Homeಮುಖಪುಟದೇವಾಲಯದ ಹಿಂದೆ ಮಹಿಳೆಯ ಮೃತದೇಹ ಪತ್ತೆ; ಅರ್ಚಕನೇ ಕೊಲೆಗಾರ!

ದೇವಾಲಯದ ಹಿಂದೆ ಮಹಿಳೆಯ ಮೃತದೇಹ ಪತ್ತೆ; ಅರ್ಚಕನೇ ಕೊಲೆಗಾರ!

- Advertisement -
- Advertisement -

ಹೈದರಾಬಾದ್‌: ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ದೇವಾಲಯದ ಹಿಂದಿನ ಪೊದೆಯಲ್ಲಿ ಪತ್ತೆಯಾದ ಬಳಿಕ, ಪೊಲೀಸರು ಆರೋಪಿಯನ್ನು ಹಿಡಿದಿದ್ದಾರೆ. ಮಹಿಳೆ ಆಗಾಗ್ಗೆ ಭೇಟಿ ನೀಡುತ್ತಿದ್ದ ದೇವಾಲಯವೊಂದರ ಅರ್ಚಕನೇ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

57 ವರ್ಷದ ಉಮಾದೇವಿ ಕೊಲೆಯಾದವರು. ಏಪ್ರಿಲ್ 18ರಂದು ಸಂಜೆ 6.30ಕ್ಕೆ ಎಂದಿನಂತೆ ಮಲ್ಕಾಜ್‌ಗಿರಿಯ ವಿಷ್ಣುಪುರ ಕಾಲೋನಿಯಲ್ಲಿರುವ ಸಿದ್ದಿ ವಿನಾಯಕ ದೇವಸ್ಥಾನಕ್ಕೆ ಹೋಗಿದ್ದರು. ಆದರೆ ವಾಪಸ್‌ ಮನೆಗೆ ಬಂದಿರಲಿಲ್ಲ. ನಂತರ ಉಮಾದೇವಿಯವರ ಕುಟುಂಬವು ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿತ್ತು. ನಾಪತ್ತೆಯಾಗಿರುವ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿಯೂ ಪೋಸ್ಟ್‌ ಮಾಡಲಾಗಿತ್ತು. ತದನಂತರ ದೇವಸ್ಥಾನದ ಹಿಂಭಾಗದಲ್ಲಿನ ಪೊದೆಯಲ್ಲಿ ಶವ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿಯನ್ನು 42 ವರ್ಷದ ಅನುಮುಲ ಮುರಳಿ ಕೃಷ್ಣ ಎಂದು ಗುರುತಿಸಲಾಗಿದ್ದು, ಚಿನ್ನಾಭರಣಗಳನ್ನು ಕದ್ದು ಮಾರಾಟ ಮಾಡುವ ಉದ್ದೇಶದಿಂದ ಮಹಿಳೆಯನ್ನು ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಚರಹೆಯಲ್ಲಿ “ಕಡು ಹಸಿರು ಸೀರೆ, ಕೈಗೆ ಮೂರು ಚಿನ್ನದ ಬಳೆಗಳು ಮತ್ತು ಸಣ್ಣ ಕಿವಿಯೋಲೆಗಳನ್ನು ಮಹಿಳೆ ಧರಿಸಿದ್ದಾರೆ” ತಿಳಿಸಲಾಗಿತ್ತು.

ಅರ್ಚಕನಿಂದ ಚಿನ್ನ ಖರೀದಿಸಿದ ಜೋಶಿ ನಂದ ಕಿಶೋರ್ ಎಂಬ ಆಭರಣ ವ್ಯಾಪಾರಿಯನ್ನೂ ಗುರುತಿಸಿ ಬಂಧಿಸಲಾಗಿದೆ. ಮುರಳಿ ಕೃಷ್ಣನಿಂದ ಪಡೆದ ಎರಡು ಚಿನ್ನದ ಬಳೆಗಳು, 1 ಲಕ್ಷ ರೂಪಾಯಿ ನಗದು, ಉಳಿದ ಬಳೆಗಳಿಂದ ತಯಾರಿಸಿದ 35 ಚಿನ್ನಾಭರಣಗಳನ್ನು ವ್ಯಾಪಾರಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ನಿಯಮಿತವಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು ಹಾಗೂ ಚಿನ್ನದ ಆಭರಣಗಳನ್ನು ಧರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅರ್ಚಕನಿಗೆ ಹಣಕಾಸಿನ ಸಮಸ್ಯೆ ಇದ್ದ ಕಾರಣ ಈ ಆಭರಣಗಳನ್ನು ಕದಿಯಲು ಯೋಜಿಸಿದ. ಮುರಳಿಕೃಷ್ಣ ಮಹಿಳೆಯ ತಲೆಗೆ ಕಬ್ಬಿಣದ ರಾಡ್‌ನಿಂದ ಪದೇ ಪದೇ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ಇದಲ್ಲದೆ ಮಹಿಳೆ ಸಾವನ್ನಪ್ಪಿದ್ದ ಬಳಿಕ ಆಕೆಯ ದೇಹವನ್ನು ಪ್ಲಾಸ್ಟಿಕ್ ಡ್ರಮ್‌ನಲ್ಲಿ ತುರುಕಿ, ಅದನ್ನು ಮುಚ್ಚಳದಿಂದ ಮುಚ್ಚಿದನು. ದೇವಾಲಯದಲ್ಲಿ ತಂದು ಇರಿಸಿದ್ದ ನೀರಿನಿಂದ ನೆಲವನ್ನು ಸ್ವಚ್ಛಗೊಳಿಸಿದ್ದಾನೆ. ನಂತರ ಮುರಳಿ, ಮಹಿಳೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿ ಮಾರಾಟ ಮಾಡಿದ್ದಾನೆ. ಆತ ಟ್ರಾಲಿಯಲ್ಲಿ ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯುವ ಮೂಲಕ ಶವವನ್ನು ವಿಲೇವಾರಿ ಮಾಡಲು ಪ್ರಯತ್ನಿಸಿದ್ದಾನೆ. ಆದರೆ ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಮಹಿಳೆಗಾಗಿ ಹುಡುಕಾಟ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಒಂದೇ ಕುಟುಂಬದ ಐವರ ಕೊಲೆ

“ಎರಡು ದಿನಗಳ ನಂತರ ದೇಹವು ಕೆಟ್ಟ ವಾಸನೆ ಬರಲಾರಂಭಿಸಿತು. ಆರೋಪಿಯು ಡ್ರಮ್ ಅನ್ನು ಮತ್ತೆ ದೇವಸ್ಥಾನದತ್ತ ತಂದು, ಹಿಂದಿನ ಪೊದೆಗಳಲ್ಲಿ ಬಿಸಾಡಿದನು” ಎಂದು ತನಿಖಾ ಅಧಿಕಾರಿಗಳು ತಿಳಿಸಿದ್ದಾರೆ. ಖಾಲಿ ಇದ್ದ ಡ್ರಮ್ ಅನ್ನು ಮತ್ತೆ ದೇವಸ್ಥಾನದೊಳಗೆ ತಂದು ಶುಚಿಗೊಳಿಸಿ ಮೊದಲಿನ ಜಾಗದಲ್ಲಿ ಇರಿಸಿದ್ದನು ಎನ್ನಲಾಗಿದೆ. ದುರ್ವಾಸನೆ ಬರುತ್ತಿದ್ದರಿಂದ ಮತ್ತೆ ದೇವಸ್ಥಾನದ ಒಳಭಾಗವನ್ನು ಸ್ವಚ್ಛಗೊಳಿಸಿ ಅಗರಬತ್ತಿ ಹಚ್ಚಿದ್ದಾನೆ ಎಂದು ಪೊಲೀಸ್ ಪತ್ರಿಕಾ ಹೇಳಿಕೆ ತಿಳಿಸಿದೆ.

ಎರಡು ಕಬ್ಬಿಣದ ಸರಳುಗಳು, ಒಂದು ಪ್ಲಾಸ್ಟಿಕ್ ಡ್ರಮ್ ಮತ್ತು ದೇವಾಲಯದ ನೆಲಕ್ಕೆ ಅಂಟಿದ ರಕ್ತದ ಕಲೆಗಳ ಗುರುತುಗಳನ್ನು ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ ಸಾಕ್ಷಿಯಾಗಿ ಸಲ್ಲಿಸಿದ್ದಾರೆ.

ಏಪ್ರಿಲ್ 18 ರಂದು ಉಮಾದೇವಿ ಹಿಂತಿರುಗದ ಕಾರಣ, ಆಕೆಯ ಕುಟುಂಬವು ದೇವಸ್ಥಾನದ ಅರ್ಚಕರನ್ನು ವಿಚಾರಿಸಿದಾಗ ಅವರು ಸ್ಥಳಕ್ಕೆ ಭೇಟಿ ನೀಡಿರುವುದನ್ನು ಖಚಿತಪಡಿಸಿದ್ದರು. ಆದರೆ, ಸಿಸಿಟಿವಿ ಫೂಟೇಜ್ ನಲ್ಲಿ ಮಹಿಳೆ ದೇವಸ್ಥಾನದಿಂದ ವಾಪಸಾಗಿರುವುದು ಕಂಡುಬಂದಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....