Homeಕರ್ನಾಟಕಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ದಿಢೀರ್ ಸಾವು: ತನಿಖೆಗೆ ಆಗ್ರಹಿಸಿದ ಜನವಾದಿ ಮಹಿಳಾ...

ಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ದಿಢೀರ್ ಸಾವು: ತನಿಖೆಗೆ ಆಗ್ರಹಿಸಿದ ಜನವಾದಿ ಮಹಿಳಾ ಸಂಘಟನೆ

24 ಗಂಟೆಯ ಮೊದಲು ಆರೋಗ್ಯವಾಗಿದ್ಧ ಮಹಿಳೆ ದಿಢೀರ್ ಸಾವನ್ನಪ್ಪಿದ್ದು ಹೇಗೆ? ಎಂದು ಸಂಘಟನೆ ಅನುಮಾನ ವ್ಯಕ್ತಪಡಿಸಿದೆ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ದಿಢೀರ್ ಸಾವನ್ನಪ್ಪಿದ್ದು, ಈ ಕುರಿತು ಅನುಮಾನ ವ್ಯಕ್ತಪಡಿಸಿರುವ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ, ತನಿಖೆಗೆ ಒತ್ತಾಯಿಸಿ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ತನ್ನ ಅಪ್ರಾಪ್ತ ಪುತ್ರಿಯ ಮೇಲೆ ಮಾಜಿ ಸಿಎಂ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ 2024 ಮಾರ್ಚ್ 14ರಂದು ಯಡಿಯೂರಪ್ಪ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆದರೆ, ಯಡಿಯೂರಪ್ಪ ಅವರ ಬಂಧನ ಆಗಿರಲಿಲ್ಲ. ದೂರು ವಾಪಸ್ ಪಡೆಯುವಂತೆ ಮಹಿಳೆಗೆ ಒತ್ತಡಗಳಿತ್ತು ಎಂದು ಜನವಾದಿ ಮಹಿಳಾ ಸಂಘಟನೆ ತಿಳಿಸಿದೆ.

ಇತ್ತೀಚೆಗೆ ಮೃತ ಮಹಿಳೆ ಜನವಾದಿ ಮಹಿಳಾ ಸಂಘಟನೆಯನ್ನು ಸಂಪರ್ಕಿಸಿ ಕಾನೂನು ಹೋರಾಟಕ್ಕೆ ಬೆಂಬಲ ನೀಡುವಂತೆ ಕೇಳಿಕೊಂಡಿದ್ದರು. ಸಂಘಟನೆ ಹಿರಿಯ ವಕೀಲ ಎಸ್‌. ಬಾಲನ್ ಅವರನ್ನು ಸಂಪರ್ಕಿಸಿ ಕಾನೂನು ಸೇವೆ ನೀಡುವಂತೆ ಮನವಿ ಮಾಡಿತ್ತು. ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಕೇಸ್ ಮಾಹಿತಿಗಳನ್ನು ಪಡೆದುಕೊಂಡ ಬಾಲನ್ ಅವರು, ಉಚಿತವಾಗಿ ಕಾನೂನು ಸೇವೆ ನೀಡಲು ಒಪ್ಪಿದ್ದರು ಎಂದು ಸಂಘಟನೆ ವಿವರಿಸಿದೆ.

ಮೇ 25ರಂದು(ಶನಿವಾರ) ಮಹಿಳೆಯೊಂದಿಗೆ ಮಾತನಾಡಿದ್ದ ವಕೀಲ ಬಾಲನ್ ಅವರು, ದಾಖಲೆಗಳೊಂದಿಗೆ ಮೇ 27ರಂದು (ಸೋಮವಾರ) ಕಚೇರಿಗೆ ಬರುವಂತೆ ಸೂಚಿಸಿದ್ದರು. ಈ ಮಧ್ಯೆ ಮೇ 26ರಂದು (ಭಾನುವಾರ) ಸಂಜೆ ಹುಳಿಮಾವು ಆಸ್ಪತ್ರೆಯಲ್ಲಿ ಮಹಿಳೆ ದಿಢೀರ್ ಸಾವನ್ನಪ್ಪಿದ್ದಾರೆ. ಮಾಧ್ಯಮಗಳಲ್ಲಿ ಮಹಿಳೆಯು ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ಈ ಸಾವು ಅನುಮಾನ ಹುಟ್ಟಿಸುವಂತಿದೆ ಎಂದು ಸಂಘಟನೆ ಹೇಳಿದೆ.

24 ಗಂಟೆಯ ಮೊದಲು ಕಾನೂನು ಸಮರ ನಡೆಸುವಷ್ಟು ಸಮರ್ಥಳಾಗಿದ್ದ ಮಹಿಳೆ ಏಕಾಏಕಿ ಶ್ವಾಸಕೋಶದ ಕ್ಯಾನ್ಸರ್‌ನಿಂದ ನಿಧನರಾಗಲು ಹೇಗೆ ಸಾಧ್ಯ? ನಮಗೆ ತಿಳಿದಂತೆ ಮಹಿಳೆಗೆ ಪುತ್ರಿ ಹೊರತು ಇನ್ಯಾರು ಸಂಬಂಧಿಕರಿಲ್ಲ. ಹೀಗಿರುವಾಗ, ಆಸ್ಪತ್ರೆಯ ಹಿಂಬಾಗಿಲಿನಿಂದ ಮಹಿಳೆಯ ಶವ ವಿಲೇವಾರಿ ಮಾಡಿದ ಸಂಬಂಧಿಕರು ಯಾರು? ಶವ ಸಾಗಿಸಲು ಹಿಂಬದಿಯ ಬಾಗಿಲು ಬಳಸಿದ್ದು ಏಕೆ? ಇದುವರೆಗೆ ಮಹಿಳೆಯ ಬಗ್ಗೆ ಕಾಳಜಿವಹಿಸದ ಸಂಬಂಧಿಕರು ದಿಢೀರನೆ ಆಗಮಿಸಿದ್ದು ಹೇಗೆ? ಶ್ವಾಸಕೋಶದ ಕ್ಯಾನ್ಸರ್ ಹಠಾತ್ ಸಾವು ತರಿಸುವ ಖಾಯಿಲೆಯಲ್ಲ. ಹಾಗಾಗಿ, ಮಹಿಳೆ ಏಕಾಏಕಿ ಸಾವನ್ನಪ್ಪಿದರೂ ಮರಣೋತ್ತರ ಪರೀಕ್ಷೆ ಏಕೆ ನಡೆಸಿಲ್ಲ? ಎಂದು ಜನವಾದಿ ಸಂಘಟನೆ ಪ್ರಶ್ನಿಸಿದೆ. ಈ ಕುರಿತು ತನಿಖೆ ನಡೆಸುವಂತೆ ಹುಳಿಮಾವು ಪೊಲೀಸರನ್ನು ಆಗ್ರಹಿಸಿದೆ.

ಮೃತ ಮಹಿಳೆಯ ಸಂಬಂಧಿ ಶಿವಮೊಗ್ಗದ ಶಿಕಾರಿಪುರ ಮೂಲದ ನಾಗರಾಜ್ ಎಂಬವರು ಕೂಡ ಜನವಾದಿ ಸಂಘಟನೆ ಎತ್ತಿರುವ ಪ್ರಶ್ನೆಗಳನ್ನೇ ಎತ್ತಿ, ಮಹಿಳೆಯ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ತನಿಖೆ ನಡೆಸುವಂತೆ ಹುಳಿಮಾವು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...