಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯ ದೆಸಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಯುವತಿಯು ತನ್ನ ಮೇಲೆ ದೌರ್ಜನ್ಯ ಎಸಗಿದವರು ಸತೀಶ್ ರಾಯ್ ಹಾಗೂ ಚಂದನ್ ಕುಮಾರ್‌ ರಾಯ್ ಎಂದು ಹೇಳಿರುವ ವಿಡಿಯೋ ವೈರಲಾಗಿದ್ದರೂ, ಆರೋಪಿಗಳ ಬಂಧನ ಇದುವರೆಗೂ ನಡೆದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಕಾಶ್ಮೀರಿಗಳ 600 ಹೇಬಿಯಸ್ ಕಾರ್ಪಸ್ ವರ್ಷದಿಂದ ಬಾಕಿ, ಅರ್ನಬ್ ಅರ್ಜಿ ಒಂದೇ ದಿನದಲ್ಲಿ ವಿಚಾರಣೆ; ಅನ್ಯಾಯ!

“ಅವಳಿಗೆ ನಾಲ್ಕು ತಿಂಗಳಲ್ಲಿ ಮದುವೆ ನಡೆಯಬೇಕಿತ್ತು. ಆದರೆ ಸತೀಶ್ ಕುಮಾರ್ ರಾಯ್ ಮತ್ತು ಚಂದನ್ ಕುಮಾರ್ ರಾಯ್ ನನ್ನ ಮಗಳನ್ನು ಸುಟ್ಟುಹಾಕಿದರು. ಅವಳು ಕೊನೆಯುಸಿರೆಳೆಯುವ ಮುನ್ನ ವೀಡಿಯೊದಲ್ಲಿ ದುಷ್ಕರ್ಮಿಳ ಹೆಸರು ಹೇಳಿದ್ದಾಳೆ. ಆದರೆ ನಮ್ಮ ಪರವಾಗಿ ಧ್ವನಿ ಎತ್ತುವವರು ಯಾರೂ ಇಲ್ಲ” ಎಂದು ದುಷ್ಕರ್ಮಿಗಳಿಂದ ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಗುಲ್ನಾಜ್ ಖತೂನ್ ಅವರ ತಾಯಿ ಹೇಳುತ್ತಾರೆ.

“ಅವರು ಮೂರು ತಿಂಗಳಿನಿಂದ ಅವಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಮತ್ತು ಹಿಂಬಾಲಿಸುತ್ತಿದ್ದರು” ಎಂದು ಅವರು ಹೇಳಿದರೆ, ಸಂತ್ರಸ್ತೆಯ ತಂಗಿ ಗುಲ್ಶನ್ ಪರ್ವೇಜ್ ಆರೋಪಿಗಳ ಹೆಸರುಗಳನ್ನು ಹೇಳುತ್ತಾರೆ.

“ನನ್ನ ತಂಗಿ ಹೋಗಿ ಕಸವನ್ನು ಎಸೆಯುತ್ತಿದ್ದಾಗ ಆರೋಪಿಗಳು ಅವಳಿಗೆ ಕಿರುಕುಳ ನೀಡುತ್ತಿದ್ದರು. ಅಕ್ಟೋಬರ್ 30 ರಂದು ಸಂಜೆ 5 ಗಂಟೆಗೆ ಚಂದನ್ ಕುಮಾರ್ ಮತ್ತು ಸತೀಶ್ ಕುಮಾರ್ ಅವಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದರು” ಎಂದು ಪಾಟ್ನಾದಲ್ಲಿ ಕೆಲಸ ಮಾಡುತ್ತಿರುವ ಯುವತಿಯ ಸಹೋದರ ಹೇಳುತ್ತಾರೆ.

ಇದನ್ನೂ ಓದಿ: ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಟೈಲರ್‌ ಆಗಿದ್ದ ತನ್ನ ತಾಯಿಗೆ ಸಂತ್ರಸ್ಥೆ ಗುಲ್ನಾಜ್ ಸಹಾಯ ಮಾಡುತ್ತಿದ್ದರು. ಅವರ ಮೇಲೆ ದೌರ್ಜನ್ಯ ನಡೆಸಿ ಕೊಲೆ ಮಾಡಿದ ಆರೋಪಿಗಳ ಹೆಸರನ್ನು ಸಂತ್ರಸ್ತೆ ಯುವತಿ ವಿಡಿಯೋದಲ್ಲಿ ಹೇಳಿದ್ದು, ಅಲ್ಲದೆ ಅವರ ಕುಟುಂಬ ಕೂಡಾ ಸ್ಪಷ್ಟವಾಗಿ ಆರೋಪಿಗಳನ್ನು ಹೆಸರಿಸಿದರೂ ಆರೋಪಿಗಳ ಬಂಧನ ಇನ್ನೂ ಆಗಿಲ್ಲ ಎಂದು ಸಬ್‌ರಂಗ್‌ ವರದಿ ಮಾಡಿದೆ.

ಅಷ್ಟೇ ಅಲ್ಲದೆ ಜಸ್ಟಿಸ್ ಫಾರ್ ಗುಲ್ನಾಝ್ (#JusticeForGulnaz) ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿದ್ದು, ಗುಲ್ನಾಜ್ ಅವರ ತಾಯಿ ತಮ್ಮ ಕುಟುಂಬದೊಂದಿಗೆ ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸುತ್ತಿರುವ ವೀಡಿಯೊಗಳು ವೈರಲ್ ಆಗಿದೆ. ಇಷ್ಟಾಗಿಯೂ ಬಿಹಾರದ ಮರು ಚುನಾಯಿತ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಥವಾ ಬಿಹಾರ ಪೊಲೀಸರಿಂದ ಇನ್ನೂ ಯಾವುದೇ ಹೇಳಿಕೆಗಳು ಹೊರ ಬಂದಿಲ್ಲ.

ಎಬಿಪಿ ನ್ಯೂಸ್ ವರದಿಯ ಪ್ರಕಾರ “ಸತೀಶ್ ಯಾದವ್ ಹಳ್ಳಿಯ ಕುಖ್ಯಾತ ಗೂಂಡಾ ಆಗಿದ್ದು, ಯುವತಿಗೆ ಕಿರುಕುಳ ನಿಡುತ್ತಿದ್ದ. ಯುವತಿಯು ಈ ಬಗ್ಗೆ ದೂರಿದಾಗ ನೀಡಿದಾಗ ಸತೀಶ್ ಮತ್ತು ಅವನ ಇಬ್ಬರು ಸಹಚರರು ಗುಲ್ನಾಜ್ ಅವರನ್ನು ಅವರ ಮನೆಯ ಬಳಿ ಜೀವಂತವಾಗಿ ಸುಟ್ಟುಹಾಕಿದರು” ಎಂದು ಹೇಳಿದೆ.

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಮೀಸಲಾತಿ ಮಸಲತ್ತು! ನೈಜ ಹಿಂದುಳಿದವರಿಗೆ ಸಾಮಾಜಿಕ ಅನ್ಯಾಯ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...