Homeಮುಖಪುಟದೇವಾಲಯದ ಹಿಂದೆ ಮಹಿಳೆಯ ಮೃತದೇಹ ಪತ್ತೆ; ಅರ್ಚಕನೇ ಕೊಲೆಗಾರ!

ದೇವಾಲಯದ ಹಿಂದೆ ಮಹಿಳೆಯ ಮೃತದೇಹ ಪತ್ತೆ; ಅರ್ಚಕನೇ ಕೊಲೆಗಾರ!

- Advertisement -
- Advertisement -

ಹೈದರಾಬಾದ್‌: ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ದೇವಾಲಯದ ಹಿಂದಿನ ಪೊದೆಯಲ್ಲಿ ಪತ್ತೆಯಾದ ಬಳಿಕ, ಪೊಲೀಸರು ಆರೋಪಿಯನ್ನು ಹಿಡಿದಿದ್ದಾರೆ. ಮಹಿಳೆ ಆಗಾಗ್ಗೆ ಭೇಟಿ ನೀಡುತ್ತಿದ್ದ ದೇವಾಲಯವೊಂದರ ಅರ್ಚಕನೇ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

57 ವರ್ಷದ ಉಮಾದೇವಿ ಕೊಲೆಯಾದವರು. ಏಪ್ರಿಲ್ 18ರಂದು ಸಂಜೆ 6.30ಕ್ಕೆ ಎಂದಿನಂತೆ ಮಲ್ಕಾಜ್‌ಗಿರಿಯ ವಿಷ್ಣುಪುರ ಕಾಲೋನಿಯಲ್ಲಿರುವ ಸಿದ್ದಿ ವಿನಾಯಕ ದೇವಸ್ಥಾನಕ್ಕೆ ಹೋಗಿದ್ದರು. ಆದರೆ ವಾಪಸ್‌ ಮನೆಗೆ ಬಂದಿರಲಿಲ್ಲ. ನಂತರ ಉಮಾದೇವಿಯವರ ಕುಟುಂಬವು ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿತ್ತು. ನಾಪತ್ತೆಯಾಗಿರುವ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿಯೂ ಪೋಸ್ಟ್‌ ಮಾಡಲಾಗಿತ್ತು. ತದನಂತರ ದೇವಸ್ಥಾನದ ಹಿಂಭಾಗದಲ್ಲಿನ ಪೊದೆಯಲ್ಲಿ ಶವ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿಯನ್ನು 42 ವರ್ಷದ ಅನುಮುಲ ಮುರಳಿ ಕೃಷ್ಣ ಎಂದು ಗುರುತಿಸಲಾಗಿದ್ದು, ಚಿನ್ನಾಭರಣಗಳನ್ನು ಕದ್ದು ಮಾರಾಟ ಮಾಡುವ ಉದ್ದೇಶದಿಂದ ಮಹಿಳೆಯನ್ನು ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಚರಹೆಯಲ್ಲಿ “ಕಡು ಹಸಿರು ಸೀರೆ, ಕೈಗೆ ಮೂರು ಚಿನ್ನದ ಬಳೆಗಳು ಮತ್ತು ಸಣ್ಣ ಕಿವಿಯೋಲೆಗಳನ್ನು ಮಹಿಳೆ ಧರಿಸಿದ್ದಾರೆ” ತಿಳಿಸಲಾಗಿತ್ತು.

ಅರ್ಚಕನಿಂದ ಚಿನ್ನ ಖರೀದಿಸಿದ ಜೋಶಿ ನಂದ ಕಿಶೋರ್ ಎಂಬ ಆಭರಣ ವ್ಯಾಪಾರಿಯನ್ನೂ ಗುರುತಿಸಿ ಬಂಧಿಸಲಾಗಿದೆ. ಮುರಳಿ ಕೃಷ್ಣನಿಂದ ಪಡೆದ ಎರಡು ಚಿನ್ನದ ಬಳೆಗಳು, 1 ಲಕ್ಷ ರೂಪಾಯಿ ನಗದು, ಉಳಿದ ಬಳೆಗಳಿಂದ ತಯಾರಿಸಿದ 35 ಚಿನ್ನಾಭರಣಗಳನ್ನು ವ್ಯಾಪಾರಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ನಿಯಮಿತವಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು ಹಾಗೂ ಚಿನ್ನದ ಆಭರಣಗಳನ್ನು ಧರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅರ್ಚಕನಿಗೆ ಹಣಕಾಸಿನ ಸಮಸ್ಯೆ ಇದ್ದ ಕಾರಣ ಈ ಆಭರಣಗಳನ್ನು ಕದಿಯಲು ಯೋಜಿಸಿದ. ಮುರಳಿಕೃಷ್ಣ ಮಹಿಳೆಯ ತಲೆಗೆ ಕಬ್ಬಿಣದ ರಾಡ್‌ನಿಂದ ಪದೇ ಪದೇ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ಇದಲ್ಲದೆ ಮಹಿಳೆ ಸಾವನ್ನಪ್ಪಿದ್ದ ಬಳಿಕ ಆಕೆಯ ದೇಹವನ್ನು ಪ್ಲಾಸ್ಟಿಕ್ ಡ್ರಮ್‌ನಲ್ಲಿ ತುರುಕಿ, ಅದನ್ನು ಮುಚ್ಚಳದಿಂದ ಮುಚ್ಚಿದನು. ದೇವಾಲಯದಲ್ಲಿ ತಂದು ಇರಿಸಿದ್ದ ನೀರಿನಿಂದ ನೆಲವನ್ನು ಸ್ವಚ್ಛಗೊಳಿಸಿದ್ದಾನೆ. ನಂತರ ಮುರಳಿ, ಮಹಿಳೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿ ಮಾರಾಟ ಮಾಡಿದ್ದಾನೆ. ಆತ ಟ್ರಾಲಿಯಲ್ಲಿ ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯುವ ಮೂಲಕ ಶವವನ್ನು ವಿಲೇವಾರಿ ಮಾಡಲು ಪ್ರಯತ್ನಿಸಿದ್ದಾನೆ. ಆದರೆ ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಮಹಿಳೆಗಾಗಿ ಹುಡುಕಾಟ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಒಂದೇ ಕುಟುಂಬದ ಐವರ ಕೊಲೆ

“ಎರಡು ದಿನಗಳ ನಂತರ ದೇಹವು ಕೆಟ್ಟ ವಾಸನೆ ಬರಲಾರಂಭಿಸಿತು. ಆರೋಪಿಯು ಡ್ರಮ್ ಅನ್ನು ಮತ್ತೆ ದೇವಸ್ಥಾನದತ್ತ ತಂದು, ಹಿಂದಿನ ಪೊದೆಗಳಲ್ಲಿ ಬಿಸಾಡಿದನು” ಎಂದು ತನಿಖಾ ಅಧಿಕಾರಿಗಳು ತಿಳಿಸಿದ್ದಾರೆ. ಖಾಲಿ ಇದ್ದ ಡ್ರಮ್ ಅನ್ನು ಮತ್ತೆ ದೇವಸ್ಥಾನದೊಳಗೆ ತಂದು ಶುಚಿಗೊಳಿಸಿ ಮೊದಲಿನ ಜಾಗದಲ್ಲಿ ಇರಿಸಿದ್ದನು ಎನ್ನಲಾಗಿದೆ. ದುರ್ವಾಸನೆ ಬರುತ್ತಿದ್ದರಿಂದ ಮತ್ತೆ ದೇವಸ್ಥಾನದ ಒಳಭಾಗವನ್ನು ಸ್ವಚ್ಛಗೊಳಿಸಿ ಅಗರಬತ್ತಿ ಹಚ್ಚಿದ್ದಾನೆ ಎಂದು ಪೊಲೀಸ್ ಪತ್ರಿಕಾ ಹೇಳಿಕೆ ತಿಳಿಸಿದೆ.

ಎರಡು ಕಬ್ಬಿಣದ ಸರಳುಗಳು, ಒಂದು ಪ್ಲಾಸ್ಟಿಕ್ ಡ್ರಮ್ ಮತ್ತು ದೇವಾಲಯದ ನೆಲಕ್ಕೆ ಅಂಟಿದ ರಕ್ತದ ಕಲೆಗಳ ಗುರುತುಗಳನ್ನು ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ ಸಾಕ್ಷಿಯಾಗಿ ಸಲ್ಲಿಸಿದ್ದಾರೆ.

ಏಪ್ರಿಲ್ 18 ರಂದು ಉಮಾದೇವಿ ಹಿಂತಿರುಗದ ಕಾರಣ, ಆಕೆಯ ಕುಟುಂಬವು ದೇವಸ್ಥಾನದ ಅರ್ಚಕರನ್ನು ವಿಚಾರಿಸಿದಾಗ ಅವರು ಸ್ಥಳಕ್ಕೆ ಭೇಟಿ ನೀಡಿರುವುದನ್ನು ಖಚಿತಪಡಿಸಿದ್ದರು. ಆದರೆ, ಸಿಸಿಟಿವಿ ಫೂಟೇಜ್ ನಲ್ಲಿ ಮಹಿಳೆ ದೇವಸ್ಥಾನದಿಂದ ವಾಪಸಾಗಿರುವುದು ಕಂಡುಬಂದಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...