Homeಅಂತರಾಷ್ಟ್ರೀಯ2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

2024ರ ಆರ್ಟೆಮಿಸ್ IIIರಲ್ಲಿ ಮೊದಲ ಬಾರಿಗೆ ಮಹಿಳೆ ಮತ್ತು ಒಬ್ಬ ಪುರುಷ ಗಗನಯಾತ್ರಿನನ್ನು ಚಂದ್ರನ ಮೇಲೆ ಇಳಿಸುವ ಗುರಿ ಹೊಂದಲಾಗಿದೆ.

- Advertisement -
- Advertisement -

2024 ರಲ್ಲಿ ಮೊದಲ ಬಾರಿಗೆ ಮಹಿಳೆಯನ್ನು ಚಂದ್ರನಿಗೆ ಕಳುಹಿಸಲು ಯೋಜಿಸಿದೆ ಎಂದು ನಾಸಾ ಈ ವಾರ ಬಹಿರಂಗಪಡಿಸಿದೆ. ಬಾಹ್ಯಾಕಾಶ ಸಂಸ್ಥೆಯ ಆರ್ಟಿಮಿಸ್ ಪ್ಲಾನ್‌ನಲ್ಲಿ ಒಬ್ಬ ಮಹಿಳೆ ಮತ್ತು ಪುರುಷನನ್ನು ಚಂದ್ರಯಾನಕ್ಕೆ ಕಳುಹಿಸುವ ಗುರಿಯನ್ನು ನಾಸಾ ಹೊಂದಿದೆ. ಇದು 1972ರ ನಂತರದ ಮೊದಲ ಚಂದ್ರಯಾನದ ಯೋಜನೆಯಾಗಿದೆ.

2,50,000 ಮೈಲುಗಳ ದೂರದಲ್ಲಿರುವ ಚಂದ್ರನಲ್ಲಿಗೆ, ಮತ್ತು 140 ಮಿಲಿಯನ್ ಮೈಲುಗಳಷ್ಟು ದೂರವಿರುವ ಮಂಗಳ ಗ್ರಹಕ್ಕೆ ಮಾನವ ಪರಿಶೋಧಕರನ್ನು ಕಳುಹಿಸಲಾಗುತ್ತದೆ. ಇದಕ್ಕೆ ದಿಟ್ಟ ದೃಷ್ಠಿ, ಪರಿಣಾಮಕಾರಿ ಪ್ರೋಗ್ರಾಂ ನಿರ್ವಹಣೆ, ಆಧುನಿಕ ತಂತ್ರಜ್ಞಾನಗಳ ಮಿಷನ್‌ ಕಾರ್ಯಾಚರಣೆಗಳಿಗೆ ಧನಸಹಾಯ, ಮತ್ತು ರಾಷ್ಟ್ರದ ಎಲ್ಲಾ ಮೂಲೆಗಳಿಂದ ನಮಗೆ ಜನ ಬೆಂಬಲ ಬೇಕು ಎಂದು ನಾಸಾ ಹೇಳಿದೆ.

ಇದನ್ನೂ ಓದಿ: ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ಆರ್ಟೆಮಿಸ್ ಯೋಜನೆಯು ಎಲ್ಲಾ ಒತ್ತಡಗಳನ್ನು‌ ತೆಗೆದುಕೊಂಡು 2024 ರ ಆರಂಭದ ವೇಳೆಗೆ ಚಂದ್ರನ ಮೇಲೆ ಮಾನವನ ಇಳಿಯುವಿಕೆಯ ಗುರಿ ಸಾಧಿಸುವತ್ತ ಗಮನ ಹರಿಸುತ್ತಿದ್ದು,  2020ರ ಅಂತ್ಯದವರೆಗೂ ನವೀನ ತಂತ್ರಜ್ಞಾನಗಳನ್ನು ಬಳಸಿಕೊಂಡು ಹಿಂದೆಂದಿಗಿಂತಲೂ ಹೆಚ್ಚಿಗೆ ಚಂದ್ರನ ಮೇಲ್ಮೈಯನ್ನು ಅನ್ವೇಷಿಸುತ್ತದೆ ಎಂದು ನಾಸಾ ಹೇಳಿದೆ.

ನಾಸಾದ ಮೊದಲ ಆಧುನಿಕ ಚಂದ್ರನ ಮಿಷನ್ 2021 ರಲ್ಲಿ ಆರ್ಟೆಮಿಸ್ 1ರಲ್ಲಿ ಗಗನಯಾತ್ರಿಗಳು ರಹಿತವಾಗಿ ನಡೆಯಲಿದೆ. 2023ರಲ್ಲಿ ನಡೆಯುವ ಆರ್ಟೆಮಿಸ್ II ರಲ್ಲಿ ಸಿಬ್ಬಂದಿಗಳು ಚಂದ್ರನಲ್ಲಿ ಹೋಗುವ ಗುರಿ ಹೊಂದಿದ್ದಾರೆ. ಕೊನೆಯ ಯೋಜನೆ 2024ರ ಆರ್ಟೆಮಿಸ್ IIIರಲ್ಲಿ ಮೊದಲ ಮಹಿಳೆ ಮತ್ತು ಪುರುಷನನ್ನು ಚಂದ್ರನ ಮೇಲೆ ಇಳಿಸುವ ಗುರಿ ಹೊಂದಲಾಗಿದೆ.

ಈ ವಾರದಲ್ಲಿ ನೌಕಾಪಡೆಯು ಯುದ್ಧನೌಕೆಗೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ನಿಯೋಜಿಸಿತ್ತು. ವಾಯುಸೇನೆ ಕೂಡ ಶೀಘ್ರದಲ್ಲೇ ರಫೇಲ್ ಯುದ್ಧವಿಮಾನಕ್ಕೆ ಮಹಿಳಾ ಫೈಟರ್ ಪೈಲಟ್ ಅನ್ನು ನೇಮಿಸಲು ತರಬೇತಿ ನೀಡುತ್ತಿರುವುದನ್ನು ತಿಳಿಸಿತ್ತು. ಈಗ ನಾಸಾ ಕೂಡ ಮಹಿಳಾ ಗಗನಯಾತ್ರಿಯನ್ನು ಚಂದ್ರಯಾನಕ್ಕೆ ಕಳುಹಿಸುವುದಾಗಿ ಘೋಷಣೆ ಮಾಡಿದೆ.


ಇದನ್ನೂ ಓದಿ: ಶೀಘ್ರವೇ ಯುದ್ಧವಿಮಾನ ’ರಫೇಲ್’ ಹಾರಿಸಲಿರುವ ಮಹಿಳಾ ಪೈಲಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...