Homeಮುಖಪುಟದೇವಾಲಯದ ಹಿಂದೆ ಮಹಿಳೆಯ ಮೃತದೇಹ ಪತ್ತೆ; ಅರ್ಚಕನೇ ಕೊಲೆಗಾರ!

ದೇವಾಲಯದ ಹಿಂದೆ ಮಹಿಳೆಯ ಮೃತದೇಹ ಪತ್ತೆ; ಅರ್ಚಕನೇ ಕೊಲೆಗಾರ!

- Advertisement -
- Advertisement -

ಹೈದರಾಬಾದ್‌: ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ದೇವಾಲಯದ ಹಿಂದಿನ ಪೊದೆಯಲ್ಲಿ ಪತ್ತೆಯಾದ ಬಳಿಕ, ಪೊಲೀಸರು ಆರೋಪಿಯನ್ನು ಹಿಡಿದಿದ್ದಾರೆ. ಮಹಿಳೆ ಆಗಾಗ್ಗೆ ಭೇಟಿ ನೀಡುತ್ತಿದ್ದ ದೇವಾಲಯವೊಂದರ ಅರ್ಚಕನೇ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

57 ವರ್ಷದ ಉಮಾದೇವಿ ಕೊಲೆಯಾದವರು. ಏಪ್ರಿಲ್ 18ರಂದು ಸಂಜೆ 6.30ಕ್ಕೆ ಎಂದಿನಂತೆ ಮಲ್ಕಾಜ್‌ಗಿರಿಯ ವಿಷ್ಣುಪುರ ಕಾಲೋನಿಯಲ್ಲಿರುವ ಸಿದ್ದಿ ವಿನಾಯಕ ದೇವಸ್ಥಾನಕ್ಕೆ ಹೋಗಿದ್ದರು. ಆದರೆ ವಾಪಸ್‌ ಮನೆಗೆ ಬಂದಿರಲಿಲ್ಲ. ನಂತರ ಉಮಾದೇವಿಯವರ ಕುಟುಂಬವು ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿತ್ತು. ನಾಪತ್ತೆಯಾಗಿರುವ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿಯೂ ಪೋಸ್ಟ್‌ ಮಾಡಲಾಗಿತ್ತು. ತದನಂತರ ದೇವಸ್ಥಾನದ ಹಿಂಭಾಗದಲ್ಲಿನ ಪೊದೆಯಲ್ಲಿ ಶವ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿಯನ್ನು 42 ವರ್ಷದ ಅನುಮುಲ ಮುರಳಿ ಕೃಷ್ಣ ಎಂದು ಗುರುತಿಸಲಾಗಿದ್ದು, ಚಿನ್ನಾಭರಣಗಳನ್ನು ಕದ್ದು ಮಾರಾಟ ಮಾಡುವ ಉದ್ದೇಶದಿಂದ ಮಹಿಳೆಯನ್ನು ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಚರಹೆಯಲ್ಲಿ “ಕಡು ಹಸಿರು ಸೀರೆ, ಕೈಗೆ ಮೂರು ಚಿನ್ನದ ಬಳೆಗಳು ಮತ್ತು ಸಣ್ಣ ಕಿವಿಯೋಲೆಗಳನ್ನು ಮಹಿಳೆ ಧರಿಸಿದ್ದಾರೆ” ತಿಳಿಸಲಾಗಿತ್ತು.

ಅರ್ಚಕನಿಂದ ಚಿನ್ನ ಖರೀದಿಸಿದ ಜೋಶಿ ನಂದ ಕಿಶೋರ್ ಎಂಬ ಆಭರಣ ವ್ಯಾಪಾರಿಯನ್ನೂ ಗುರುತಿಸಿ ಬಂಧಿಸಲಾಗಿದೆ. ಮುರಳಿ ಕೃಷ್ಣನಿಂದ ಪಡೆದ ಎರಡು ಚಿನ್ನದ ಬಳೆಗಳು, 1 ಲಕ್ಷ ರೂಪಾಯಿ ನಗದು, ಉಳಿದ ಬಳೆಗಳಿಂದ ತಯಾರಿಸಿದ 35 ಚಿನ್ನಾಭರಣಗಳನ್ನು ವ್ಯಾಪಾರಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ನಿಯಮಿತವಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು ಹಾಗೂ ಚಿನ್ನದ ಆಭರಣಗಳನ್ನು ಧರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅರ್ಚಕನಿಗೆ ಹಣಕಾಸಿನ ಸಮಸ್ಯೆ ಇದ್ದ ಕಾರಣ ಈ ಆಭರಣಗಳನ್ನು ಕದಿಯಲು ಯೋಜಿಸಿದ. ಮುರಳಿಕೃಷ್ಣ ಮಹಿಳೆಯ ತಲೆಗೆ ಕಬ್ಬಿಣದ ರಾಡ್‌ನಿಂದ ಪದೇ ಪದೇ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ಇದಲ್ಲದೆ ಮಹಿಳೆ ಸಾವನ್ನಪ್ಪಿದ್ದ ಬಳಿಕ ಆಕೆಯ ದೇಹವನ್ನು ಪ್ಲಾಸ್ಟಿಕ್ ಡ್ರಮ್‌ನಲ್ಲಿ ತುರುಕಿ, ಅದನ್ನು ಮುಚ್ಚಳದಿಂದ ಮುಚ್ಚಿದನು. ದೇವಾಲಯದಲ್ಲಿ ತಂದು ಇರಿಸಿದ್ದ ನೀರಿನಿಂದ ನೆಲವನ್ನು ಸ್ವಚ್ಛಗೊಳಿಸಿದ್ದಾನೆ. ನಂತರ ಮುರಳಿ, ಮಹಿಳೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿ ಮಾರಾಟ ಮಾಡಿದ್ದಾನೆ. ಆತ ಟ್ರಾಲಿಯಲ್ಲಿ ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯುವ ಮೂಲಕ ಶವವನ್ನು ವಿಲೇವಾರಿ ಮಾಡಲು ಪ್ರಯತ್ನಿಸಿದ್ದಾನೆ. ಆದರೆ ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಮಹಿಳೆಗಾಗಿ ಹುಡುಕಾಟ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಒಂದೇ ಕುಟುಂಬದ ಐವರ ಕೊಲೆ

“ಎರಡು ದಿನಗಳ ನಂತರ ದೇಹವು ಕೆಟ್ಟ ವಾಸನೆ ಬರಲಾರಂಭಿಸಿತು. ಆರೋಪಿಯು ಡ್ರಮ್ ಅನ್ನು ಮತ್ತೆ ದೇವಸ್ಥಾನದತ್ತ ತಂದು, ಹಿಂದಿನ ಪೊದೆಗಳಲ್ಲಿ ಬಿಸಾಡಿದನು” ಎಂದು ತನಿಖಾ ಅಧಿಕಾರಿಗಳು ತಿಳಿಸಿದ್ದಾರೆ. ಖಾಲಿ ಇದ್ದ ಡ್ರಮ್ ಅನ್ನು ಮತ್ತೆ ದೇವಸ್ಥಾನದೊಳಗೆ ತಂದು ಶುಚಿಗೊಳಿಸಿ ಮೊದಲಿನ ಜಾಗದಲ್ಲಿ ಇರಿಸಿದ್ದನು ಎನ್ನಲಾಗಿದೆ. ದುರ್ವಾಸನೆ ಬರುತ್ತಿದ್ದರಿಂದ ಮತ್ತೆ ದೇವಸ್ಥಾನದ ಒಳಭಾಗವನ್ನು ಸ್ವಚ್ಛಗೊಳಿಸಿ ಅಗರಬತ್ತಿ ಹಚ್ಚಿದ್ದಾನೆ ಎಂದು ಪೊಲೀಸ್ ಪತ್ರಿಕಾ ಹೇಳಿಕೆ ತಿಳಿಸಿದೆ.

ಎರಡು ಕಬ್ಬಿಣದ ಸರಳುಗಳು, ಒಂದು ಪ್ಲಾಸ್ಟಿಕ್ ಡ್ರಮ್ ಮತ್ತು ದೇವಾಲಯದ ನೆಲಕ್ಕೆ ಅಂಟಿದ ರಕ್ತದ ಕಲೆಗಳ ಗುರುತುಗಳನ್ನು ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ ಸಾಕ್ಷಿಯಾಗಿ ಸಲ್ಲಿಸಿದ್ದಾರೆ.

ಏಪ್ರಿಲ್ 18 ರಂದು ಉಮಾದೇವಿ ಹಿಂತಿರುಗದ ಕಾರಣ, ಆಕೆಯ ಕುಟುಂಬವು ದೇವಸ್ಥಾನದ ಅರ್ಚಕರನ್ನು ವಿಚಾರಿಸಿದಾಗ ಅವರು ಸ್ಥಳಕ್ಕೆ ಭೇಟಿ ನೀಡಿರುವುದನ್ನು ಖಚಿತಪಡಿಸಿದ್ದರು. ಆದರೆ, ಸಿಸಿಟಿವಿ ಫೂಟೇಜ್ ನಲ್ಲಿ ಮಹಿಳೆ ದೇವಸ್ಥಾನದಿಂದ ವಾಪಸಾಗಿರುವುದು ಕಂಡುಬಂದಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...