Homeಅಂತರಾಷ್ಟ್ರೀಯ2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

2024ರ ಆರ್ಟೆಮಿಸ್ IIIರಲ್ಲಿ ಮೊದಲ ಬಾರಿಗೆ ಮಹಿಳೆ ಮತ್ತು ಒಬ್ಬ ಪುರುಷ ಗಗನಯಾತ್ರಿನನ್ನು ಚಂದ್ರನ ಮೇಲೆ ಇಳಿಸುವ ಗುರಿ ಹೊಂದಲಾಗಿದೆ.

- Advertisement -
- Advertisement -

2024 ರಲ್ಲಿ ಮೊದಲ ಬಾರಿಗೆ ಮಹಿಳೆಯನ್ನು ಚಂದ್ರನಿಗೆ ಕಳುಹಿಸಲು ಯೋಜಿಸಿದೆ ಎಂದು ನಾಸಾ ಈ ವಾರ ಬಹಿರಂಗಪಡಿಸಿದೆ. ಬಾಹ್ಯಾಕಾಶ ಸಂಸ್ಥೆಯ ಆರ್ಟಿಮಿಸ್ ಪ್ಲಾನ್‌ನಲ್ಲಿ ಒಬ್ಬ ಮಹಿಳೆ ಮತ್ತು ಪುರುಷನನ್ನು ಚಂದ್ರಯಾನಕ್ಕೆ ಕಳುಹಿಸುವ ಗುರಿಯನ್ನು ನಾಸಾ ಹೊಂದಿದೆ. ಇದು 1972ರ ನಂತರದ ಮೊದಲ ಚಂದ್ರಯಾನದ ಯೋಜನೆಯಾಗಿದೆ.

2,50,000 ಮೈಲುಗಳ ದೂರದಲ್ಲಿರುವ ಚಂದ್ರನಲ್ಲಿಗೆ, ಮತ್ತು 140 ಮಿಲಿಯನ್ ಮೈಲುಗಳಷ್ಟು ದೂರವಿರುವ ಮಂಗಳ ಗ್ರಹಕ್ಕೆ ಮಾನವ ಪರಿಶೋಧಕರನ್ನು ಕಳುಹಿಸಲಾಗುತ್ತದೆ. ಇದಕ್ಕೆ ದಿಟ್ಟ ದೃಷ್ಠಿ, ಪರಿಣಾಮಕಾರಿ ಪ್ರೋಗ್ರಾಂ ನಿರ್ವಹಣೆ, ಆಧುನಿಕ ತಂತ್ರಜ್ಞಾನಗಳ ಮಿಷನ್‌ ಕಾರ್ಯಾಚರಣೆಗಳಿಗೆ ಧನಸಹಾಯ, ಮತ್ತು ರಾಷ್ಟ್ರದ ಎಲ್ಲಾ ಮೂಲೆಗಳಿಂದ ನಮಗೆ ಜನ ಬೆಂಬಲ ಬೇಕು ಎಂದು ನಾಸಾ ಹೇಳಿದೆ.

ಇದನ್ನೂ ಓದಿ: ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ಆರ್ಟೆಮಿಸ್ ಯೋಜನೆಯು ಎಲ್ಲಾ ಒತ್ತಡಗಳನ್ನು‌ ತೆಗೆದುಕೊಂಡು 2024 ರ ಆರಂಭದ ವೇಳೆಗೆ ಚಂದ್ರನ ಮೇಲೆ ಮಾನವನ ಇಳಿಯುವಿಕೆಯ ಗುರಿ ಸಾಧಿಸುವತ್ತ ಗಮನ ಹರಿಸುತ್ತಿದ್ದು,  2020ರ ಅಂತ್ಯದವರೆಗೂ ನವೀನ ತಂತ್ರಜ್ಞಾನಗಳನ್ನು ಬಳಸಿಕೊಂಡು ಹಿಂದೆಂದಿಗಿಂತಲೂ ಹೆಚ್ಚಿಗೆ ಚಂದ್ರನ ಮೇಲ್ಮೈಯನ್ನು ಅನ್ವೇಷಿಸುತ್ತದೆ ಎಂದು ನಾಸಾ ಹೇಳಿದೆ.

ನಾಸಾದ ಮೊದಲ ಆಧುನಿಕ ಚಂದ್ರನ ಮಿಷನ್ 2021 ರಲ್ಲಿ ಆರ್ಟೆಮಿಸ್ 1ರಲ್ಲಿ ಗಗನಯಾತ್ರಿಗಳು ರಹಿತವಾಗಿ ನಡೆಯಲಿದೆ. 2023ರಲ್ಲಿ ನಡೆಯುವ ಆರ್ಟೆಮಿಸ್ II ರಲ್ಲಿ ಸಿಬ್ಬಂದಿಗಳು ಚಂದ್ರನಲ್ಲಿ ಹೋಗುವ ಗುರಿ ಹೊಂದಿದ್ದಾರೆ. ಕೊನೆಯ ಯೋಜನೆ 2024ರ ಆರ್ಟೆಮಿಸ್ IIIರಲ್ಲಿ ಮೊದಲ ಮಹಿಳೆ ಮತ್ತು ಪುರುಷನನ್ನು ಚಂದ್ರನ ಮೇಲೆ ಇಳಿಸುವ ಗುರಿ ಹೊಂದಲಾಗಿದೆ.

ಈ ವಾರದಲ್ಲಿ ನೌಕಾಪಡೆಯು ಯುದ್ಧನೌಕೆಗೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ನಿಯೋಜಿಸಿತ್ತು. ವಾಯುಸೇನೆ ಕೂಡ ಶೀಘ್ರದಲ್ಲೇ ರಫೇಲ್ ಯುದ್ಧವಿಮಾನಕ್ಕೆ ಮಹಿಳಾ ಫೈಟರ್ ಪೈಲಟ್ ಅನ್ನು ನೇಮಿಸಲು ತರಬೇತಿ ನೀಡುತ್ತಿರುವುದನ್ನು ತಿಳಿಸಿತ್ತು. ಈಗ ನಾಸಾ ಕೂಡ ಮಹಿಳಾ ಗಗನಯಾತ್ರಿಯನ್ನು ಚಂದ್ರಯಾನಕ್ಕೆ ಕಳುಹಿಸುವುದಾಗಿ ಘೋಷಣೆ ಮಾಡಿದೆ.


ಇದನ್ನೂ ಓದಿ: ಶೀಘ್ರವೇ ಯುದ್ಧವಿಮಾನ ’ರಫೇಲ್’ ಹಾರಿಸಲಿರುವ ಮಹಿಳಾ ಪೈಲಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...